Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ...

ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಡಿಯೋದ ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ. ಆದರೆ ವಿಡಿಯೋವನ್ನು ತಿರುಚಲಾಗಿದೆ.

- Advertisement -
- Advertisement -

ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಫೆಬ್ರವರಿ 26, 2019 ರಂದು ಭಾರತ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 300 ಜನ ಪಾಕಿಸ್ತಾನಿಗಳು ಸಾವನ್ನಪ್ಪಿದ್ದರು ಎಂಬುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಹತ್ತಾರು ಭಾರತೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಇದನ್ನು ಖಚಿತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಸರ್ಕಾರಿ ಮೂಲಗಳ ಆಧಾರದಲ್ಲಿ ಈ ವರದಿಯನ್ನು ಮಾಡಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ಹೇಳಿಕೊಂಡಿದ್ದವು. ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, “ಇಂತಹ ಅಪಘಾತದ ಅಂಕಿಅಂಶಗಳನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದ್ದರು.

ಈ ಸುದ್ದಿಯನ್ನು ಎಎನ್‌ಐ, ರಿಪಬ್ಲಿಕ್ ಟಿವಿ, ದಿ ಟೈಮ್ಸ್ ಆಫ್ ಇಂಡಿಯಾ, ಮನಿಕಂಟ್ರೋಲ್, ಡಬ್ಲ್ಯುಐಒಎನ್, ಹಿಂದೂಸ್ತಾನ್ ಟೈಮ್ಸ್, ಎನ್ಇ ನೌ, ಒಡಿಶಾ ಟಿವಿ, ಜಾಗ್ರಣ್, ಸ್ವರಾಜ್ಯ, ಲೋಕ್‌ಮತ್, ಒನ್‌ಇಂಡಿಯಾ, ಡೆಕ್ಕನ್ ಹೆರಾಲ್ಡ್, ಬ್ಯುಸಿನೆಸ್ ಟುಡೆ, ಲೈವ್‌ಮಿಂಟ್, ಡಿಎನ್‌ಎ, ದಿ ಕ್ವಿಂಟ್, ನ್ಯೂಸ್ 18 ಇಂಡಿಯಾ, ಎಚ್‌ಡಬ್ಲ್ಯೂ ನ್ಯೂಸ್, ಇಂಡಿಯಾ ಟುಡೆ, ಸಿಎನ್‌ಬಿಸಿ ಟಿವಿ 18, ಎಬಿಪಿ ನ್ಯೂಸ್, ಎನ್‌ಡಿಟಿವಿ, ಇಂಡಿಯಾ ಟಿವಿ ಸೇರಿದಂತೆ ಕನ್ನಡದ ವಿಜಯವಾಣಿ ಮತ್ತು ಪ್ರಜಾವಾಣಿ, ಸುವರ್ಣ ನ್ಯೂಸ್, ಟಿವಿ-9 ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದೆ. ಈ ವರದಿಗಳಲ್ಲಿ ಹಲವು ಮಧ್ಯಮಗಳು ಎಎನ್‌ಐ ಸುದ್ದಿಯನ್ನು ಉಲ್ಲೇಖಿಸಿ ವರದಿ ಮಾಡಿವೆ.

“ಬಾಲಾಕೋಟ್ ಏರ್‌ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಪಾಕ್ ನೀಡಿದೆ ಸ್ಫೋಟಕ ಮಾಹಿತಿ” ಎಂದು ವಿಜಯವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಫ್ಯಾಕ್ಟ್‌ಚೆಕ್:

ಟಿವಿಯೊಂದರ ಚರ್ಚೆಯಲ್ಲಿ ಹಿಲಾಲಿ, “ಭಾರತವು ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಯುದ್ಧ ಮಾಡಿತು. ಇದರಲ್ಲಿ ಕನಿಷ್ಠ 300 ಮಂದಿ ಸತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಆದರೆ ನಮ್ಮ ಗುರಿ ಅವರಿಗಿಂತ ಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ ಅನ್ನು ಗುರಿಯಾಗಿಸಿಕೊಂಡಿದ್ದೆವು. ಅದು ನಮ್ಮ ಕಾನೂನುಬದ್ಧ ಗುರಿಯಾಗಿತ್ತು. ಏಕೆಂದರೆ ಅವರು ಮಿಲಿಟರಿಯ ಅಧಿಕಾರಿಯಾಗಿದ್ದರು. ಸರ್ಜಿಕಲ್ ಸ್ಟ್ರೈಕ್ ಒಂದು ಸೀಮಿತ ಕ್ರಮ. ಇದು ಯಾವುದೇ ಅಪಘಾತಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಸಬ್‌ಕಾನ್ಷಿಯಸ್ ಆಗಿ ಒಪ್ಪಿಕೊಂಡಿದ್ದೇವೆ. ಈಗ ನಾವು ಅದೇ ಸಬ್‌ಕಾನ್ಷಿಯಸ್‌ನಿಂದ ಅವರಿಗೆ ಹೇಳುತ್ತಿದ್ದೇವೆ, ಅವರು ಏನು ಮಾಡುತ್ತಾರೋ ನಾವು ಅದನ್ನು ಮಾತ್ರ ಮಾಡುತ್ತೇವೆ. ಇದು ಉಲ್ಬಣಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಭಾರತೀಯ ಮಾಧ್ಯಮಗಳು ಉಲ್ಲೇಖಿಸಿದ ವೀಡಿಯೋ;

ಯೂಟ್ಯೂಬ್‌ನಲ್ಲಿ ಈ ಚರ್ಚೆಯನ್ನು ಹುಡುಕಿದಾಗ, ಈ ವೀಡಿಯೋವನ್ನು “ಅಜೆಂಡಾ ಪಾಕಿಸ್ತಾನ” ಎಂಬ ಕಾರ್ಯಕ್ರಮದ ಭಾಗವಾಗಿ HUM ಸುದ್ದಿ ಮಾಧ್ಯಮದಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. ಇಲ್ಲಿನ ಚರ್ಚೆಯ ವಿಷಯವೇನೆಂದರೆ, “ಶತ್ರುಗಳ ಶಬ್ದಕೋಶವನ್ನು ಬಳಸುವುದರ ಮೂಲಕ (ಈ ಸಂದರ್ಭದಲ್ಲಿ ಸರ್ಜಿಕಲ್ ಸ್ಟ್ರೈಕ್ ) ಪಾಕಿಸ್ತಾನ ತನ್ನದೇ ಆದ ಪ್ರಕರಣವನ್ನು ದುರ್ಬಲಗೊಳಿಸುತ್ತಿದೆಯೇ?” ಎನ್ನುವುದು. ಜಾಫರ್ ಹಿಲಾಲಿ ಈ ಪ್ರಶ್ನೆಗೆ ಸುಮಾರು 4:17 ನೇ ನಿಮಿಷದಲ್ಲಿ ಉತ್ತರಿಸಲು ಪ್ರಾರಂಭಿಸುತ್ತಾರೆ. ಸುಮಾರು 5:14 ನೇ ನಿಮಿಷದಲ್ಲಿ, “ಭಾರತ, ನೀವು ಏನು ಮಾಡಿದ್ದೀರಿ? ಇದು ಯುದ್ಧ. ಅಂತರರಾಷ್ಟ್ರೀಯ ಗಡಿಯನ್ನು ದಾಟುವ ಮೂಲಕ ಭಾರತವು ಕನಿಷ್ಠ 300 ಜನರನ್ನು ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

ಮುಂದಿನ ವಾಕ್ಯದಲ್ಲಿ 5:29 ನೇ ನಿಮಿಷದಲ್ಲಿ ಜಾಫರ್ ಹಿಲಾಲಿ ಭಾರತೀಯ ಕಾರ್ಯಾಚರಣೆ ವಿಫಲವಾಗಿದೆ ಎಂದು ಹೇಳುತ್ತಾರೆ. “ಕಾಕತಾಳೀಯವೆಂಬಂತೆ ಅವರು ಸಾಯಲಿಲ್ಲ (ಪಾಕಿಸ್ತಾನಿ ಜನರು). ಆದರೆ ಭಾರತವು ಫುಟ್ಬಾಲ್ ಮೈದಾನಕ್ಕೆ ಬಾಂಬ್ ಸ್ಫೋಟಿಸಿತು” ಎಂದು ಹೇಳಿದ್ದಾರೆ.

ವಾಸ್ತವದಲ್ಲಿ, ಈ ಭಾಗದ ವೀಡಿಯೋ ವೈರಲ್ ಆಗುವ ಮೊದಲು ಪಾಕಿಸ್ತಾನದ 300 ಜನರನ್ನು ಕೊಲ್ಲುವ ಭಾರತದ ಉದ್ದೇಶದ ಬಗ್ಗೆ ಹಿಲಾಲಿ ಮಾತನಾಡುತ್ತಿದ್ದರು.

ಸುಮಾರು 4:30 ನೇ ನಿಮಿಷಗಳಲ್ಲಿ ಅವರು ಹೀಗೆ ಹೇಳುತ್ತಾರೆ, “300 ಮಕ್ಕಳು ಅಧ್ಯಯನ ಮಾಡುತ್ತಿರುವ ಮದರಸಾದಲ್ಲಿ ದಾಳಿ ಮಾಡುವುದು ನಿಮ್ಮ ಉದ್ದೇಶವಾಗಿತ್ತು ಎಂದು ಹೇಳಲಾಗುತ್ತದೆ. ಇದರರ್ಥ 300 ಜನರನ್ನು ಕೊಲ್ಲುವುದು ನಿಮ್ಮ ಉದ್ದೇಶವಾಗಿತ್ತು ಎಂಬುದು. ಆದರೆ ಅವರು ಅಲ್ಲಿ ಇರಲಿಲ್ಲ. ಭಾರತಕ್ಕೆ ಸಿಕ್ಕಿದ ಮಾಹಿತಿ ತಪ್ಪಾಗಿದೆ. ಹಾಗಾಗಿ ಅದು ಸರ್ಜಿಕಲ್ ಸ್ಟ್ರೈಕ್ ಆಗಲಿಲ್ಲ. ನಿಮ್ಮ ಬಾಂಬ್ ಅನ್ನು ಫುಟ್ಬಾಲ್ ಮೈದಾನದಲ್ಲಿ ಎಸೆದಿದ್ದೀರಿ” ಎಂದು ಹೇಳಿದ್ದಾರೆ.

ಹಾಗಾಗಿ ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ ಎಂಬುದು ವಿಡಿಯೋದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಪ್ರತಿಪಾದನೆಯ ಮೂಲ:

ಯಾವುದೇ ಮಾಧ್ಯಮ ಸಂಸ್ಥೆಗಳು ತಮ್ಮ ವರದಿಗಳಲ್ಲಿ ಮೂಲ ವೀಡಿಯೊವನ್ನು ಉಲ್ಲೇಖಿಸಿಲ್ಲ. ಆದರೆ ರಿಪಬ್ಲಿಕ್ ಮತ್ತು ಎನ್ಇ ನೌ ಟ್ವಿಟರ್ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊವನ್ನು ಎಂಬೆಡ್ ಮಾಡಿದೆ. ನಾವು ಮೂಲ ವೀಡಿಯೊವನ್ನು ರಿಪಬ್ಲಿಕ್ ಎಂಬೆಡ್ ಮಾಡಿದ ವೀಡಿಯೊದೊಂದಿಗೆ ಹೋಲಿಸಿದರೆ, 7 ರಿಂದ 9 ನೇ ಸೆಕೆಂಡುಗಳಲ್ಲಿ ಎಡಿಟ್ ಮಾಡಿರುವುದು ಕಂಡುಬರುತ್ತದೆ. “ಮರ್ನಾ (ಕೊಲ್ಲಲು)” ಎಂಬ ಪದವು “ಮಾರ (ಕೊಲ್ಲಲ್ಪಟ್ಟರು)” ಎಂದು ಹಿಲಾಲಿ ಹೇಳಿದಂತೆ ಭಾಸವಾಗುತ್ತದೆ. ‘ಎನ್’ ಉಚ್ಚಾರಣೆಯನ್ನು ಎಡಿಟ್ ಮಾಡಲಾಗಿದೆ.

 

ಮೇಲಿನ ಪ್ರತಿಪಾದನೆಯ ನಂತರ ಅವರ ಹೇಳಿಕೆಯನ್ನು ವೈರಲ್ ಕ್ಲಿಪ್‌ನಲ್ಲಿ ತೆಗೆದುಹಾಕಲಾಗಿದೆ. ಭಾರತದ ಕಾರ್ಯಾಚರಣೆ ವಿಫಲವಾಗಿದೆ ಮತ್ತು ವಾಯುಪಡೆಯು ಫುಟ್ಬಾಲ್ ಮೈದಾನದ ಮೇಲೆ ಬಾಂಬ್ ಸ್ಫೋಟಿಸಿತು ಎಂದು ಹಿಲಾಲಿ ಹೇಳುತ್ತಾರೆ.

ಇದಲ್ಲದೆ, ವೈರಲ್ ವೀಡಿಯೊವನ್ನು ತಲೆಕೆಳಗಾಗಿ ಮತ್ತು ಸ್ಕ್ರೀನ್-ರೆಕಾರ್ಡ್ ಮಾಡಲಾಗಿದೆ. ಮೂಲ ವೀಡಿಯೊ ಬಾಲಕೋಟ್‌ನ ಹಾನಿಗೊಳಗಾದ ಮರಗಳನ್ನು ತೋರಿಸುತ್ತದೆ ಮತ್ತು ತಿರುಚಿರುವ ವೀಡಿಯೊ ಮಿಲಿಟರಿ ಕ್ಯಾಂಪ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೋರಿಸುತ್ತದೆ. ತಿರುಚಿದ ವೀಡಿಯೊವು ಫಲಕದಲ್ಲಿರುವ ಜನರ ಹೆಸರನ್ನು ಸಹ ಒಳಗೊಂಡಿರುವುದಿಲ್ಲ ಮತ್ತು ಮೂಲ ವೀಡಿಯೊದಲ್ಲಿನ ಬಿಳಿ ಬಾರ್ಡರ್ ಇದೆ. ಆದರೆ ತಿರುಚಿದ ವೀಡಿಯೋದಲ್ಲಿ ಬಾರ್ಡರ್ ಗುಲಾಬಿ ಬಣ್ಣದ್ದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ತನ್ನ ಹೇಳಿಕೆಯನ್ನು ಎಡಿಟ್ ಮಾಡಲಾಗಿದೆ ಎಂದು ಸ್ವತಃ ಜಾಫರ್ ಹಿಲಾಲಿ ದೃಢಪಡಿಸಿದ್ದಾರೆ.

ಭಾರತದ ವೈಮಾನಿಕ ದಾಳಿಯು ಬಾಲಕೋಟ್‌ನಲ್ಲಿ 300 ಜನರನ್ನು ಕೊಂದಿದೆ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಒಪ್ಪಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುಳ್ಳು ವರದಿ ಮಾಡಿವೆ. ಆದರೆ ಈ ವರದಿಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾದ ತಿರುಚಿದ ವೀಡಿಯೋಗಳನ್ನು ಬಳಸಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...