Homeಮುಖಪುಟಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಪ್ರಧಾನಿಯ ಅನಧಿಕೃತ ಖಾತೆಗೆ ಬ್ಲೂಟಿಕ್ ನೀಡಿದ ’ಟೂಟರ್‌’!

ಆದರೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌‌ನಲ್ಲಿ ಅವರನ್ನೇ ಫಾಲೋ ಮಾಡುತ್ತಿದ್ದಾರೆ.

- Advertisement -
- Advertisement -

ಟ್ವಿಟ್ಟರ್‌ ಮಾದರಿಯ ಮೈಕ್ರೋಬ್ಲಾಂಗಿಗ್‌‌ ಸಾಮಾಜಿಕ ಜಾಲತಾಣವಾದ ಟೂಟರ್‌ನಲ್ಲಿ‌ ಪ್ರಧಾನಿ ಮೋದಿಯ ನಕಲಿ ಖಾತೆಯನ್ನು ತೆರೆಯಲಾಗಿದೆ ಎನ್ನಲಾಗಿದ್ದು, ಈ ಖಾತೆಗೆ ಟೂಟರ್ ಅಧಿಕೃತ ಎಂದು ತಿಳಿಸುವ ಬ್ಲೂಟಿಕ್ ನೀಡಿದೆ. ಆದರೆ ಈ ಬಗ್ಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಸ್ಪಷ್ಟನೆ ನೀಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಟೂಟರ್‌ನಲ್ಲಿ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.

ಟೂಟರ್‌ ತನ್ನನ್ನು ತಾನು “ಸ್ವದೇಶಿ ಸಾಮಾಜಿಕ ಜಾಲತಾಣ” ಎಂದು ಬಣ್ಣಿಸುತ್ತದೆ. ಅದರಲ್ಲಿ, ಪ್ರಧಾನಿ ನರೇಂದ್ರ ಮೋದಿಯದ್ದೆಂದು ಹೇಳಲಾಗಿರುವ ಬ್ಲೂಟಿಕ್ ಹೊಂದಿರುವ ಖಾತೆಯಿದೆ. ಅದರಲ್ಲಿ ಪ್ರಧಾನಿಯ ಚಿತ್ರ ಹಾಗೂ ಪೋಸ್ಟ್‌ಗಳನ್ನು ಹಂಚಲಾಗಿದೆ. ಆದರೆ, ಟೂಟರ್ ತನ್ನ ಬಳಕೆದಾರರನ್ನು ಹೇಗೆ ಪರಿಶೀಲಿಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರ ಆರ್ಕೈವ್ ಇಲ್ಲಿದೆ. 

ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವೀಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳ ನಾಯಕರು ಫಾಲೋ ಮಾಡುತ್ತಿದ್ದಾರೆ.

“ಬಿಜೆಪಿಯ ಯಾವುದೇ ರಾಜ್ಯ ಘಟಕಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಟೂಟರ್‌ನಲ್ಲಿ ಇಲ್ಲ ಎಂಬುದನ್ನು ದಯವಿಟ್ಟು ಗಮನಿಸಿ” ಎಂದು ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಮಧ್ಯಾಹ್ನ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಅಮಿತ್ ಮಾಳವಿಯ ಟ್ವೀಟ್‌ಗೆ ಬಿಜೆಪಿಯ ಮತ್ತೊಬ್ಬ ವಕ್ತಾರ ಸುರೇಶ್ ನಖುವಾ ಕೂಡಾ ಧ್ವನಿ ಸೇರಿಸಿದ್ದಾರೆ. “ಅಮಿತ್‌ ಮಾಳವಿಯ ಅವರು ಗಣ್ಯರು ಟೂಟರ್‌‌ನಲ್ಲಿ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಈಗ ಈ ಬಗ್ಗೆ ಟೂಟರ್ ಸ್ಪಷ್ಟಪಡಿಸಬೇಕು. 1) ಯಾರ ಅನುಮತಿಯೊಂದಿಗೆ ಈ ಹ್ಯಾಂಡಲ್‌‌ಗಳನ್ನು ಮಾಡಲಾಗಿದೆ? 2) ಈ ಹ್ಯಾಂಡಲ್‌ಗಳನ್ನು ಹೇಗೆ ಪರಿಶೀಲಿಸಲಾಗಿದೆ? 3) ಈ ಹ್ಯಾಂಡಲ್‌ಗಳಿಗೆ ಯಾರು ಪೋಸ್ಟ್ ಮಾಡುತ್ತಿದ್ದಾರೆ ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ತಮಾಷೆಯೆಂದರೆ ”ಟೂಟರ್ ಜಾಲತಾಣದ”‌ನ ಟ್ವಿಟ್ಟರ್‌‌ ಖಾತೆಯನ್ನು ಪ್ರಧಾನಿ ಕಚೇರಿ, ಪ್ರಧಾನಿಯ ವೈಯಕ್ತಿಕ ಖಾತೆ, ಅಮಿತ್‌ ಶಾ, ಬಿಜೆಪಿಯ ಖಾತೆ, ಸಂಸದ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೆಲವು ಬಲಪಂಥಿಯ ವೆಬ್‌ಸೈಟ್‌ಗಳು ಫಾಲೋ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಅದರ ಸಿಇಒ ಎಂದು ಹೇಳಿಕೊಳ್ಳುವ ’ನಂದ’ ಅವರ ಟ್ವಿಟ್ಟರ್‌ ಖಾತೆಯನ್ನು ಕೂಡಾ ಅಮಿತ್‌ ಶಾ, ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹಾಗೂ ಬಲಪಂಥೀಯರು ಫಾಲೋ ಮಾಡುತ್ತಿದ್ದಾರೆ. ಅದರ ಆಕೈವ್ ಇಲ್ಲಿದೆ.‌

ಇದರ ಆರ್ಕೈವ್ ಇಲ್ಲಿದೆ.

ಕಳೆದ ವಾರ ಅಮೆರಿಕ ಸಂಸತ್ತಿನ ಮೇಲೆ ದಾಳಿ ನಡೆದು ಅಲ್ಲಿ ಹಿಂಸಾಚಾರವಾದ ನಂತರ ಟ್ವಿಟ್ಟರ್‌ ಗಲಭೆಗೆ ಟ್ರಂಪ್ ಪ್ರಚೋಚನೆ ನೀಡಿದ್ದಾರೆ ಎಂದು ಎಂದು ಹೇಳಿ ಅವರ ಟ್ವಿಟ್ಟರ್‌ ಖಾತೆಯನ್ನು ಶಾಶ್ವತವಾಗಿ ನಿಷೇಧ ಹೇರಿತ್ತು. ಇದಕ್ಕೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಹಲವು ನಾಯಕರು ಟ್ವಿಟ್ಟರ್‌ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಪ್ರತಿಯೊಬ್ಬರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲು ಖಾಸಗಿ ಕಂಪನಿಗಳಿಗೆ ಟೆಂಡರ್ ಕರೆದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...