Homeಮುಖಪುಟದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ದಿಲ್ಲಿಯಲ್ಲಿ ನಾನುಗೌರಿ: ಭಾರತದ ವೈವಿಧ್ಯತೆಯ ಸಾಕ್ಷಾತ್‌ ದರ್ಶನ ನೀಡಿದ ಶಹಜಾಹ್‌ಪುರ್ ಪ್ರತಿಭಟನಾ ಸ್ಥಳ..!

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼದ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ.

- Advertisement -
- Advertisement -

ರೈತ ಪ್ರತಿಭಟನೆಯಲ್ಲಿ ಕಳೆದ 7 ದಿನಗಳಿಂದ ತೊಡಗಿಸಿಕೊಂಡಿರುವ ನನಗೆ ಈ ಶಹಜಾಹ್‌ಪುರ್‌ ಎಂಬ ಪ್ರತಿಭಟನಾ ಸ್ಥಳ ನಾನು ಕಾಣದ ಭಾರತದ ಮುಕ್ಕಾಲು ರಾಜ್ಯಗಳ ದರ್ಶನ ಮಾಡಿಸಿದೆ. ಎಲ್ಲಾ ರೀತಿಯ ಎಲ್ಲಾ ಧರ್ಮಗಳ ಜನರು, ಅವರ ಆಹಾರ, ಸಂಸ್ಕೃತಿ, ವೈವಿದ್ಯ ಉಡುಪುಗಳು ಜೊತೆಗೆ ಹಲವು ಭಾಷೆಗಳಿಂದ ಕೂಡಿದ ಭಾರತದ ವೈವಿಧ್ಯತೆಯನ್ನು ಕಣ್ಣೆದುರಿಗೆ ತೆರೆಸಿತು.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ಕೇವಲ ಪಂಜಾಬ್‌ ಮತ್ತು ಹರಿಯಾಣ ರೈತರದ್ದು ಎಂದು ವದಂತಿ ಹಬ್ಬಿಸುವ ಜನರಿಗೆ ಕಪಾಳಮೋಕ್ಷ ಮಾಡುವಂತೆ ಈ ಶಹಜಾಹನ್‌ಪುರದ ಪ್ರತಿಭಟನಾ ಸ್ಥಳವಿದೆ.

ತಿಂಗಳ ಹಿಂದೆಯೇ ರಾಜಸ್ಥಾನ-ದೆಹಲಿ ಹೆದ್ದಾರಿಯಲ್ಲಿ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಾಗ ಇಲ್ಲಿ ಪೊಲೀಸರು ಅವರನ್ನು ತಡೆದರು. ನಂತರ ಆ ರೈತರೆಲ್ಲ ಇಲ್ಲೇ ಟಿಕಾಣಿ ಹೂಡಿದ್ದಾರೆ. ರಾಜಸ್ಥಾನ, ಗುಜರಾತ್‌, ಹರಿಯಾಣ, ಮಧ್ಯಪ್ರದೇಶ, ಕೇರಳ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳ ರೈತರು ಇಲ್ಲಿ ಜಮೆಯಾಗಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಇಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದರೂ ಹಲವಾರು ಸಂಘಟನೆಗಳು ಇದರಲ್ಲಿ ಭಾಗವಹಿಸಿವೆ. ಎಡ ಸಂಘಟನೆಗಳು ಪ್ರಮುಖ ಪಾತ್ರ ವಹಿಸಿರುವ ಈ ಶಹಜಾಹ್‌ಪುರ್‌ ಪ್ರತಿಭಟನೆಯಲ್ಲಿ, ಹರಿಯಾಣ, ರಾಜಸ್ಥಾನದ ಕಾರ್ಮಿಕ ಸಂಘಟನೆಗಳು, ಆದಿವಾಸಿ ಸಂಘಟನೆಗಳು, ದಲಿತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಭಾಗವಹಿಸಿ ಬೆಂಬಲ ನೀಡಿವೆ.

ಜಮ್ಮು ಕಾಶ್ಮಿರದಿಂದ ಬಂದಿರುವ ಆಲ್‌ ಇಂಡಿಯಾ ಕಿಸಾನ್‌ ಸಭಾದ ರೈತ ನಾಯಕರು ಪ್ರತಿಭಟನೆಯಲ್ಲಿ ರ್ಯಾಲಿಗಳನ್ನು ನಡೆಸಿ, ಪ್ರತಿ ದಿನ ಮೂರರಿಂದ ನಾಲ್ಕು ಬಾರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ನಿರತ ರೈತರಲ್ಲಿ ಹುಮ್ಮಸ್ಸು ತುಂಬುತ್ತಿವೆ. ಜಮ್ಮ ಕಾಶ್ಮೀರದ ರೈತರು ಹೋರಾಟದಲ್ಲಿ ಭಾಗವಹಿಸಿರುವ ಕಾರಣ ಕೇಂದ್ರ ಸರ್ಕಾರ ಇಲ್ಲಿ ಅತೀ ಹೆಚ್ಚಿನ ಭದ್ರತೆಗೆ ಒತ್ತು ನೀಡಿದೆ. ಪ್ರತಿಭಟನಾ ಸ್ಥಳದಲ್ಲಿ ಬ್ಲಾಕ್‌ ಕಮಾಂಡೋ ಪಡೆಯನ್ನು ನಿಯೋಜಿಸಿದೆ.

ಇತ್ತ ಬಿಹಾರ ಮತ್ತು ರಾಜಸ್ಥಾನ ಗಡಿಯಲ್ಲಿರುವ ಡಂಗರ್‌ಪುರ್ ಗ್ರಾಮದ ಆದಿವಾಸಿ ಜನಾಂಗ ಇಡೀ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ರೈತರಿದ್ದರೇ ನಾವು ಎನ್ನುವ ಇವರು, ನಾವು ರೈತರೆ ಇದು ಒಬ್ಬರ ಪ್ರತಿಭಟನೆಯಲ್ಲ, ದೇಶದ ಎಲ್ಲಾ ಜನರ ಪ್ರತಿಭಟನೆ ಎಂದು ಹೇಳಿದ್ದಾರೆ.

ರಾಜಸ್ಥಾನ ʼರಾಷ್ಟ್ರೀಯ ಮೂಲನಿವಾಸಿಗಳ ಸಂಘʼ ಈ ಪ್ರತಿಭಟನೆಯಲ್ಲಿ ಉಪವಾಸ ಕೂರುವ ಮೂಲಕ ರೈತರಿಗೆ ತಮ್ಮ ಬೆಂಬಲ ನೀಡಿದೆ. ಸಂಘಟನೆಯ ಕಾರ್ಯಕರ್ತರು ಪ್ರತಿದಿನ 15 ಜನರಂತೆ 24 ಗಂಟೆಗಳ ಉಪವಾಸ ಆಚರಿಸುತ್ತಿದ್ದಾರೆ. ದಲಿತ ಹಕ್ಕುಗಳಿಗಾಗಿ ಈ ಭಾಗದಲ್ಲಿ ಹೋರಾಡುವ ಈ ಸಂಘಟನೆ ಈಗ ರೈತರ ಜೊತೆ ನಿಂತು ನಾವು ರೈತರ ಮಕ್ಕಳು ಎಂದಿದೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಶಹಾಜಾನ್‌ಪುರ್‌ದಲ್ಲಿ ಎರಡು ವಿಭಾಗಗಳಾಗಿ ರೈತ ತಂಡಗಳು ವಿಭಜನೆಗೊಂಡಿವೆ. ದೆಹಲಿಗೆ ತಲುಪುವ ನಿಟ್ಟಿನಲ್ಲಿ ಹೊರಟ ಮೊದಲ ತಂಡ ದೆಹಲಿ – ಹರಿಯಾಣ ಮಾರ್ಗದ ದಾರುಹೇರಾದಲ್ಲಿ ಪೊಲೀಸರಿಂದ ತಡೆಗೆ ಒಳಗಾಗಿ ಅಲ್ಲಿ ಸುಮಾರು 50 ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿಕೊಂಡು ಧರಣಿ ನಡೆಸುತ್ತಿದ್ದಾರೆ.
ಇನ್ನೊಂದು ವಿಭಾಗ ರಾಜಸ್ಥಾನ-ಹರಿಯಾಣ-ದೆಹಲಿ ಮಾರ್ಗದ ಶಹಾಜಾನ್‌ಪುರದಲ್ಲಿ ಉಳಿದುಕೊಂಡಿದೆ.

ಹಿಂದೂ, ಮುಸ್ಲಿಂ, ಸಿಖ್‌, ಕ್ರಿಶ್ಚಿಯನ್‌ ಎನ್ನದೇ ಎಲ್ಲಾ ಧರ್ಮದ ರೈತರು ಇಲ್ಲಿ ನೆಲೆಸಿದ್ದಾರೆ. ಜನವರಿ 26ರ ಟ್ರ್ಯಾಕ್ಟರ್‌ ಮಾರ್ಚ್‌ಗೆ ಇಲ್ಲಿನ ಪ್ರತಿಭಟನಾ ನಿರತ ರೈತರು ಸಕಲ ಸಿದ್ಧತೆ ನಡೆಸುತ್ತಿದ್ದು, ಅಂದು ರಾಜಸ್ಥಾನದಿಂದ ಸುಮಾರು 500 ಹೊಸ ಟ್ರ್ಯಾಕ್ಟರ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

  • ಮಮತ ಎಂ.

ಇದನ್ನೂ ಓದಿ: ಕೃಷಿ ಕಾಯ್ದೆಗಳು & ರೈತ ಹೋರಾಟದ ಕುರಿತು ಇಂದು ಸುಪ್ರೀಂ ಕೋರ್ಟ್‌‌ನಲ್ಲಿನ ವಾದ-ವಿವಾದ ಹೀಗಿತ್ತು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...