Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...