Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...