Homeಮುಖಪುಟರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಸೋನಾ ಮಸೂರಿ ಭತ್ತಕ್ಕೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ನಂತರ ಮೊದಲು ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ರಿಲಾಯನ್ಸ್ ರಿಟೈಲ್ ಲಿಮಿಟೆಡ್ ವತಿಯಿಂದ MSP (ಕನಿಷ್ಟ ಬೆಂಬಲ ಬೆಲೆ) ಗಿಂತಲೂ ಅಧಿಕ ಬೆಲೆಗೆ 1000 ಕ್ವಿಂಟಾಲ್ ಭತ್ತ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ಸರ್ಕಾರ 1868ರೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ ರಿಲಾಯನ್ಸ್ 1950ರೂಗೆ (82 ರೂ ಅಧಿಕ) ಸುಮಾರು 1100 ರೈತರಿಂದ ಭತ್ತ ಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿಯನ್ನು ಸಂಪೂರ್ಣ ಸುಳ್ಳು ಎಂದು ರೈತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. “ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಖರೀದಿ ಎಂಬುದು ದೊಡ್ಡ ಪ್ರಹಸನವಾಗಿದೆ. ಎಂಎಸ್‌ಪಿ ಇರುವುದು ಸಾಮಾನ್ಯ ಮತ್ತು ಗ್ರೇಡ್ ಎ ಭತ್ತಕ್ಕಾಗಿ ಮಾತ್ರ. ಸೋನಾ ಮಸೂರಿಗೆ ತೆಲಂಗಾಣ ರೈತರು ಕ್ವಿಂಟಾಲ್‌ಗೆ 2200 ರಿಂದ 2500 ರೂ ಪಡೆಯುತ್ತಿದ್ದಾರೆ. ಬಾಸ್ಮತಿ, ಗೋಬಿಂದಭಾಗ್ ಸೋನಾ ಮಸೂರಿಯಂತಹ ಸೂಪರ್ ಫೈನ್ ವೆರೈಟಿಗಳಿಗೆ ಎಂಎಸ್‌ಪಿ ಅರ್ಥಹೀನ” ಎಂದು ಆಲ್‌ ಇಂಡಿಯಾ ಕಿಸಾನ್ ಸಭಾ ಟ್ವೀಟ್ ಮಾಡಿದೆ.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್‍ ಮಾತನಾಡಿ “ಇದು ರೈತರನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೋನಾ ಮಸೂರಿಗಾಗಲಿ ಅಥವಾ ಜ್ಯೋತಿ ಭತ್ತಕ್ಕಾಗಲಿ ಇದುವರೆಗೂ ಕೇಂದ್ರ ಸರ್ಕಾರ MSP ನಿಗಧಿ ಮಾಡಿಲ್ಲ. ಅದಕ್ಕಾಗಿ ನಾವು ಬಹಳ ವರ್ಷಗಳಿಂದ ಒತ್ತಾಯ ಮಾಡುತ್ತಿದ್ದೇವೆ. ಆ ಹಿನ್ನೆಲೆಯಲ್ಲಿ ಇದನ್ನು ಮರೆ ಮಾಚಿ ತಪ್ಪು ಸಂದೇಶಗಳನ್ನು ಕೊಡುತ್ತಿದ್ದಾರೆ. ಇದನ್ನು ರೈತರು ನಂಬಬಾರದು ಮತ್ತು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಬೇಕು” ಎಂದಿದ್ದಾರೆ.

ಚಿಂತಕರಾದ ಸುರೇಶ್ ಕಂಜರ್ಪಣೆಯವರು ಈ ಕುರಿತು ವಿವರವಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. “ಇದೊಂದು ಡೋಲು ಹೊಡೆಯುವ ಖದೀಮ ಸುದ್ದಿ ನೋಡಿ! ರಿಲಯನ್ಸ್ ಕರ್ನಾಟಕದ ರೈತರಿಂದ ಎಂಎಸ್ ಪಿಗಿಂತ ಹೆಚ್ಚಿನ ಬೆಲೆಗೆ ರೈತರ ಉತ್ಪಾದಕ ಸಂಘದಿಂದ ನೇರವಾಗಿ ಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ವಾಸ್ತವವಾಗಿ ನೋಡುವುದಾದರೆ ರಿಲಾಯನ್ಸ್ ರೈತರಿಂದ ಕೊಳ್ಳುತ್ತಿರುವುದು ಕೇವಲ ನೂರು ಟನ್ ಮಾತ್ರ. ಇನ್ನು ಸೋನಾ ಮುಸ್ಸೋರಿತಳಿ, ಸೂಪರ್ ಫೈನ್ ವೆರೈಟಿ, ಇದನ್ನು ಸರಕಾರ ಕೊಳ್ಳುವುದಿಲ್ಲ! ಮಾಮೂಲಿಯಾಗಿ ಇದಕ್ಕೆ ಎಂಎಸ್ ಪಿಗಿಂತ ಹೆಚ್ಚಿನ ಬೆಲೆ ದೊರಕುತ್ತಿದೆ” ಎಂದಿದ್ದಾರೆ.

ಕರ್ನಾಟಕದ ಭತ್ತದ ಉತ್ಪಾದನೆ 30 ಲಕ್ಷ ಟನ್. ಇದರಲ್ಲಿ ರಾಯಚೂರಿನ ಪಾಲು ಐದು ಲಕ್ಷ ಟನ್. ಅಂದರೆ ಈ ರಿಲಯನ್ಸ್ ಕೊಳ್ಳುತ್ತಿರುವ ಪ್ರಮಾಣ ಒಂದು ಕೂದಲ ತೂಕ!!! ಈ ಪುಟಗೋಸಿ ಪ್ರಮಾಣವನ್ನು ಸಾವಿರ ರೈತರಿಂದ ಕೊಳ್ಳುತ್ತಿದೆ ಅಂದರೆ ತಲಾವಾರು ಎಷ್ಟು ಕ್ವಿಂಟಾಲ್ ಆಯಿತು? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಚೌಕಿದಾರನ ಕಾಯಿದೆ ವಿರೋದಿಸುವುದಕ್ಕೆ ಕಾರಣ ಇಲ್ಲೇ ಇದೆ. ರೈತರು ಸಾಗಣೆ, ಲೋಡಿಂಗ್ ಅನ್ ಲೋಡಿಂಗ್ ವೆಚ್ಚ ಭರಿಸಬೇಕು. ತೇವಾಂಶ 16%ಕ್ಕಿಂತ ಕಡಿಮೆ ಇದ್ದರೆ ಮಾತ್ರ ಖರೀದಿ. ಉಳಿದ ಸಾವಿರಾರು ಟನ್ ಭತ್ತವನ್ನು ಏನು ಮಾಡಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಂಧನೂರು ಎಪಿಎಂಸಿ ವ್ಯವಸ್ಥಾಪಕರನ್ನು ಮಾತನಾಡಿಸಿದಾಗ, “ನಮ್ಮಲ್ಲಿ ಸಾಮಾನ್ಯ ಭತ್ತ ಮತ್ತು ಎ ಗ್ರೇಡ್ ಭತ್ತ ಎಂಬ ಎರಡು ವಿಭಾಗಗಳನ್ನು ಮಾಡುತ್ತೇವೆ. ಸೋನಾ ಮಸೂರಿ ಸಾಮಾನ್ಯ ಭತ್ತದಲ್ಲಿ ಬರುತ್ತದೆ. ಅದಕ್ಕೆ ಕೇಂದ್ರ ಸರ್ಕಾರ 1868ರೂ ನಿಗಧಿ ಮಾಡಿದೆ. ಅದರ ತೇವಾಂಶ 17% ಗಿಂತ ಕಡಿಮೆ ಇರಬೇಕು” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೃಷಿ ಕಾಯ್ದೆಗಳು ಜಾರಿಯಾದಾಗಿನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ನಡುವೆ ಅಂಬಾನಿ-ಅದಾನಿಯಂತಹ ಕಾರ್ಪೊರೇಟ್‌ಗಳ ಹಿತಕ್ಕಾಗಿ ಈ ಕಾಯ್ದೆಗಳನ್ನು ತರಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

(ಈ ಲೇಖನವನ್ನು ಸೋನಾ ಮಸೂರಿ ಭತ್ತಕ್ಕೆ ಬೆಂಬಲ ಬೆಲೆ ಇದೆಯೇ ಇಲ್ಲವೇ ಎಂಬುದರ ಕುರಿತು ರೈತ ಮುಖಂಡರ ನಡುವೆ ಉಂಟಾದ ಗೊಂದಲದಿಂದಾಗಿ ನಂತರ ಪರಿಷ್ಕರಣೆ ಮಾಡಲಾಗಿದೆ)


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...