Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...