Homeಮುಖಪುಟ220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

- Advertisement -
- Advertisement -

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ? ಹಿಂದಿರುವವರು ಯಾರು?

ಚಾನೆಲ್‍ಗಳು ಮಾತ್ರ ಅಂಬಾನಿಯದ್ದಲ್ಲ; ಕೇಬಲ್ ಸಹಾ ರಿಲೆಯನ್ಸ್‍ ದೇ. ಅಪಾಯಕಾರಿ ಬೆಳವಣಿಗೆಗೆ ನಾಂದಿ

ಮಂಡ್ಯದಲ್ಲಿ ಸುಮಲತಾ ನಾಮಪತ್ರ ಸಲ್ಲಿಸಿದ ದಿನ ಸ್ಥಳೀಯವಾಗಿ ಜೆಡಿಎಸ್‍ನ ಪ್ರಭಾವದಿಂದಾಗಿ ಕೇಬಲ್ ಟಿವಿ ಕೆಲಸ ಮಾಡದಂತೆ ಮಾಡಲಾಯಿತು ಎಂಬ ಒಂದು ಆರೋಪವಿದೆ. ಆದರೆ, ಮುಖೇಶ್ ಅಂಬಾನಿಯ ಬೆಂಬಲಕ್ಕೆ ನಿಂತಿರುವ ಬಿಜೆಪಿ ಪಕ್ಷದ ವಿರುದ್ಧ ಯಾವುದಾದರೂ ಚಾನೆಲ್ ಸುದ್ದಿ ಮಾಡಿದರೆ, ಆ ಚಾನೆಲ್ಲೇ ಬರದಂತೆ ನೋಡಿಕೊಳ್ಳುವ ಸಂಭವ ತೆರೆದುಕೊಂಡಿದೆ. ಅದು ಹೇಗೆಂಬುದನ್ನು ನೋಡೋಣ.

200 ರೂ. ಆಸುಪಾಸಿನಷ್ಟು ಖರ್ಚು ಮಾಡಿ ನೂರಾರು ಚಾನೆಲ್‍ಗಳನ್ನು ಪಡೆದುಕೊಳ್ಳುತ್ತಿದ್ದ ದಿನಗಳು ಈಗ ಇಲ್ಲ. ಕೆಲವು ಕಾಲದ ನಂತರ ಇದು ಯಾವ ಸ್ವರೂಪ ತೆಗೆದುಕೊಳ್ಳಲಿದೆ ಎಂಬುದನ್ನೂ ಹೇಳಲಾಗದು. ಹಿಂದೆಯೂ ಉಚಿತ ಚಾನೆಲ್‍ಗಳು ಮತ್ತು ಹಣ ಕೊಟ್ಟು ಕೊಳ್ಳಬೇಕಾದ ಚಾನೆಲ್‍ಗಳಿದ್ದವು. ಆದರೆ, ಅವೆಲ್ಲಾ ಸಾಮಾನ್ಯ ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ. ಏಕೆಂದರೆ, ಕೇಬಲ್ ಮೂಲಕ ಸೇವೆ ಒದಗಿಸುತ್ತಿದ್ದ ಆಪರೇಟರ್‍ಗಳು ಅವನ್ನೆಲ್ಲಾ ಮಾಡಿ, ಇಂತಿಷ್ಟು ಹಣಕ್ಕೆ ಇಷ್ಟು ಚಾನೆಲ್ ಎಂಬ ಪ್ಯಾಕೇಜ್‍ನೊಂದಿಗೆ ಒದಗಿಸುತ್ತಿದ್ದರು.
ಆದರೆ, ಈಗೆರಡು ತಿಂಗಳ ಹಿಂದೆ ಕೆಲವು ಉಚಿತ ಚಾನೆಲ್‍ಗಳನ್ನು ಬಿಟ್ಟರೆ ತಮಗೆ ಬೇಕಾದ ಮನರಂಜನೆ ಅಥವಾ ಸುದ್ದಿ ಚಾನೆಲ್‍ಗಳಿಗೆ ಪ್ರತ್ಯೇಕವಾಗಿ ಇಂತಿಷ್ಟು ಶುಲ್ಕವೆಂದು ಪಾವತಿಸಬೇಕೆಂದು ಸೂಚಿಸಲಾಗಿತ್ತು. ಇದರಿಂದ ಬಹುತೇಕ ಎಲ್ಲಾ ಚಾನೆಲ್‍ಗಳನ್ನು ನೋಡುತ್ತಿದ್ದ ಗ್ರಾಹಕರಿಗೆ ಗೊಂದಲವುಂಟಾಯಿತು. ಪ್ರತೀ ಮನೆಯಲ್ಲೂ ಬೇರೆ ಬೇರೆ ಆಸಕ್ತಿಗಳ ಸದಸ್ಯರಿರುತ್ತಾರಾದ್ದರಿಂದ, ಎಲ್ಲರಿಗೂ ಬೇಕಾದ ಸೀಮಿತ ಚಾನೆಲ್‍ಗಳಿಗೂ ಹಿಂದಿಗಿಂತ 150 ರೂ ಹೆಚ್ಚು ಕೊಡಬೇಕು. ಇದು ಇನ್ನೂ ಹೆಚ್ಚಾಗಬಹುದೇ ಹೊರತು ಕಡಿಮೆಯಾಗದು. ಇನ್ನು ಸ್ವಲ್ಪ ಹೆಚ್ಚು ಚಾನೆಲ್‍ಗಳು ಬೇಕೆಂದರೆ, ದುಪ್ಪಟ್ಟು ಬೆಲೆ ನೀಡಬೇಕಾದಂತಹ ಪರಿಸ್ಥಿತಿ ಏಕೆ ತಲೆದೋರಿತು? ಇದರ ಲಾಭ ಯಾರಿಗೆ ಆಗಬಹುದು ಎಂಬುದನ್ನು ನೋಡೋಣ.

ಎಲ್ಲರಿಗೂ ತಿಳಿದಿರುವಂತೆ ಬಹಳ ಹಿಂದೆ ಮನೆ ಮನೆಗೆ ಕೇಬಲ್ ಎಳೆದು ವಿವಿಧ ಚಾನೆಲ್‍ಗಳಲ್ಲದೇ, ಕೇಬಲ್‍ನವರೇ ಸಿನೆಮಾ ಸಹಾ ತೋರಿಸುತ್ತಿದ್ದರು. ಈ ರೀತಿ ಕೇಬಲ್ ಜಾಲ ವಿಸ್ತರಿಸಲು ಬಹಳ ದೊಡ್ಡ ಪೈಪೋಟಿಯೇ ನಡೆದಿದೆ. ಕೇಬಲ್ ಮಾಫಿಯಾ ಎಂದೆಲ್ಲಾ ಅದನ್ನು ಕರೆಯಲಾಗುತ್ತಿತ್ತು. ಆದರೆ, ಕಂಬ, ಮರಗಳು, ಮನೆಯ ಮೇಲಿನ ಕೊಕ್ಕೆಗಳು ಎಲ್ಲಕ್ಕೂ ಸಿಕ್ಕಿಸಿ ಮನೆಯಿಂದ ಮನೆಗೆ ತೆಗೆದುಕೊಂಡು ಹೋಗಿ ಎಲ್ಲಾ ಕಡೆ ಈ ಮಾರುಕಟ್ಟೆ ಸೃಷ್ಟಿ ಮಾಡಿದ್ದರಲ್ಲಿ ಸಣ್ಣ ಆಪರೇಟರ್‍ಗಳ ಪಾಲು ದೊಡ್ಡದು. ನಂತರ ಅವು ‘ಮಾಫಿಯಾ’ಗಳ ಹಿಡಿತಕ್ಕೆ, ರಾಜಕಾರಣಿಗಳ ಹಿಡಿತಕ್ಕೆ ಹೋಯಿತು.

ಆ ನಂತರ ಸಿಟಿ ಕೇಬಲ್, ಹಾಥ್‍ವೇ ಮತ್ತು ಡೆನ್‍ಗಳೆಂಬ ಎಂಎಸ್‍ಓ (ಮಲ್ಟಿ ಸರ್ವೀಸ್ ಆಪರೇಟರ್)ಗಳು ತಲೆಯೆತ್ತಿದವು. ಇವು ಸ್ಥಳೀಯ ಅಗತ್ಯಗಳೂ ಇದ್ದುದರಿಂದ ಲೋಕಲ್ ಆಪರೇಟರ್‍ಗಳನ್ನೂ ಸಣ್ಣ ಪಾಲುದಾರರನ್ನಾಗಿ ಉಳಿಸಿಕೊಂಡು, ಬೃಹತ್ತಾಗಿ ಬೆಳೆದವು. ಶೇ.10ರಿಂದ ಶೇ.50ರವರೆಗೆ ತಮ್ಮ ಷೇರುಗಳನ್ನು ಉಳಿಸಿಕೊಂಡ ಲಕ್ಷಾಂತರ ಸಣ್ಣ ಆಪರೇಟರ್‍ಗಳು ಒಂದಲ್ಲಾ ಒಂದು ಎಂಎಸ್‍ಓ ಜೊತೆಗೆ ಸೇರಲೇಬೇಕಾಯಿತು.

ಅಂದ ಹಾಗೆ ಈ ಡೆನ್ ಯಾರದ್ದು?
ಸಮೀರ್ ಮಂಚಂಡ ಮತ್ತು ರಾಘವ್ ಬೆಹ್ಲ್ ಇಬ್ಬರೂ ಪಾಲುದಾರರಾಗಿದ್ದ ಕಾಲದಿಂದಲೂ ಡೆನ್ ಬೆಳೆಯುತ್ತಾ, ಹಿಂದಿ ರಾಜ್ಯಗಳಲ್ಲೆಲ್ಲಾ ವ್ಯಾಪಿಸಿತು. ಸಿಎನ್‍ಎನ್ ಐಬಿಎನ್ ಹುಟ್ಟಿ ಹಾಕಿದ್ದ ರಾಘವ್ ಬೆಹ್ಲ್ ನಂತರ ಅದನ್ನು ಅಂಬಾನಿಗೆ ಮಾರಿದರು. ಅದರ ಜೊತೆಗೆ ಕೇಬಲ್ ಜಾಲದ ತಮ್ಮ ಷೇರುಗಳನ್ನೂ. ಇನ್ನು ಮಂಚಂಡ, ರಿಪಬ್ಲಿಕ್ ಟಿವಿಯಲ್ಲೂ ಪಾಲುದಾರಿಕೆ ಹೊಂದಿದ್ದ. ಅರ್ನಬ್ ಗೋಸ್ವಾಮಿ ರಿಪಬ್ಲಿಕ್ ಶುರು ಮಾಡಿದಾಗ ಕೇಬಲ್ ಜಾಲವನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯೋಜನೆಯೊಂದಿಗೇ ಹೊರಟಿದ್ದು.

ಆದರೆ, ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಡೆನ್ ಮತ್ತು ಹಾಥ್‍ವೇ ಎರಡರ ಮೇಲೂ ಸಂಪೂರ್ಣ ಹಿಡಿತ ಸಾಧಿಸಿರುವುದು ಆರ್‍ಐಜಿ – ಅಂದರೆ ರಿಲೆಯನ್ಸ್ ಇಂಡಸ್ಟ್ರೀಸ್ ಗ್ರೂಪ್.
ಟಿವಿ – 18 ಕೊಂಡ ನಂತರ, ಈ ಟಿವಿ ಸಮೂಹದ ಬಹುತೇಕ ಚಾನೆಲ್‍ಗಳನ್ನು ಮುಖೇಶ್ ಅಂಬಾನಿ ಒಡೆತನದ ರಿಲೆಯನ್ಸ್ ಕಂಪೆನಿಯೇ ಕೊಂಡಿತ್ತು. ಇಷ್ಟಲ್ಲದೇ ನಷ್ಟದಲ್ಲಿರುವ ಝೀ ಟಿವಿ ಸಮೂಹವನ್ನು ಕೊಳ್ಳಲೂ ಸಹಾ ಅಂಬಾನಿ ಹಾಗೂ ಭಾರ್ತಿ ಮಿತ್ತಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಟಿವಿ ಚಾನೆಲ್ಲೂ ಅಂಬಾನಿಯದ್ದೇ, ಕೇಬಲ್ ನೆಟ್‍ವರ್ಕ್ ಸಹಾ ಅವರದ್ದೇ ಆದರೆ ಏನಾಗಬಹುದು?

ಮೋದಿ ಸರ್ಕಾರದ ತಪ್ಪುಗಳು/ಹಗರಣಗಳನ್ನು ಬಯಲಿಗೆಳೆಯುತ್ತಿದ್ದ ಎಬಿಪಿ ಚಾನೆಲ್‍ಅನ್ನು ಮಣಿಸಲು ಸರ್ಕಾರ ಏನು ಮಾಡಿತೆಂಬುದನ್ನು ನಾವು ನೋಡಿದ್ದೇವೆ. ಸರ್ಕಾರೀ ಜಾಹೀರಾತುಗಳನ್ನು ನಿಲ್ಲಿಸುವುದು, ಸಿಗ್ನಲ್ ಸಹಾ ಇಲ್ಲದಂತೆ ಮಾಡುವುದು ಇತ್ಯಾದಿಗಳ ಮೂಲಕ ಎಬಿಪಿ ನ್ಯೂಸ್ ಶರಣಾಗಿ ಬಿಜೆಪಿಯ ಮುಂದೆ ಮಂಡಿಯೂರಬೇಕಾಯಿತು. ಅದರ ಪ್ರಸಿದ್ಧ ಸಂಪಾದಕ ಪುಣ್ಯಪ್ರಸೂನ್ ವಾಜಪೇಯಿ ಅವರನ್ನು ಕಿತ್ತೊಗೆಯಬೇಕಾಯಿತು. ಕಿತ್ತೊಗೆದ ಮರುದಿನದಿಂದಲೇ ‘ಎಲ್ಲವೂ ಸರಿಹೋಯಿತು’.

ಹೀಗಿದ್ದ ಮೇಲೆ ಮುಂದೆ ಸರ್ಕಾರಗಳು ಅಂಬಾನಿಯ ಮುಂದೆ ಮಂಡಿಯೂರಬೇಕಾಗಬಹುದು. ಏಕೆಂದರೆ, ತಮ್ಮ ವಿರುದ್ಧ ಸುದ್ದಿ ಪ್ರಸರಣ ಮಾಡುವ ಇತರ ಮಾಧ್ಯಮಗಳ ಮೇಲೂ ಹಿಡಿತ ಹೊಂದುವ ಅಂಬಾನಿ, ಸರ್ಕಾರಕ್ಕೇ ಸವಾಲು ಹಾಕಬಹುದು. ಇವೆಲ್ಲದರ ಕುರಿತು ಟ್ರಾಯ್ 2008ರಲ್ಲೇ ಎಚ್ಚರಿಸಿತ್ತು. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕೇಬಲ್ ನಿರ್ವಹಣೆಯಲ್ಲಿ ದೊಡ್ಡ ಕಾರ್ಪೋರೇಟ್ ಏಕಸ್ವಾಮ್ಯಕ್ಕೆ ದಾರಿ ಮಾಡಿಕೊಟ್ಟರೆ ಆಗುವ ದುಷ್ಟರಿಣಾಮಗಳು ಗಂಭೀರವಾಗಿರುತ್ತದೆ. ಜನರ ಮನೋಲೋಕವನ್ನು ಹಿಡಿದಿಡುವ, ನಿರ್ಬಂಧಿಸುವ ಕೆಲಸವನ್ನು ಈಗಾಗಲೇ ಮಾಡುತ್ತಿರುವ ದೃಶ್ಯ ಮಾಧ್ಯಮಗಳು ಈ ಚಾಲದ ಮಾಲೀಕರ ಹಿತಾಸಕ್ತಿಗೆ ತಕ್ಕಂತೆ ದುಡಿಯಲಾರಂಭಿಸುತ್ತದೆ.

ಏಕಸ್ವಾಮ್ಯ ಸಾಧಿಸಿದ ಮೇಲೆ ಜನರಿಗೆ ಉಚಿತವಾಗಿ ಚಾನೆಲ್ ನೀಡುವ ಅಗತ್ಯವಿಲ್ಲ. ಎಲ್ಲಕ್ಕೂ ಹಣ ನಿಗದಿ ಮಾಡಿ ಹೆಚ್ಚಿಸುತ್ತಾ ಹೋದರೆ ಸಾಕು. ಮನರಂಜನೆ ಮತ್ತು ಸುದ್ದಿಯೂ ಮಾರುವ ಸರಕಾಗಿರುವಾಗ ಇದೇನು ಮಹಾ ಅಲ್ಲವೇ? ಆ ಧೈರ್ಯದಿಂದಲೇ ಚುನಾವಣೆ 4-5 ತಿಂಗಳಿರುವಾಗಲೇ ಸರ್ಕಾರದ ಕುಮ್ಮಕ್ಕಿನೊಂದಿಗೆ ಕೇಬಲ್ ಚಾನೆಲ್‍ಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಯಿತು.
ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿಯಾದುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...