Homeಮುಖಪುಟ220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ?

- Advertisement -
- Advertisement -

220 ರೂ ಇದ್ದ ಕೇಬಲ್ ಬಿಲ್ 400 ರೂ ದಾಟುತ್ತಿರುವುದೇಕೆ? ಇದರ ಲಾಭ ಯಾರಿಗೆ? ಹಿಂದಿರುವವರು ಯಾರು?

ಚಾನೆಲ್‍ಗಳು ಮಾತ್ರ ಅಂಬಾನಿಯದ್ದಲ್ಲ; ಕೇಬಲ್ ಸಹಾ ರಿಲೆಯನ್ಸ್‍ ದೇ. ಅಪಾಯಕಾರಿ ಬೆಳವಣಿಗೆಗೆ ನಾಂದಿ

ಮಂಡ್ಯದಲ್ಲಿ ಸುಮಲತಾ ನಾಮಪತ್ರ ಸಲ್ಲಿಸಿದ ದಿನ ಸ್ಥಳೀಯವಾಗಿ ಜೆಡಿಎಸ್‍ನ ಪ್ರಭಾವದಿಂದಾಗಿ ಕೇಬಲ್ ಟಿವಿ ಕೆಲಸ ಮಾಡದಂತೆ ಮಾಡಲಾಯಿತು ಎಂಬ ಒಂದು ಆರೋಪವಿದೆ. ಆದರೆ, ಮುಖೇಶ್ ಅಂಬಾನಿಯ ಬೆಂಬಲಕ್ಕೆ ನಿಂತಿರುವ ಬಿಜೆಪಿ ಪಕ್ಷದ ವಿರುದ್ಧ ಯಾವುದಾದರೂ ಚಾನೆಲ್ ಸುದ್ದಿ ಮಾಡಿದರೆ, ಆ ಚಾನೆಲ್ಲೇ ಬರದಂತೆ ನೋಡಿಕೊಳ್ಳುವ ಸಂಭವ ತೆರೆದುಕೊಂಡಿದೆ. ಅದು ಹೇಗೆಂಬುದನ್ನು ನೋಡೋಣ.

200 ರೂ. ಆಸುಪಾಸಿನಷ್ಟು ಖರ್ಚು ಮಾಡಿ ನೂರಾರು ಚಾನೆಲ್‍ಗಳನ್ನು ಪಡೆದುಕೊಳ್ಳುತ್ತಿದ್ದ ದಿನಗಳು ಈಗ ಇಲ್ಲ. ಕೆಲವು ಕಾಲದ ನಂತರ ಇದು ಯಾವ ಸ್ವರೂಪ ತೆಗೆದುಕೊಳ್ಳಲಿದೆ ಎಂಬುದನ್ನೂ ಹೇಳಲಾಗದು. ಹಿಂದೆಯೂ ಉಚಿತ ಚಾನೆಲ್‍ಗಳು ಮತ್ತು ಹಣ ಕೊಟ್ಟು ಕೊಳ್ಳಬೇಕಾದ ಚಾನೆಲ್‍ಗಳಿದ್ದವು. ಆದರೆ, ಅವೆಲ್ಲಾ ಸಾಮಾನ್ಯ ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ. ಏಕೆಂದರೆ, ಕೇಬಲ್ ಮೂಲಕ ಸೇವೆ ಒದಗಿಸುತ್ತಿದ್ದ ಆಪರೇಟರ್‍ಗಳು ಅವನ್ನೆಲ್ಲಾ ಮಾಡಿ, ಇಂತಿಷ್ಟು ಹಣಕ್ಕೆ ಇಷ್ಟು ಚಾನೆಲ್ ಎಂಬ ಪ್ಯಾಕೇಜ್‍ನೊಂದಿಗೆ ಒದಗಿಸುತ್ತಿದ್ದರು.
ಆದರೆ, ಈಗೆರಡು ತಿಂಗಳ ಹಿಂದೆ ಕೆಲವು ಉಚಿತ ಚಾನೆಲ್‍ಗಳನ್ನು ಬಿಟ್ಟರೆ ತಮಗೆ ಬೇಕಾದ ಮನರಂಜನೆ ಅಥವಾ ಸುದ್ದಿ ಚಾನೆಲ್‍ಗಳಿಗೆ ಪ್ರತ್ಯೇಕವಾಗಿ ಇಂತಿಷ್ಟು ಶುಲ್ಕವೆಂದು ಪಾವತಿಸಬೇಕೆಂದು ಸೂಚಿಸಲಾಗಿತ್ತು. ಇದರಿಂದ ಬಹುತೇಕ ಎಲ್ಲಾ ಚಾನೆಲ್‍ಗಳನ್ನು ನೋಡುತ್ತಿದ್ದ ಗ್ರಾಹಕರಿಗೆ ಗೊಂದಲವುಂಟಾಯಿತು. ಪ್ರತೀ ಮನೆಯಲ್ಲೂ ಬೇರೆ ಬೇರೆ ಆಸಕ್ತಿಗಳ ಸದಸ್ಯರಿರುತ್ತಾರಾದ್ದರಿಂದ, ಎಲ್ಲರಿಗೂ ಬೇಕಾದ ಸೀಮಿತ ಚಾನೆಲ್‍ಗಳಿಗೂ ಹಿಂದಿಗಿಂತ 150 ರೂ ಹೆಚ್ಚು ಕೊಡಬೇಕು. ಇದು ಇನ್ನೂ ಹೆಚ್ಚಾಗಬಹುದೇ ಹೊರತು ಕಡಿಮೆಯಾಗದು. ಇನ್ನು ಸ್ವಲ್ಪ ಹೆಚ್ಚು ಚಾನೆಲ್‍ಗಳು ಬೇಕೆಂದರೆ, ದುಪ್ಪಟ್ಟು ಬೆಲೆ ನೀಡಬೇಕಾದಂತಹ ಪರಿಸ್ಥಿತಿ ಏಕೆ ತಲೆದೋರಿತು? ಇದರ ಲಾಭ ಯಾರಿಗೆ ಆಗಬಹುದು ಎಂಬುದನ್ನು ನೋಡೋಣ.

ಎಲ್ಲರಿಗೂ ತಿಳಿದಿರುವಂತೆ ಬಹಳ ಹಿಂದೆ ಮನೆ ಮನೆಗೆ ಕೇಬಲ್ ಎಳೆದು ವಿವಿಧ ಚಾನೆಲ್‍ಗಳಲ್ಲದೇ, ಕೇಬಲ್‍ನವರೇ ಸಿನೆಮಾ ಸಹಾ ತೋರಿಸುತ್ತಿದ್ದರು. ಈ ರೀತಿ ಕೇಬಲ್ ಜಾಲ ವಿಸ್ತರಿಸಲು ಬಹಳ ದೊಡ್ಡ ಪೈಪೋಟಿಯೇ ನಡೆದಿದೆ. ಕೇಬಲ್ ಮಾಫಿಯಾ ಎಂದೆಲ್ಲಾ ಅದನ್ನು ಕರೆಯಲಾಗುತ್ತಿತ್ತು. ಆದರೆ, ಕಂಬ, ಮರಗಳು, ಮನೆಯ ಮೇಲಿನ ಕೊಕ್ಕೆಗಳು ಎಲ್ಲಕ್ಕೂ ಸಿಕ್ಕಿಸಿ ಮನೆಯಿಂದ ಮನೆಗೆ ತೆಗೆದುಕೊಂಡು ಹೋಗಿ ಎಲ್ಲಾ ಕಡೆ ಈ ಮಾರುಕಟ್ಟೆ ಸೃಷ್ಟಿ ಮಾಡಿದ್ದರಲ್ಲಿ ಸಣ್ಣ ಆಪರೇಟರ್‍ಗಳ ಪಾಲು ದೊಡ್ಡದು. ನಂತರ ಅವು ‘ಮಾಫಿಯಾ’ಗಳ ಹಿಡಿತಕ್ಕೆ, ರಾಜಕಾರಣಿಗಳ ಹಿಡಿತಕ್ಕೆ ಹೋಯಿತು.

ಆ ನಂತರ ಸಿಟಿ ಕೇಬಲ್, ಹಾಥ್‍ವೇ ಮತ್ತು ಡೆನ್‍ಗಳೆಂಬ ಎಂಎಸ್‍ಓ (ಮಲ್ಟಿ ಸರ್ವೀಸ್ ಆಪರೇಟರ್)ಗಳು ತಲೆಯೆತ್ತಿದವು. ಇವು ಸ್ಥಳೀಯ ಅಗತ್ಯಗಳೂ ಇದ್ದುದರಿಂದ ಲೋಕಲ್ ಆಪರೇಟರ್‍ಗಳನ್ನೂ ಸಣ್ಣ ಪಾಲುದಾರರನ್ನಾಗಿ ಉಳಿಸಿಕೊಂಡು, ಬೃಹತ್ತಾಗಿ ಬೆಳೆದವು. ಶೇ.10ರಿಂದ ಶೇ.50ರವರೆಗೆ ತಮ್ಮ ಷೇರುಗಳನ್ನು ಉಳಿಸಿಕೊಂಡ ಲಕ್ಷಾಂತರ ಸಣ್ಣ ಆಪರೇಟರ್‍ಗಳು ಒಂದಲ್ಲಾ ಒಂದು ಎಂಎಸ್‍ಓ ಜೊತೆಗೆ ಸೇರಲೇಬೇಕಾಯಿತು.

ಅಂದ ಹಾಗೆ ಈ ಡೆನ್ ಯಾರದ್ದು?
ಸಮೀರ್ ಮಂಚಂಡ ಮತ್ತು ರಾಘವ್ ಬೆಹ್ಲ್ ಇಬ್ಬರೂ ಪಾಲುದಾರರಾಗಿದ್ದ ಕಾಲದಿಂದಲೂ ಡೆನ್ ಬೆಳೆಯುತ್ತಾ, ಹಿಂದಿ ರಾಜ್ಯಗಳಲ್ಲೆಲ್ಲಾ ವ್ಯಾಪಿಸಿತು. ಸಿಎನ್‍ಎನ್ ಐಬಿಎನ್ ಹುಟ್ಟಿ ಹಾಕಿದ್ದ ರಾಘವ್ ಬೆಹ್ಲ್ ನಂತರ ಅದನ್ನು ಅಂಬಾನಿಗೆ ಮಾರಿದರು. ಅದರ ಜೊತೆಗೆ ಕೇಬಲ್ ಜಾಲದ ತಮ್ಮ ಷೇರುಗಳನ್ನೂ. ಇನ್ನು ಮಂಚಂಡ, ರಿಪಬ್ಲಿಕ್ ಟಿವಿಯಲ್ಲೂ ಪಾಲುದಾರಿಕೆ ಹೊಂದಿದ್ದ. ಅರ್ನಬ್ ಗೋಸ್ವಾಮಿ ರಿಪಬ್ಲಿಕ್ ಶುರು ಮಾಡಿದಾಗ ಕೇಬಲ್ ಜಾಲವನ್ನೂ ಹಿಡಿತಕ್ಕೆ ತೆಗೆದುಕೊಳ್ಳುವ ಯೋಜನೆಯೊಂದಿಗೇ ಹೊರಟಿದ್ದು.

ಆದರೆ, ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಡೆನ್ ಮತ್ತು ಹಾಥ್‍ವೇ ಎರಡರ ಮೇಲೂ ಸಂಪೂರ್ಣ ಹಿಡಿತ ಸಾಧಿಸಿರುವುದು ಆರ್‍ಐಜಿ – ಅಂದರೆ ರಿಲೆಯನ್ಸ್ ಇಂಡಸ್ಟ್ರೀಸ್ ಗ್ರೂಪ್.
ಟಿವಿ – 18 ಕೊಂಡ ನಂತರ, ಈ ಟಿವಿ ಸಮೂಹದ ಬಹುತೇಕ ಚಾನೆಲ್‍ಗಳನ್ನು ಮುಖೇಶ್ ಅಂಬಾನಿ ಒಡೆತನದ ರಿಲೆಯನ್ಸ್ ಕಂಪೆನಿಯೇ ಕೊಂಡಿತ್ತು. ಇಷ್ಟಲ್ಲದೇ ನಷ್ಟದಲ್ಲಿರುವ ಝೀ ಟಿವಿ ಸಮೂಹವನ್ನು ಕೊಳ್ಳಲೂ ಸಹಾ ಅಂಬಾನಿ ಹಾಗೂ ಭಾರ್ತಿ ಮಿತ್ತಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಟಿವಿ ಚಾನೆಲ್ಲೂ ಅಂಬಾನಿಯದ್ದೇ, ಕೇಬಲ್ ನೆಟ್‍ವರ್ಕ್ ಸಹಾ ಅವರದ್ದೇ ಆದರೆ ಏನಾಗಬಹುದು?

ಮೋದಿ ಸರ್ಕಾರದ ತಪ್ಪುಗಳು/ಹಗರಣಗಳನ್ನು ಬಯಲಿಗೆಳೆಯುತ್ತಿದ್ದ ಎಬಿಪಿ ಚಾನೆಲ್‍ಅನ್ನು ಮಣಿಸಲು ಸರ್ಕಾರ ಏನು ಮಾಡಿತೆಂಬುದನ್ನು ನಾವು ನೋಡಿದ್ದೇವೆ. ಸರ್ಕಾರೀ ಜಾಹೀರಾತುಗಳನ್ನು ನಿಲ್ಲಿಸುವುದು, ಸಿಗ್ನಲ್ ಸಹಾ ಇಲ್ಲದಂತೆ ಮಾಡುವುದು ಇತ್ಯಾದಿಗಳ ಮೂಲಕ ಎಬಿಪಿ ನ್ಯೂಸ್ ಶರಣಾಗಿ ಬಿಜೆಪಿಯ ಮುಂದೆ ಮಂಡಿಯೂರಬೇಕಾಯಿತು. ಅದರ ಪ್ರಸಿದ್ಧ ಸಂಪಾದಕ ಪುಣ್ಯಪ್ರಸೂನ್ ವಾಜಪೇಯಿ ಅವರನ್ನು ಕಿತ್ತೊಗೆಯಬೇಕಾಯಿತು. ಕಿತ್ತೊಗೆದ ಮರುದಿನದಿಂದಲೇ ‘ಎಲ್ಲವೂ ಸರಿಹೋಯಿತು’.

ಹೀಗಿದ್ದ ಮೇಲೆ ಮುಂದೆ ಸರ್ಕಾರಗಳು ಅಂಬಾನಿಯ ಮುಂದೆ ಮಂಡಿಯೂರಬೇಕಾಗಬಹುದು. ಏಕೆಂದರೆ, ತಮ್ಮ ವಿರುದ್ಧ ಸುದ್ದಿ ಪ್ರಸರಣ ಮಾಡುವ ಇತರ ಮಾಧ್ಯಮಗಳ ಮೇಲೂ ಹಿಡಿತ ಹೊಂದುವ ಅಂಬಾನಿ, ಸರ್ಕಾರಕ್ಕೇ ಸವಾಲು ಹಾಕಬಹುದು. ಇವೆಲ್ಲದರ ಕುರಿತು ಟ್ರಾಯ್ 2008ರಲ್ಲೇ ಎಚ್ಚರಿಸಿತ್ತು. ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ ಮತ್ತು ಕೇಬಲ್ ನಿರ್ವಹಣೆಯಲ್ಲಿ ದೊಡ್ಡ ಕಾರ್ಪೋರೇಟ್ ಏಕಸ್ವಾಮ್ಯಕ್ಕೆ ದಾರಿ ಮಾಡಿಕೊಟ್ಟರೆ ಆಗುವ ದುಷ್ಟರಿಣಾಮಗಳು ಗಂಭೀರವಾಗಿರುತ್ತದೆ. ಜನರ ಮನೋಲೋಕವನ್ನು ಹಿಡಿದಿಡುವ, ನಿರ್ಬಂಧಿಸುವ ಕೆಲಸವನ್ನು ಈಗಾಗಲೇ ಮಾಡುತ್ತಿರುವ ದೃಶ್ಯ ಮಾಧ್ಯಮಗಳು ಈ ಚಾಲದ ಮಾಲೀಕರ ಹಿತಾಸಕ್ತಿಗೆ ತಕ್ಕಂತೆ ದುಡಿಯಲಾರಂಭಿಸುತ್ತದೆ.

ಏಕಸ್ವಾಮ್ಯ ಸಾಧಿಸಿದ ಮೇಲೆ ಜನರಿಗೆ ಉಚಿತವಾಗಿ ಚಾನೆಲ್ ನೀಡುವ ಅಗತ್ಯವಿಲ್ಲ. ಎಲ್ಲಕ್ಕೂ ಹಣ ನಿಗದಿ ಮಾಡಿ ಹೆಚ್ಚಿಸುತ್ತಾ ಹೋದರೆ ಸಾಕು. ಮನರಂಜನೆ ಮತ್ತು ಸುದ್ದಿಯೂ ಮಾರುವ ಸರಕಾಗಿರುವಾಗ ಇದೇನು ಮಹಾ ಅಲ್ಲವೇ? ಆ ಧೈರ್ಯದಿಂದಲೇ ಚುನಾವಣೆ 4-5 ತಿಂಗಳಿರುವಾಗಲೇ ಸರ್ಕಾರದ ಕುಮ್ಮಕ್ಕಿನೊಂದಿಗೆ ಕೇಬಲ್ ಚಾನೆಲ್‍ಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಲಾಯಿತು.
ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾರಿಯಾದುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...