Homeಚಳವಳಿರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ.

- Advertisement -
- Advertisement -

ಭಾನುವಾರ ಪ್ರತಿಭಟನಾ ನಿರತ ರೈತರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ “ಕಿಸಾನ್ ಮಹಾಪಂಚಾಯತ್” ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿ ವೇದಿಕೆಯನ್ನು ಪುಡಿಗಟ್ಟಿದ್ದರು. ಇದರಂದ ತೀವ್ರ ಒತ್ತಡಕ್ಕೆ ಒಳಗಾಗಿರುವ ಖಟ್ಟರ್ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಸೇರಿದಂತೆ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಉನ್ನತ ನಾಯಕರು ರಾಜ್ಯದ ರಾಜಕೀಯ ಸನ್ನಿವೇಶದ ಕುರಿತು ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ.

ಸಭೆಯು ನವದೆಹಲಿಯಲ್ಲಿ ಮಂಗಳವಾರ(ಇಂದು) ನಡೆಯಲಿದೆ. ಆದರೆ ಅದಕ್ಕೂ ಮುನ್ನ ದುಶ್ಯಂತ್ ಚೌತಾಲಾ ಜೆಜೆಪಿ ಶಾಸಕರೊಂದಿಗೆ ದೆಹಲಿಯ ತಮ್ಮ ತೋಟದ ಮನೆಯಲ್ಲಿ ಸಭೆ ನಡೆಸಲಿದ್ದಾರೆ. ಎಲ್ಲಾ ಜೆಜೆಪಿ ಶಾಸಕರಿಗೆ ಮಂಗಳವಾರ ರಾಜಧಾನಿಗೆ ಬರಲು ತಿಳಿಸಲಾಗಿದೆ.

ಕಳೆದ ಒಂದೂವರೆ ತಿಂಗಳಿನಿಂದ ಹರಿಯಾಣ ರಾಜಕೀಯದಲ್ಲಿ ರೈತರ ಆಂದೋಲನ ಮೇಲುಗೈ ಸಾಧಿಸುತ್ತಿದೆ. ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಶಾಸಕರನ್ನು ಮೈತ್ರಿಕೂಟದಲ್ಲಿ ಉಳಿಸಿಕೊಳ್ಳುವ ಪ್ರಯತ್ನವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸೋಮವಾರದಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಆಡಳಿತರೂಢ ಒಕ್ಕೂಟದ ಹಲವಾರು ಶಾಸಕರು ಒಕ್ಕೂಟವನ್ನು ತ್ಯಜಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಮಧ್ಯೆ ಈ ಸಭೆ ನಡೆಯುತ್ತಿದೆ. 90 ಸದಸ್ಯ ಬಲವಿರುವ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಗೆ 40 ಸ್ಥಾನಗಳಿದ್ದರೆ, ಜೆಜೆಪಿಯಲ್ಲಿ 10 ಶಾಸಕರಿದ್ದಾರೆ. ಅಲ್ಲದೆ ಏಳು ಪಕ್ಷೇತರ ಶಾಸಕರಲ್ಲಿ ಐವರು ಸರ್ಕಾರದ ಪರವಾಗಿದ್ದಾರೆ.

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ. ರೈತರು ಕಪ್ಪು ಧ್ವಜಗಳನ್ನು ಪ್ರದರ್ಶನ ಮಾಡುವುದು, ವಾಹನಗಳನ್ನು ಬೆನ್ನಟ್ಟುವುದು, ಹೆಲಿಪ್ಯಾಡ್‌ಗಳಿಗೆ ಹಾನಿ ಮಾಡುವುದು ಸೇರಿದಂತೆ ಅಂತಹ ಸಭೆಗಳ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಭಾನುವಾರ ಕರ್ನಾಲ್ ಗ್ರಾಮದಲ್ಲಿ ಯಾವುದೇ ತೊಂದರೆಯಾಗದಂತೆ ಸಭೆ ನಡೆಯಲು ಸರ್ಕಾರಿ ಯಂತ್ರಾಂಗದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅಲ್ಲಿಗೆ ರೈತರು ನುಗ್ಗಿ ವೇದಿಕೆಯನ್ನು ಪುಡಿಗಟ್ಟಿರುವುದುರಿಂದ ಸರ್ಕಾರವು ಆತಂಕಕ್ಕೊಳಗಾಗಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ರಾಜ್ಯದಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬಿಜೆಪಿ-ಜೆಜೆಪಿ ನಾಯಕರು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಟ್ಟರ್ ಮತ್ತು ದುಶ್ಯಂತ್ ಅವರಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧಂಕರ್, ರಾಜ್ಯ ಶಿಕ್ಷಣ ಸಚಿವ ಕನ್ವರ್ ಪಾಲ್ ಗುಜ್ಜರ್ ಮತ್ತು ಜೆಜೆಪಿ ರಾಜ್ಯ ಅಧ್ಯಕ್ಷ ನಿಶಾನ್ ಸಿಂಗ್ ಅವರು ನಿಯೋಗದಲ್ಲಿ ಇರಲಿದ್ದಾರೆ ಎಂದು ಅದು ವರದಿ ಮಾಡಿದೆ.

ನಿನ್ನೆಯಷ್ಟೇ, ಪಕ್ಷೇತರ ಶಾಸಕ ರಾಜ್ಯ ವಿದ್ಯುತ್ ಸಚಿವ ರಂಜಿತ್ ಚೌತಾಲಾ ಅವರ ನಿವಾಸದಲ್ಲಿ ಮೈತ್ರಿ ಸರ್ಕಾರವನ್ನು ಬೆಂಬಲಿಸುವ ಐದು ಪಕ್ಷೇತರ ಶಾಸಕರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದ್ದರು.

ಈ ಮಧ್ಯೆ ಐಎನ್ಎಲ್ಡಿ ನಾಯಕ ಅಭಯ್ ಚೌತಲಾ ಸೋಮವಾರ ವಿಧಾನಸಭೆ ಸ್ಪೀಕರ್‌ಗೆ ಪತ್ರವೊಂದನ್ನು ಬರೆದು, ಜನವರಿ 26 ರೊಳಗೆ ಸರ್ಕಾರವು ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಈ ಪತ್ರವನ್ನೇ ರಾಜೀನಾಮೆ ಎಂದು ಪರಿಗಣಿಸುವಂತೆ ಕೇಳಿಕೊಂಡಿದ್ದಾರೆ. ತಮ್ಮನ್ನು ತಾವು ರೈತ ನಾಯಕ ಎಂದು ಬಿಂಬಿಸಿಕೊಳ್ಳುವ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರಿಗೆ ಈ ರಾಜಿನಾಮೆ ಪತ್ರವು ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದು ಪಡಿಸದಿದ್ದರೆ ರಾಜಿನಾಮೆ ನೀಡುತ್ತೇನೆ: ಹರಿಯಾಣ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...