Homeಚಳವಳಿರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ.

- Advertisement -
- Advertisement -

ಭಾನುವಾರ ಪ್ರತಿಭಟನಾ ನಿರತ ರೈತರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ “ಕಿಸಾನ್ ಮಹಾಪಂಚಾಯತ್” ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿ ವೇದಿಕೆಯನ್ನು ಪುಡಿಗಟ್ಟಿದ್ದರು. ಇದರಂದ ತೀವ್ರ ಒತ್ತಡಕ್ಕೆ ಒಳಗಾಗಿರುವ ಖಟ್ಟರ್ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಸೇರಿದಂತೆ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಉನ್ನತ ನಾಯಕರು ರಾಜ್ಯದ ರಾಜಕೀಯ ಸನ್ನಿವೇಶದ ಕುರಿತು ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ.

ಸಭೆಯು ನವದೆಹಲಿಯಲ್ಲಿ ಮಂಗಳವಾರ(ಇಂದು) ನಡೆಯಲಿದೆ. ಆದರೆ ಅದಕ್ಕೂ ಮುನ್ನ ದುಶ್ಯಂತ್ ಚೌತಾಲಾ ಜೆಜೆಪಿ ಶಾಸಕರೊಂದಿಗೆ ದೆಹಲಿಯ ತಮ್ಮ ತೋಟದ ಮನೆಯಲ್ಲಿ ಸಭೆ ನಡೆಸಲಿದ್ದಾರೆ. ಎಲ್ಲಾ ಜೆಜೆಪಿ ಶಾಸಕರಿಗೆ ಮಂಗಳವಾರ ರಾಜಧಾನಿಗೆ ಬರಲು ತಿಳಿಸಲಾಗಿದೆ.

ಕಳೆದ ಒಂದೂವರೆ ತಿಂಗಳಿನಿಂದ ಹರಿಯಾಣ ರಾಜಕೀಯದಲ್ಲಿ ರೈತರ ಆಂದೋಲನ ಮೇಲುಗೈ ಸಾಧಿಸುತ್ತಿದೆ. ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಶಾಸಕರನ್ನು ಮೈತ್ರಿಕೂಟದಲ್ಲಿ ಉಳಿಸಿಕೊಳ್ಳುವ ಪ್ರಯತ್ನವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸೋಮವಾರದಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಆಡಳಿತರೂಢ ಒಕ್ಕೂಟದ ಹಲವಾರು ಶಾಸಕರು ಒಕ್ಕೂಟವನ್ನು ತ್ಯಜಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಮಧ್ಯೆ ಈ ಸಭೆ ನಡೆಯುತ್ತಿದೆ. 90 ಸದಸ್ಯ ಬಲವಿರುವ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಗೆ 40 ಸ್ಥಾನಗಳಿದ್ದರೆ, ಜೆಜೆಪಿಯಲ್ಲಿ 10 ಶಾಸಕರಿದ್ದಾರೆ. ಅಲ್ಲದೆ ಏಳು ಪಕ್ಷೇತರ ಶಾಸಕರಲ್ಲಿ ಐವರು ಸರ್ಕಾರದ ಪರವಾಗಿದ್ದಾರೆ.

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ. ರೈತರು ಕಪ್ಪು ಧ್ವಜಗಳನ್ನು ಪ್ರದರ್ಶನ ಮಾಡುವುದು, ವಾಹನಗಳನ್ನು ಬೆನ್ನಟ್ಟುವುದು, ಹೆಲಿಪ್ಯಾಡ್‌ಗಳಿಗೆ ಹಾನಿ ಮಾಡುವುದು ಸೇರಿದಂತೆ ಅಂತಹ ಸಭೆಗಳ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಭಾನುವಾರ ಕರ್ನಾಲ್ ಗ್ರಾಮದಲ್ಲಿ ಯಾವುದೇ ತೊಂದರೆಯಾಗದಂತೆ ಸಭೆ ನಡೆಯಲು ಸರ್ಕಾರಿ ಯಂತ್ರಾಂಗದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅಲ್ಲಿಗೆ ರೈತರು ನುಗ್ಗಿ ವೇದಿಕೆಯನ್ನು ಪುಡಿಗಟ್ಟಿರುವುದುರಿಂದ ಸರ್ಕಾರವು ಆತಂಕಕ್ಕೊಳಗಾಗಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ರಾಜ್ಯದಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬಿಜೆಪಿ-ಜೆಜೆಪಿ ನಾಯಕರು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಟ್ಟರ್ ಮತ್ತು ದುಶ್ಯಂತ್ ಅವರಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧಂಕರ್, ರಾಜ್ಯ ಶಿಕ್ಷಣ ಸಚಿವ ಕನ್ವರ್ ಪಾಲ್ ಗುಜ್ಜರ್ ಮತ್ತು ಜೆಜೆಪಿ ರಾಜ್ಯ ಅಧ್ಯಕ್ಷ ನಿಶಾನ್ ಸಿಂಗ್ ಅವರು ನಿಯೋಗದಲ್ಲಿ ಇರಲಿದ್ದಾರೆ ಎಂದು ಅದು ವರದಿ ಮಾಡಿದೆ.

ನಿನ್ನೆಯಷ್ಟೇ, ಪಕ್ಷೇತರ ಶಾಸಕ ರಾಜ್ಯ ವಿದ್ಯುತ್ ಸಚಿವ ರಂಜಿತ್ ಚೌತಾಲಾ ಅವರ ನಿವಾಸದಲ್ಲಿ ಮೈತ್ರಿ ಸರ್ಕಾರವನ್ನು ಬೆಂಬಲಿಸುವ ಐದು ಪಕ್ಷೇತರ ಶಾಸಕರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದ್ದರು.

ಈ ಮಧ್ಯೆ ಐಎನ್ಎಲ್ಡಿ ನಾಯಕ ಅಭಯ್ ಚೌತಲಾ ಸೋಮವಾರ ವಿಧಾನಸಭೆ ಸ್ಪೀಕರ್‌ಗೆ ಪತ್ರವೊಂದನ್ನು ಬರೆದು, ಜನವರಿ 26 ರೊಳಗೆ ಸರ್ಕಾರವು ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಈ ಪತ್ರವನ್ನೇ ರಾಜೀನಾಮೆ ಎಂದು ಪರಿಗಣಿಸುವಂತೆ ಕೇಳಿಕೊಂಡಿದ್ದಾರೆ. ತಮ್ಮನ್ನು ತಾವು ರೈತ ನಾಯಕ ಎಂದು ಬಿಂಬಿಸಿಕೊಳ್ಳುವ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರಿಗೆ ಈ ರಾಜಿನಾಮೆ ಪತ್ರವು ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದು ಪಡಿಸದಿದ್ದರೆ ರಾಜಿನಾಮೆ ನೀಡುತ್ತೇನೆ: ಹರಿಯಾಣ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...