Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...