Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...