Homeಮುಖಪುಟತಮಿಳುನಾಡು: ನಾಳೆ ಪೊಂಗಲ್‌ನಲ್ಲಿ ಪಾಲ್ಗೊಂಡು, ಜಲ್ಲಿಕಟ್ಟು ವೀಕ್ಷಿಸಲಿರುವ ರಾಹುಲ್ ಗಾಂಧಿ!

ತಮಿಳುನಾಡು: ನಾಳೆ ಪೊಂಗಲ್‌ನಲ್ಲಿ ಪಾಲ್ಗೊಂಡು, ಜಲ್ಲಿಕಟ್ಟು ವೀಕ್ಷಿಸಲಿರುವ ರಾಹುಲ್ ಗಾಂಧಿ!

ಜಲ್ಲಕಟ್ಟು ಕ್ರೀಡೆ ವೀಕ್ಷಿಸುವ ಮೂಲಕ ರಾಹುಲ್ ಗಾಂಧಿ ರೈತರಿಗೆ ಬೆಂಬಲ ನೀಡಲಿದ್ದಾರೆ. ಗೂಳಿ ರೈತರ ಸಂಕೇತ ಮತ್ತು ಅವರ ಜೀವನದ ಒಂದು ಭಾಗವಾಗಿದೆ - ಕೆ.ಎಸ್ ಅಳಗಿರಿ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ತಮಿಳುನಾಡಿಗೆ ಭೇಟಿ ನೀಡಲಿದ್ದು, ಪೊಂಗಲ್ ಹಬ್ಬದಲ್ಲಿ ಭಾಗವಹಿಸಿ, ಜಲ್ಲಿಕಟ್ಟು ವೀಕ್ಷಸಲಿದ್ದಾರೆ ಎಂದು ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥ ಕೆ.ಎಸ್ ಅಳಗಿರಿ ತಿಳಿಸಿದ್ದಾರೆ.

ಮಧುರೈನಲ್ಲಿ ಹಮ್ಮಿಕೊಳ್ಳಲಾಗಿರುವ ಜಲ್ಲಕಟ್ಟು ಕ್ರೀಡೆ ವೀಕ್ಷಿಸುವ ಮೂಲಕ ರಾಹುಲ್ ಗಾಂಧಿ ರೈತರಿಗೆ ಬೆಂಬಲ ನೀಡಲಿದ್ದಾರೆ. ಗೂಳಿ ರೈತರ ಸಂಕೇತ ಮತ್ತು ಅವರ ಜೀವನದ ಒಂದು ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯು “ಸುಗ್ಗಿಯ ಹಬ್ಬದ ದಿನದಂದು ರೈತರನ್ನು ಮತ್ತು ಶೌರ್ಯದ ತಮಿಳು ಸಂಸ್ಕೃತಿಯನ್ನು ಗೌರವಿಸುತ್ತದೆ. ಅಂದು ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಅಳಗಿರಿ ಒತ್ತಿ ಹೇಳಿದ್ದಾರೆ.

ಏಪ್ರಿಲ್-ಮೇ ತಿಂಗಳಿನಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ರಾಹುಲ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಘಟಕವು ಈ ಭೇಟಿಗೆ ’ರಾಹುಲ್‌ರವರ ತಮಿಳು ನಮಸ್ಕಾರಗಳು’ ಎಂದು ಕರೆದಿದೆ.

ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸಲಾಗುತ್ತದೆ ಎಂಬ ಆರೋಪದಿಂದಾಗಿ ಜಲ್ಲಿಕಟ್ಟು ವಿವಾದಕ್ಕೆ ಕಾರಣವಾಗಿದೆ. ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ ಮತ್ತು ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಸಲ್ಲಿಸಿದ ಮನವಿಗಳ ಆಧಾರದಲ್ಲಿ 2014 ರಲ್ಲಿ ಸುಪ್ರೀಂ ಕೋರ್ಟ್ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿತ್ತು.

ಆದರೆ ತಮಿಳುನಾಡಿನ ಸಂಸ್ಕೃತಿ ಮತ್ತು ಅಸ್ಮಿತೆಗೆ ಜಲ್ಲಿಕಟ್ಟು ನಿರ್ಣಾಯಕ ಎಂದು ರಾಜ್ಯ ಸರ್ಕಾರ ವಾದಿಸಿತು. ಚೆನ್ನೈನಲ್ಲಿ ಭಾರಿ ಪ್ರತಿಭಟನೆ ನಡೆದ ನಂತರ ಕಾನೂನಿನ ತಿದ್ದುಪಡಿಯೊಂದಿಗೆ 2017 ರಲ್ಲಿ ನಿಷೇಧವನ್ನು ತೆಗೆದುಹಾಕಲಾಯಿತು.

ಕೊರೊನಾ ವೈರಸ್ ಕಾರಣ ಈ ವರ್ಷ ಸರ್ಕಾರ ನಿರ್ಬಂಧಗಳೊಂದಿಗೆ ಈ ಕಾರ್ಯಕ್ರಮಕ್ಕೆ ಅವಕಾಶ ನೀಡಿದೆ. ಯಾವುದೇ ಸ್ಪರ್ಧೆಯಲ್ಲಿ ಆಟಗಾರರ ಸಂಖ್ಯೆ 150 ಕ್ಕಿಂತ ಹೆಚ್ಚಿರಬಾರದು ಮತ್ತು ಭಾಗವಹಿಸುವವರಿಗೆ COVID-19 ನೆಗೆಟಿವ್ ಪ್ರಮಾಣಪತ್ರದ ಅಗತ್ಯವಿದೆ. ಪ್ರೇಕ್ಷಕರ ಸಂಖ್ಯೆಯನ್ನು ಸಹ ಅರ್ಧಕ್ಕೆ ಸೀಮಿತಗೊಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...