Homeನಿಜವೋ ಸುಳ್ಳೋಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

- Advertisement -
- Advertisement -

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ ಶುರು ಮಾಡಲಾಗಿದ್ದರೆ, 2019ರಲ್ಲಿ ಅವಕ್ಕೆಲ್ಲಾ ಕಡೆಯ ಆದ್ಯತೆ. ಆಗ ಭಾವನಾತ್ಮಕ ವಿಚಾರಗಳಿಗೆ ಕಡೆಯ ಸ್ಥಾನ ಕಲ್ಪಿಸಿದ್ದರೆ, ಈ ಸಾರಿ ಪ್ರಣಾಳಿಕೆ ಶುರುವಾಗುವುದೇ ಅವುಗಳಿಂದ. ಅಂದರೆ, ತಾವು ಅಭಿವೃದ್ಧಿ ಸಾಧಿಸಲಾಗಲಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಆದರೆ, ಈ ಪ್ರಣಾಳಿಕೆಯಲ್ಲಿ ಎರಡು ಹಾಸ್ಯಾಸ್ಪದ ಸಂಗತಿಗಳು ಇವೆ.

ಅವೆಂದರೆ, ಭಾರತವನ್ನು ಪ್ರಪಂಚದ 3ನೇ ದೊಡ್ಡ ಆರ್ಥಿಕತೆ ಮಾಡುವ ನಿಟ್ಟಿನಲ್ಲಿ ಏನೇನು ಮಾಡುತ್ತೇವೆಂಬ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ 5ನೇ ಪಾಯಿಂಟ್, ಯೋಗವನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರ ಕುರಿತು ಹೇಳಲಾಗುತ್ತದೆ. ಅದರ ಮೂಲಕ ಭಾರತ 3ನೇ ದೊಡ್ಡ ಆರ್ಥಿಕತೆ ಮಾಡಲು ಹೇಗೆ ಸಾಧ್ಯ ಎಂಬುದನ್ನು, ಪ್ರಣಾಳಿಕೆ ಬಿಡುಗಡೆಯಾದ ನಂತರ ಅರುಣ್ ಜೇಟ್ಲಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನನ್ನೂ ಹೇಳಿಲ್ಲ. ಬಹುಶಃ ಅವರು ಚಕ್ರವರ್ತಿ ಸೂಲಿಬೆಲೆ, ಅರ್ಥತಜ್ಞ ಗುರುಮೂರ್ತಿ ಥರದವರಿಂದ ಇದನ್ನೂ ಹೇಗೆ ಸಮರ್ಥಿಸಿಕೊಳ್ಳಬಹುದೆಂದು ಕಲಿತುಕೊಂಡು ತಮ್ಮ ಬ್ಲಾಗ್‍ನಲ್ಲಿ ಬರೆಯಬಹುದು.

ಹಾಗೆಯೇ ಒಳ್ಳೆಯ ಆಡಳಿತದ 20ನೇ ಅಂಶದಲ್ಲಿ ಹೀಗೆ ಹೇಳಲಾಗುತ್ತದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಬೇಗ ಬೇಗನೇ ಮಂಜೂರಾತಿ ನೀಡುವಲ್ಲಿ ವೇಗವನ್ನು ಸಾಧಿಸಿದ್ದೇವೆ ಮತ್ತು ಅದರಿಂದ 9000 ಚ.ಕಿ.ಮೀಗಳಷ್ಟು ಅರಣ್ಯವನ್ನು ಹೆಚ್ಚಿಸಿದ್ದೇವೆ ಎನ್ನುತ್ತಾರೆ. ಯೋಜನೆಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಬೇಗ ಬೇಗನೇ ಮಂಜೂರಾತಿ ಕೊಟ್ಟರೆ ಅರಣ್ಯ ಬೇಗ ಬೇಗನೇ ಖಾಲಿಯಾಗುತ್ತದೆ. ಒಂದು ವೇಳೆ, ಅರಣ್ಯ ಕಡಿಯುವ ಯೋಜನೆಗಳಿಗೆ ಪರ್ಯಾಯವಾಗಿ ಅರಣ್ಯ ಬೆಳೆಸುವ ಯೋಜನೆಗಳಿಗೇ ಅನುಮತಿ ಕೊಟ್ಟಿದ್ದಾರೆಂದು ಭಾವಿಸೋಣ (ಇಲ್ಲದಿದ್ದರೆ ಅದನ್ನು ಗುರುಮೂರ್ತಿಗಳಂತಹ ತಜ್ಞರು ಹೇಳುವ ಅಪಾಯವಿದೆ). ಆಗಲೂ 3-5 ವರ್ಷಗಳಲ್ಲಿ 9,000 ಚ.ಕಿ.ಮೀ ‘ಅರಣ್ಯ’ ಬೆಳೆದುಬಿಡುತ್ತದಾ?

ಅಪಾಯ ನಂತರದ ವಾಕ್ಯದಲ್ಲಿದೆ. ನಾವು ಈ ವೇಗವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆಂದು ಹೇಳುತ್ತಾರೆ!

ಇದನ್ನು ಓದಿ: ಕೆಟ್ಟ ಪ್ರಣಾಳಿಕೆ ಕೊಟ್ಟ ಕೀರ್ತಿ ಬಿಜೆಪಿಯದು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...