Homeನಿಜವೋ ಸುಳ್ಳೋಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

- Advertisement -
- Advertisement -

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ ಶುರು ಮಾಡಲಾಗಿದ್ದರೆ, 2019ರಲ್ಲಿ ಅವಕ್ಕೆಲ್ಲಾ ಕಡೆಯ ಆದ್ಯತೆ. ಆಗ ಭಾವನಾತ್ಮಕ ವಿಚಾರಗಳಿಗೆ ಕಡೆಯ ಸ್ಥಾನ ಕಲ್ಪಿಸಿದ್ದರೆ, ಈ ಸಾರಿ ಪ್ರಣಾಳಿಕೆ ಶುರುವಾಗುವುದೇ ಅವುಗಳಿಂದ. ಅಂದರೆ, ತಾವು ಅಭಿವೃದ್ಧಿ ಸಾಧಿಸಲಾಗಲಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಆದರೆ, ಈ ಪ್ರಣಾಳಿಕೆಯಲ್ಲಿ ಎರಡು ಹಾಸ್ಯಾಸ್ಪದ ಸಂಗತಿಗಳು ಇವೆ.

ಅವೆಂದರೆ, ಭಾರತವನ್ನು ಪ್ರಪಂಚದ 3ನೇ ದೊಡ್ಡ ಆರ್ಥಿಕತೆ ಮಾಡುವ ನಿಟ್ಟಿನಲ್ಲಿ ಏನೇನು ಮಾಡುತ್ತೇವೆಂಬ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ 5ನೇ ಪಾಯಿಂಟ್, ಯೋಗವನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರ ಕುರಿತು ಹೇಳಲಾಗುತ್ತದೆ. ಅದರ ಮೂಲಕ ಭಾರತ 3ನೇ ದೊಡ್ಡ ಆರ್ಥಿಕತೆ ಮಾಡಲು ಹೇಗೆ ಸಾಧ್ಯ ಎಂಬುದನ್ನು, ಪ್ರಣಾಳಿಕೆ ಬಿಡುಗಡೆಯಾದ ನಂತರ ಅರುಣ್ ಜೇಟ್ಲಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನನ್ನೂ ಹೇಳಿಲ್ಲ. ಬಹುಶಃ ಅವರು ಚಕ್ರವರ್ತಿ ಸೂಲಿಬೆಲೆ, ಅರ್ಥತಜ್ಞ ಗುರುಮೂರ್ತಿ ಥರದವರಿಂದ ಇದನ್ನೂ ಹೇಗೆ ಸಮರ್ಥಿಸಿಕೊಳ್ಳಬಹುದೆಂದು ಕಲಿತುಕೊಂಡು ತಮ್ಮ ಬ್ಲಾಗ್‍ನಲ್ಲಿ ಬರೆಯಬಹುದು.

ಹಾಗೆಯೇ ಒಳ್ಳೆಯ ಆಡಳಿತದ 20ನೇ ಅಂಶದಲ್ಲಿ ಹೀಗೆ ಹೇಳಲಾಗುತ್ತದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಬೇಗ ಬೇಗನೇ ಮಂಜೂರಾತಿ ನೀಡುವಲ್ಲಿ ವೇಗವನ್ನು ಸಾಧಿಸಿದ್ದೇವೆ ಮತ್ತು ಅದರಿಂದ 9000 ಚ.ಕಿ.ಮೀಗಳಷ್ಟು ಅರಣ್ಯವನ್ನು ಹೆಚ್ಚಿಸಿದ್ದೇವೆ ಎನ್ನುತ್ತಾರೆ. ಯೋಜನೆಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಬೇಗ ಬೇಗನೇ ಮಂಜೂರಾತಿ ಕೊಟ್ಟರೆ ಅರಣ್ಯ ಬೇಗ ಬೇಗನೇ ಖಾಲಿಯಾಗುತ್ತದೆ. ಒಂದು ವೇಳೆ, ಅರಣ್ಯ ಕಡಿಯುವ ಯೋಜನೆಗಳಿಗೆ ಪರ್ಯಾಯವಾಗಿ ಅರಣ್ಯ ಬೆಳೆಸುವ ಯೋಜನೆಗಳಿಗೇ ಅನುಮತಿ ಕೊಟ್ಟಿದ್ದಾರೆಂದು ಭಾವಿಸೋಣ (ಇಲ್ಲದಿದ್ದರೆ ಅದನ್ನು ಗುರುಮೂರ್ತಿಗಳಂತಹ ತಜ್ಞರು ಹೇಳುವ ಅಪಾಯವಿದೆ). ಆಗಲೂ 3-5 ವರ್ಷಗಳಲ್ಲಿ 9,000 ಚ.ಕಿ.ಮೀ ‘ಅರಣ್ಯ’ ಬೆಳೆದುಬಿಡುತ್ತದಾ?

ಅಪಾಯ ನಂತರದ ವಾಕ್ಯದಲ್ಲಿದೆ. ನಾವು ಈ ವೇಗವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆಂದು ಹೇಳುತ್ತಾರೆ!

ಇದನ್ನು ಓದಿ: ಕೆಟ್ಟ ಪ್ರಣಾಳಿಕೆ ಕೊಟ್ಟ ಕೀರ್ತಿ ಬಿಜೆಪಿಯದು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...