Homeಕರ್ನಾಟಕಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

ಕಾಂಗ್ರೆಸ್‍ಗೆ ಸೇರಿದ ಲಕ್ಷ್ಮೀನಾರಾಯಣ: ಸೋಮಣ್ಣರ ಸೀಕ್ರೆಟ್ ಡೀಲ್

- Advertisement -
- Advertisement -

ಇಂದು ಮಹತ್ವದ ಬೆಳವಣಿಗೆಯೊಂದು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆದಿದೆ. ಅದರ ಮಹತ್ವವನ್ನು ಬಿಂಬಿಸಲೋ ಎಂಬಂತೆ, ಅದರಲ್ಲಿ ಬೆಂ.ದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ವಿಜಯನಗರದ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಖುದ್ದು ಹಾಜರಿದ್ದರು. ಬೆಂಗಳೂರಿನ ಮಾಜಿ ಉಪಮೇಯರ್ ಎಂ.ಲಕ್ಷ್ಮೀನಾರಾಯಣ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಈ ವಿದ್ಯಮಾನ.

ಇದಕ್ಕೆ ಮಹತ್ವ ಬಂದಿರುವುದು ಸ್ವತಃ ಲಕ್ಷ್ಮೀನಾರಾಯಣ್‍ರ ಸಾಮಥ್ರ್ಯದಿಂದ ಅಷ್ಟೇ ಅಲ್ಲ. ಅವರ ಗುರು ವಿ.ಸೋಮಣ್ಣ ತಮ್ಮ ಅಸಮಾಧಾನದ ಕಾರಣಕ್ಕೆ, ಲಕ್ಷ್ಮೀನಾರಾಯಣರನ್ನು ಕಾಂಗ್ರೆಸ್ಸಿಗೆ ಕಳಿಸಿದ್ದಾರೆಂದು ಭಾವಿಸಲು ಹಲವು ಕಾರಣಗಳಿವೆ. ಹಳೇ ಬಿನ್ನಿಪೇಟೆ ಕ್ಷೇತ್ರದ ವಿ.ಸೋಮಣ್ಣರನ್ನು ವಿಜಯನಗರದ ವೀರಪುತ್ರ, ‘ಸೋಲಿಲ್ಲದ ಸರದಾರ’ (ಆ ನಂತರ ಸೋಮಣ್ಣ ಸೋತರು, ಆ ಮಾತು ಬೇರೆ) ಇತ್ಯಾದಿ ವಿಶೇಷಣಗಳಿಂದ ಕರೆಯಲಾಗುತ್ತಿದ್ದುದಕ್ಕೆ ಕಾರಣಗಳಿವೆ. ಜನತಾದಳದಿಂದ ಮತ್ತು ಕಾಂಗ್ರೆಸ್‍ನಿಂದ ಸತತ ಎರಡು ಬಾರಿ ಹಳೇ ಬಿನ್ನಿಪೇಟೆ ಕ್ಷೇತ್ರದಿಂದ ಗೆದ್ದ ಸೋಮಣ್ಣ, ನಂತರ ಯಾವ ಪಕ್ಷದ ಟಿಕೆಟ್ಟೂ ಬೇಡ ಎಂದು ಪಕ್ಷೇತರವಾಗಿಯೂ ನಿಂತು ಗೆದ್ದಿದ್ದರು!

ಅದೇ ಕ್ಷೇತ್ರದ ಲೇಔಟ್ ಕೃಷ್ಣಪ್ಪರಂತಹ ಒಬ್ಬ ಭಾರೀ ಕುಳ ಕಾಂಗ್ರೆಸ್ಸಿನಲ್ಲೇ ಇದ್ದಾಗಲೂ ಬಿನ್ನಿಪೇಟೆ ಕ್ಷೇತ್ರದ ಟಿಕೆಟ್ ಪಡೆಯಲು ಸಾಧ್ಯವೇ ಇಲ್ಲದ ಕಾರಣಕ್ಕೆ ಎಂಎಲ್‍ಸಿಯಷ್ಟೇ ಆದರು. ನಂತರ ಕ್ಷೇತ್ರದ ಪುನರ್‍ವಿಂಗಡಣೆಯಲ್ಲಿ ಗೋವಿಂದರಾಜನಗರದಿಂದ ಸೋಮಣ್ಣ ಮತ್ತು ವಿಜಯನಗರದಿಂದ ಕೃಷ್ಣಪ್ಪ ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದರು. ಯಡಿಯೂರಪ್ಪ ಸಿಎಂ ಆದಾಗ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಸೋಮಣ್ಣ ಸಹಾ ಒಬ್ಬರು. ಆದರೆ, ಅವರ ವಿರುದ್ಧ ಕೃಷ್ಣಪ್ಪನವರ ಮಗ ಪ್ರಿಯಾಕೃಷ್ಣ ನಿಂತು, ಜೆಡಿಎಸ್‍ನ ಬೆಂಬಲದೊಂದಿಗೆ ಸೋಮಣ್ಣ ಸೋತಿದ್ದರು. ಇದು ಅವರನ್ನು ಹೈರಾಣಾಗಿಸಿ, ಬೇರೆ ಕ್ಷೇತ್ರದ ಹುಡುಕಾಟಕ್ಕೂ ಬಿದ್ದಿದ್ದರು. ಆದರೆ, ಈ ಸಾರಿ ಮತ್ತೆ ಪ್ರಿಯಾಕೃಷ್ಣರನ್ನು ಸೋಲಿಸುವ ಮುಂಚೆ ಸ್ವತಃ ಯಡಿಯೂರಪ್ಪನವರು ಸೋಮಣ್ಣರನ್ನು ಹುಡುಕಿಕೊಂಡು ಬಂದು ಸಮಾಧಾನ ಮಾಡಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಯಡ್ಡಿ ಸೋಮಣ್ಣರ ನಡುವಿನದ್ದು ಲವ್ & ಹೇಟ್ ಸಂಬಂಧವಾದರೆ, ಅನಂತಕುಮಾರ್‍ರ ಜೊತೆಗೂ ಸೋಮಣ್ಣ ಬಹಳ ಒಳ್ಳೆಯ ಸಂಬಂಧ ಹೊಂದಿದ್ದರು.

ಏಕೆಂದರೆ ಸೋಮಣ್ಣರಿಗಿರುವ ಪ್ರಭಾವ ಅಂಥದ್ದು. ಈ ಕ್ಷೇತ್ರದ ಸಾವಿರಾರು ಜನರನ್ನು ಹೆಸರಿನಿಂದ ಬಲ್ಲ ಸೋಮಣ್ಣ, ಯಾರು ಯಾವುದೇ ಸಮಸ್ಯೆ ತಂದರೂ ಬಗೆಹರಿಸುತ್ತಿದ್ದ ವ್ಯಕ್ತಿ. ಬೆಂಗಳೂರಿನ ಮೇಯರ್ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂಬ ಚರ್ಚೆಯಿದ್ದಾಗ ಅದಕ್ಕೆ ದೊಡ್ಡ ಮಟ್ಟದಲ್ಲಿ ಕೇಳಿಬಂದ ಹೆಸರು ಸೋಮಣ್ಣರದ್ದೇ.

ಸೋಮಣ್ಣ ತನ್ನ ಮಗನನ್ನು ರಾಜಕಾರಣಕ್ಕೆ ತರುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರಾದರೂ, ತನ್ನ ಆಪ್ತ ಶಿಷ್ಯರಾದ ಎಚ್.ರವೀಂದ್ರ ಮತ್ತು ಲಕ್ಷ್ಮೀನಾರಾಯಣ ಇಬ್ಬರಿಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲೇ ಟಿಕೆಟ್ ಕೊಡಿಸಿದ್ದರು. ಆ ರೀತಿಯಲ್ಲಿ ‘ನಂಬಿದವರನ್ನು ಪೊರೆವ’ ವಿಚಾರದಲ್ಲಿ ಅವರ ಬಗ್ಗೆ ಅಂತಹ ಕೆಟ್ಟ ಹೆಸರಿಲ್ಲ.

ಇನ್ನು ಲಕ್ಷ್ಮೀನಾರಾಯಣರ ವಿಚಾರಕ್ಕೆ ಬರುವುದಾದರೆ, ಆವಲಹಳ್ಳಿ ಪಟೇಲರ ಕುಟುಂಬದ ಸಂಬಂಧಿಯಾದ ಅವರು ಭಾರೀ ದೊಡ್ಡ ಕುಳವೇನಾಗಿರಲಿಲ್ಲ. ನಗರದೊಳಗೇ ಇದ್ದರೂ, ಇನ್ನೂ ಹಳ್ಳಿಯ ರೀತಿ ರಿವಾಜುಗಳನ್ನು ಉಳಿಸಿಕೊಂಡಿರುವ ಆವಲಹಳ್ಳಿಯಲ್ಲಿ ಅಲ್ಲಿನ ದೊಡ್ಡ ಕುಳಗಳಿಗೆ ಸೆಡ್ಡು ಹೊಡೆದು ರಾಜಕೀಯ ಬಲ ರೂಪಿಸಿಕೊಂಡವರು ಲಕ್ಷ್ಮೀನಾರಾಯಣ್. ಸಹಜವಾಗಿ ಕಾರ್ಪೋರೇಟರ್ ಚುನಾವಣೆಗೆ ನಿಂತು ಗೆಲ್ಲಲು ಬಯಸಿದ ಅವರನ್ನು ಪೋಷಿಸಿದ್ದು ಸೋಮಣ್ಣರೇ. ನಂತರ ಉಪಮೇಯರ್ ಮಾಡಿದ್ದು, ಎಂಎಲ್‍ಎ ಟಿಕೆಟ್ ಕೊಡಿಸಿದ್ದು ಎಲ್ಲವೂ ಸೋಮಣ್ಣರೇ. ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ವಿರುದ್ಧ ಸೋತರೂ ಲಕ್ಷ್ಮೀನಾರಾಯಣ್ ಪ್ರಭಾವಿಯೇ.

ಈ ಸಾರಿ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಅನಂತಕುಮಾರ್‍ಗೆ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯಗೆ ಕೊಟ್ಟ ನಂತರ ಬಹಿರಂಗವಾಗಿ ಕಿಡಿಕಾರಿದ್ದು ಸೋಮಣ್ಣ. ತನಗೆ ಕೆಲವು ವಿಚಾರಗಳಲ್ಲಿ ಸ್ಪಷ್ಟೀಕರಣ ಸಿಗುವವರೆಗೂ ಪ್ರಚಾರಕ್ಕೂ ಹೋಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಇಂದು ಕಾರ್ಯಕರ್ತರ ಸಭೆ ಕರೆದು ಪ್ರಚಾರ ಶುರು ಮಾಡಿದ್ದಾರಾದರೂ, ಇಂದೇ ಲಕ್ಷ್ಮೀನಾರಾಯಣ ಕಾಂಗ್ರೆಸ್ ಸೇರಿರುವುದು ಕೇವಲ ಅವರ ವ್ಯಕ್ತಿಗತ ತೀರ್ಮಾನ ಆಗಿರಲಾರದು.

ಸೋಮಣ್ಣರ ಪ್ರಭಾವವಿರುವ ಹಳೇ ಬಿನ್ನಿಪೇಟೆ ಕ್ಷೇತ್ರವ್ಯಾಪ್ತಿಯ ಎಲ್ಲೆಡೆ ಅವರ ಪ್ರತಿನಿಧಿಯಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರ ಪರವಾಗಿ ಲಕ್ಷ್ಮೀನಾರಾಯಣ್ ಕೆಲಸ ಮಾಡುತ್ತಾರೆನ್ನುವುದು ಒಳ ಒಪ್ಪಂದ ಇದ್ದಂತಿದೆ. ಚುನಾವಣಾ ಸಂದರ್ಭದಲ್ಲಿ ಯಾವ ಮೌಲ್ಯಗಳೂ ಉಳಿದುಕೊಂಡಿರದ ರಾಜಕಾರಣದಲ್ಲಿ ಸಿದ್ಧಾಂತಕ್ಕೆ ಬೆಲೆಯೇನೂ ಇರುವುದಿಲ್ಲ. ಹಾಗಾಗಿ ಇಂತಹ ಪಕ್ಷಾಂತರಗಳು, ಒಳಒಪ್ಪಂದಗಳು ಮಾಮೂಲು ಎನ್ನುವಂತಹ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ತೇಜಸ್ವಿ ಸೂರ್ಯ ಅಭ್ಯರ್ಥಿಯಾದ ಕ್ಷಣದಿಂದಲೂ ಎಡವಟ್ಟಿನ ಮೇಲೆ ಎಡವಟ್ಟಾಗುತ್ತಿದೆ. ಅದೇ ಸಂದರ್ಭದಲ್ಲಿ ಹಿಂದಿನಿಂದಲೂ ಬಿಜೆಪಿಯ ಅನಂತಕುಮಾರ್‍ರ ಪರವಾಗಿ ಕಾಂಗ್ರೆಸ್‍ನ ರಾಮಲಿಂಗಾರೆಡ್ಡಿಯವರು ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಾರಿ ಅವರೂ ತೊಡೆತಟ್ಟಿ ನಿಂತಂತಿದೆ. ಇಂದಿನ ಲಕ್ಷ್ಮೀನಾರಾಯಣ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರೂ ಇದ್ದದ್ದು ಅದಕ್ಕೆ ಸಾಕ್ಷಿಯಂತಿದೆ. ಇವೆಲ್ಲಾ ಕಾರಣಗಳಿಂದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸ್ಪರ್ಧೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ತೇಜಸ್ವಿ ಸೋಲಿಸಲು ಸೂಲಿಬೆಲೆ ಸ್ಕೆಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...