Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...