Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...