Homeಕರೋನಾ ತಲ್ಲಣಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿ ತಮ್ಮದೆ ಸರ್ಕಾರದ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ?

- Advertisement -
- Advertisement -

ರಾಜ್ಯದಲ್ಲಿ ಇನ್ನೂ ಕೊರೊನಾ ಮಾರ್ಗಸೂಚಿಗಳು ಜಾರಿಯಲ್ಲಿದೆ. ನಗರದ ಸಾರ್ವಜನಿಕ ಸ್ಥಗಳಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ ಹಾಗೂ ಗ್ರಾಮಗಳಲ್ಲಿ 100 ರೂಗಳನ್ನು ದಂಡ ಕಟ್ಟಬೇಕಾಗುತ್ತದೆ. ಯಾವುದೆ ರೀತಿಯ ಸಭೆಯಲ್ಲಿ 200 ಕ್ಕಿಂತ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಆದರೆ ಈ ಮಾರ್ಗಸೂಚಿಗಳು ಕೇವಲ ಸಾಮನ್ಯರಿಗಷ್ಟೇ ಇದೆಯೆ ಎಂಬ ಪ್ರಶ್ನೆಗಳು ಕಾಡುತ್ತಿದೆ.

ಇತ್ತೀಚೆಗಷ್ಟೆ ದಿನಗೂಲಿ ಕೆಲಸ ಮಾಡುವ ಮಹಿಳೆಯಿಂದ 250 ರೂ ದಂಡವನ್ನು ಮಾರ್ಷಲ್‌ಗಳು ಕಟ್ಟಿಸಿಕೊಂಡಿದ್ದರು. ಒಂದು ದಿನದ ಕೂಲಿ ಕಳೆದು ಕೊಂಡ ಮಹಿಳೆಯ ರೋದನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಇದಕ್ಕೆ ಇಡೀ ರಾಜ್ಯದ ಜನರು ಮರುಗಿದ್ದರು. ದಿನದಿನವು ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆಂದು ಸಾಮಾನ್ಯ ಜನರಿಂದ ಯಾವುದೆ ಕರುಣೆ ತೋರದೆ ದಂಡಗಳನ್ನು ಕಟ್ಟಿಸಲಾಗುತ್ತಿದೆ. ಆದರೆ ಈ ನಿಯಮಗಳು ರಾಜ್ಯವನ್ನು ಆಳುತ್ತಿರುವ ಬಿಜೆಪಿಯ ಸಭೆಗೋ ಅಥವಾ ಬಿಜೆಪಿ ನಾಯಕರಿಗೂ ಅನ್ವಯಿಸುವುದಿಲ್ಲ ಎಂಬ ಅಲಿಖಿತ ನಿಯಮವಿದೆ ಎನ್ನುವ ಅನುಮಾನವಿದೆ.

ಇದನ್ನೂ ನೋಡಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಬುಧವಾರ ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೆಸ್ ಮೈದಾನದಲ್ಲಿ ನಡೆದ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ರೀತಿಯ ಕೊರೊನಾ ನೀತಿ ನಿಯಮಗಳನ್ನು ತೂರಲಾಗಿತ್ತು. ಕಾರ್ಯಕ್ರಮದ ವೇದಿಕೆಯ ಮುಂಭಾಗ ಸಾವಿರಾರು ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಆದರೆ ಹೆಚ್ಚಿನ ಕಾರ್ಯಕರ್ತರು ಮಾಸ್ಕ್ ಧರಿಸಿರಲಿಲ್ಲ.

ಅಲ್ಲದೆ, ವೇದಿಕೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು. ಆದರೆ ಇವರಲ್ಲಿ ಹೆಚ್ಚಿನ ಜನರು ಮಾಸ್ಕ್ ಹಾಕಿರಲಿಲ್ಲ. ದೈಹಿಕ ಅಂತರ ಕಾಪಾಡಿರಲಿಲ್ಲ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿನ ಗೆಲುವು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಬೆಂಗಳೂರು ಮಹಾನಗರ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಗಮಿಸಿದಾಗ ಮಾಸ್ಕ್ ಧರಿಸಿದ್ದರಾದರೂ, ಅವರ ಸುತ್ತ ಮುತ್ತ ಇದ್ದ ಹೆಚ್ಚಿನ ಜನರು ಮಾಸ್ಕ್ ಧರಿಸಿರುವುದೋ, ದೈಹಿಕ ಅಂತರ ಕಾಪಾಡಿರುವುದೋ ಮಾಡಿರಲಿಲ್ಲ.

ಒಟ್ಟಿನಲ್ಲಿ ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿಗಳು ತಾವೇ ಮಾಡಿರುವ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ? ಸಾಮಾನ್ಯ ಜನರನ್ನು ಅಡ್ಡಗಟ್ಟಿ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ದಂಡ ಕಟ್ಟಿಸಿಕೊಳ್ಳಲಿದ್ದಾರೆಯೇ? ಕಾದು ನೋಡಬೇಕಾಗಿದೆ.

ಇದನ್ನೂ ನೋಡಿ: ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...