Homeಕರೋನಾ ತಲ್ಲಣಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿ ತಮ್ಮದೆ ಸರ್ಕಾರದ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ?

- Advertisement -
- Advertisement -

ರಾಜ್ಯದಲ್ಲಿ ಇನ್ನೂ ಕೊರೊನಾ ಮಾರ್ಗಸೂಚಿಗಳು ಜಾರಿಯಲ್ಲಿದೆ. ನಗರದ ಸಾರ್ವಜನಿಕ ಸ್ಥಗಳಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ ಹಾಗೂ ಗ್ರಾಮಗಳಲ್ಲಿ 100 ರೂಗಳನ್ನು ದಂಡ ಕಟ್ಟಬೇಕಾಗುತ್ತದೆ. ಯಾವುದೆ ರೀತಿಯ ಸಭೆಯಲ್ಲಿ 200 ಕ್ಕಿಂತ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಆದರೆ ಈ ಮಾರ್ಗಸೂಚಿಗಳು ಕೇವಲ ಸಾಮನ್ಯರಿಗಷ್ಟೇ ಇದೆಯೆ ಎಂಬ ಪ್ರಶ್ನೆಗಳು ಕಾಡುತ್ತಿದೆ.

ಇತ್ತೀಚೆಗಷ್ಟೆ ದಿನಗೂಲಿ ಕೆಲಸ ಮಾಡುವ ಮಹಿಳೆಯಿಂದ 250 ರೂ ದಂಡವನ್ನು ಮಾರ್ಷಲ್‌ಗಳು ಕಟ್ಟಿಸಿಕೊಂಡಿದ್ದರು. ಒಂದು ದಿನದ ಕೂಲಿ ಕಳೆದು ಕೊಂಡ ಮಹಿಳೆಯ ರೋದನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಇದಕ್ಕೆ ಇಡೀ ರಾಜ್ಯದ ಜನರು ಮರುಗಿದ್ದರು. ದಿನದಿನವು ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆಂದು ಸಾಮಾನ್ಯ ಜನರಿಂದ ಯಾವುದೆ ಕರುಣೆ ತೋರದೆ ದಂಡಗಳನ್ನು ಕಟ್ಟಿಸಲಾಗುತ್ತಿದೆ. ಆದರೆ ಈ ನಿಯಮಗಳು ರಾಜ್ಯವನ್ನು ಆಳುತ್ತಿರುವ ಬಿಜೆಪಿಯ ಸಭೆಗೋ ಅಥವಾ ಬಿಜೆಪಿ ನಾಯಕರಿಗೂ ಅನ್ವಯಿಸುವುದಿಲ್ಲ ಎಂಬ ಅಲಿಖಿತ ನಿಯಮವಿದೆ ಎನ್ನುವ ಅನುಮಾನವಿದೆ.

ಇದನ್ನೂ ನೋಡಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಬುಧವಾರ ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೆಸ್ ಮೈದಾನದಲ್ಲಿ ನಡೆದ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ರೀತಿಯ ಕೊರೊನಾ ನೀತಿ ನಿಯಮಗಳನ್ನು ತೂರಲಾಗಿತ್ತು. ಕಾರ್ಯಕ್ರಮದ ವೇದಿಕೆಯ ಮುಂಭಾಗ ಸಾವಿರಾರು ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಆದರೆ ಹೆಚ್ಚಿನ ಕಾರ್ಯಕರ್ತರು ಮಾಸ್ಕ್ ಧರಿಸಿರಲಿಲ್ಲ.

ಅಲ್ಲದೆ, ವೇದಿಕೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು. ಆದರೆ ಇವರಲ್ಲಿ ಹೆಚ್ಚಿನ ಜನರು ಮಾಸ್ಕ್ ಹಾಕಿರಲಿಲ್ಲ. ದೈಹಿಕ ಅಂತರ ಕಾಪಾಡಿರಲಿಲ್ಲ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿನ ಗೆಲುವು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಬೆಂಗಳೂರು ಮಹಾನಗರ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಗಮಿಸಿದಾಗ ಮಾಸ್ಕ್ ಧರಿಸಿದ್ದರಾದರೂ, ಅವರ ಸುತ್ತ ಮುತ್ತ ಇದ್ದ ಹೆಚ್ಚಿನ ಜನರು ಮಾಸ್ಕ್ ಧರಿಸಿರುವುದೋ, ದೈಹಿಕ ಅಂತರ ಕಾಪಾಡಿರುವುದೋ ಮಾಡಿರಲಿಲ್ಲ.

ಒಟ್ಟಿನಲ್ಲಿ ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿಗಳು ತಾವೇ ಮಾಡಿರುವ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ? ಸಾಮಾನ್ಯ ಜನರನ್ನು ಅಡ್ಡಗಟ್ಟಿ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ದಂಡ ಕಟ್ಟಿಸಿಕೊಳ್ಳಲಿದ್ದಾರೆಯೇ? ಕಾದು ನೋಡಬೇಕಾಗಿದೆ.

ಇದನ್ನೂ ನೋಡಿ: ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...