Homeಕರೋನಾ ತಲ್ಲಣಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ಮುಖ್ಯಮಂತ್ರಿ ಉಪಸ್ಥಿತಿಯಲ್ಲೆ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆ!

ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿ ತಮ್ಮದೆ ಸರ್ಕಾರದ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ?

- Advertisement -
- Advertisement -

ರಾಜ್ಯದಲ್ಲಿ ಇನ್ನೂ ಕೊರೊನಾ ಮಾರ್ಗಸೂಚಿಗಳು ಜಾರಿಯಲ್ಲಿದೆ. ನಗರದ ಸಾರ್ವಜನಿಕ ಸ್ಥಗಳಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ ಹಾಗೂ ಗ್ರಾಮಗಳಲ್ಲಿ 100 ರೂಗಳನ್ನು ದಂಡ ಕಟ್ಟಬೇಕಾಗುತ್ತದೆ. ಯಾವುದೆ ರೀತಿಯ ಸಭೆಯಲ್ಲಿ 200 ಕ್ಕಿಂತ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದೆ. ಆದರೆ ಈ ಮಾರ್ಗಸೂಚಿಗಳು ಕೇವಲ ಸಾಮನ್ಯರಿಗಷ್ಟೇ ಇದೆಯೆ ಎಂಬ ಪ್ರಶ್ನೆಗಳು ಕಾಡುತ್ತಿದೆ.

ಇತ್ತೀಚೆಗಷ್ಟೆ ದಿನಗೂಲಿ ಕೆಲಸ ಮಾಡುವ ಮಹಿಳೆಯಿಂದ 250 ರೂ ದಂಡವನ್ನು ಮಾರ್ಷಲ್‌ಗಳು ಕಟ್ಟಿಸಿಕೊಂಡಿದ್ದರು. ಒಂದು ದಿನದ ಕೂಲಿ ಕಳೆದು ಕೊಂಡ ಮಹಿಳೆಯ ರೋದನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಇದಕ್ಕೆ ಇಡೀ ರಾಜ್ಯದ ಜನರು ಮರುಗಿದ್ದರು. ದಿನದಿನವು ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆಂದು ಸಾಮಾನ್ಯ ಜನರಿಂದ ಯಾವುದೆ ಕರುಣೆ ತೋರದೆ ದಂಡಗಳನ್ನು ಕಟ್ಟಿಸಲಾಗುತ್ತಿದೆ. ಆದರೆ ಈ ನಿಯಮಗಳು ರಾಜ್ಯವನ್ನು ಆಳುತ್ತಿರುವ ಬಿಜೆಪಿಯ ಸಭೆಗೋ ಅಥವಾ ಬಿಜೆಪಿ ನಾಯಕರಿಗೂ ಅನ್ವಯಿಸುವುದಿಲ್ಲ ಎಂಬ ಅಲಿಖಿತ ನಿಯಮವಿದೆ ಎನ್ನುವ ಅನುಮಾನವಿದೆ.

ಇದನ್ನೂ ನೋಡಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಬುಧವಾರ ಬೆಂಗಳೂರಿನ ಗಾಯತ್ರಿ ವಿಹಾರ ಪ್ಯಾಲೆಸ್ ಮೈದಾನದಲ್ಲಿ ನಡೆದ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ರೀತಿಯ ಕೊರೊನಾ ನೀತಿ ನಿಯಮಗಳನ್ನು ತೂರಲಾಗಿತ್ತು. ಕಾರ್ಯಕ್ರಮದ ವೇದಿಕೆಯ ಮುಂಭಾಗ ಸಾವಿರಾರು ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಆದರೆ ಹೆಚ್ಚಿನ ಕಾರ್ಯಕರ್ತರು ಮಾಸ್ಕ್ ಧರಿಸಿರಲಿಲ್ಲ.

ಅಲ್ಲದೆ, ವೇದಿಕೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು. ಆದರೆ ಇವರಲ್ಲಿ ಹೆಚ್ಚಿನ ಜನರು ಮಾಸ್ಕ್ ಹಾಕಿರಲಿಲ್ಲ. ದೈಹಿಕ ಅಂತರ ಕಾಪಾಡಿರಲಿಲ್ಲ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿನ ಗೆಲುವು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಬೆಂಗಳೂರು ಮಹಾನಗರ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಗಮಿಸಿದಾಗ ಮಾಸ್ಕ್ ಧರಿಸಿದ್ದರಾದರೂ, ಅವರ ಸುತ್ತ ಮುತ್ತ ಇದ್ದ ಹೆಚ್ಚಿನ ಜನರು ಮಾಸ್ಕ್ ಧರಿಸಿರುವುದೋ, ದೈಹಿಕ ಅಂತರ ಕಾಪಾಡಿರುವುದೋ ಮಾಡಿರಲಿಲ್ಲ.

ಒಟ್ಟಿನಲ್ಲಿ ರಾಜ್ಯದ ಕಾನೂನು ಕಾಯ್ದೆಗಳನ್ನು ರೂಪಿಸುವ ಮುಖ್ಯಮಂತ್ರಿಗಳು ತಾವೇ ಮಾಡಿರುವ ನಿಯಮಗಳನ್ನು ಪಾಲಿಸದೇ, ಅದನ್ನು ಧಿಕ್ಕರಿಸುವುದು ಎಷ್ಟು ಸರಿ? ಸಾಮಾನ್ಯ ಜನರನ್ನು ಅಡ್ಡಗಟ್ಟಿ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ದಂಡ ಕಟ್ಟಿಸಿಕೊಳ್ಳಲಿದ್ದಾರೆಯೇ? ಕಾದು ನೋಡಬೇಕಾಗಿದೆ.

ಇದನ್ನೂ ನೋಡಿ: ಟ್ರಂಪ್ ಪರ ಬಿಜೆಪಿಯ ಧ್ವನಿಗಳು..! ಏಕಾಏಕಿ ಅಭಿವ್ಯಕ್ತಿ ಸ್ವಾಂತಂತ್ರ್ಯದ ಜಪ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...