Homeಮುಖಪುಟರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

"ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ"

- Advertisement -
- Advertisement -

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯುತ್ತಿದ್ದಾರೆ. ಇತ್ತೀಚೆಗೆ ಕರ್ನಾಲ್‌ ಸಮೀಪದ ಗ್ರಾಮವೊಂದರಲ್ಲಿ ಹರಿಯಾಣ ಮುಖ್ಯಮಂತ್ರಿ ತನ್ನ ಸಭೆಯನ್ನು ಕೂಡಾ ರದ್ದುಪಡಿಸಿದ್ದರು.

ಈ ಹಿನ್ನೆಲೆಯಲ್ಲಿ “ಮುಂದಿನ ಆದೇಶದವರೆಗೆ ಹರಿಯಾಣ ರಾಜ್ಯದಲ್ಲಿ  ಕೃಷಿ ಕಾಯ್ದೆ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ” ಎಂದು ಆದೇಶ ಹೊರಡಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಕರ್ನಾಲಲ್‌ನಲ್ಲಿ ಮುಖ್ಯಮಂತ್ರಿಯವರ ಭೇಟಿಗೆ ತೀವ್ರ ವಿರೋಧ ವ್ಯಕ್ತವಾಗಿ ಅದು ಅತೀರೇಕಕ್ಕೇರಿತ್ತು. ನಂತರ ಮುಖ್ಯಮಂತ್ರಿ ತಮ್ಮ ಭೇಟಿಯನ್ನೇ ರದ್ದುಪಡಿಸಿದರು. ಈ ಕಾರಣದಿಂದಾಗಿ ಯಾವುದೇ ಕೃಷಿ ಕಾಯ್ದೆ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಡಿ ಎಂದು ಗೃಹ ಸಚಿವರು ಆದೇಶ ಹೊರಡಿಸಿದ್ದಾರೆ. ನಮಗೆ ರೈತರೊಂದಿಗಿನ ಮುಖಾಮುಖಿ ಇಷ್ಟವಿಲ್ಲ ಎಂದು ಹರಿಯಾಣದ ಶಿಕ್ಷಣ ಸಚಿವ ಕನ್ವರ್‌ ಪಾಲ್‌ ಗುಜ್ಜರ್‌ ಹೇಳಿದ್ದಾರೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

“ಕಾರ್ಯಕ್ರಮದ ಸ್ಥಳದಲ್ಲಿ ರೈತರು ಹೇಗೆ ವರ್ತಿಸಿದ್ದಾರೆ ಎಂಬುದನ್ನು ನಾವು ಹೇಳಬೇಕಾಗಿಲ್ಲ. ಕುರ್ಚಿಗಳನ್ನು ಎಸೆದು ವೇದಿಕೆಯನ್ನು ಹಾಳುಗೆಡವಿ, ಮುಖ್ಯಮಂತ್ರಿಗಳ ಹೆಲಿಕಾಪ್ಟರ್‌ ಲ್ಯಾಂಡ್‌ ಆಗಲು ಕೂಡಾ ಅನುಮತಿಸಿಲ್ಲ” ಎಂದು ಆರೋಪಿಸಿದರು.

ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಜನವರಿ 10 ರಂದು ಕರ್ನಾಲ್ ಬಳಿಯ ಕೈಮ್ಲಾ ಎಂಬ ಗ್ರಾಮಕ್ಕೆ ಭೇಟಿ ನೀಡಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ಉಪಯೋಗಗಳ ಬಗ್ಗೆ ಭಾಷಣ ಮಾಡಬೇಕಿತ್ತು. ಮಹಾಪಂಚಾಯತ್ ಎಂಬ ಹೆಸರಿನ ಆ ಕಾರ್ಯಕ್ರಮದಲ್ಲಿ ರೈತರ ಜೊತೆ ಸಂವಾದ ನಡೆಸಬೇಕಿತ್ತು. ಆದರೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವೇದಿಕೆಗೆ ನುಗ್ಗಿದ ಕಾಯ್ದೆ ವಿರೋಧಿ ರೈತರು ಕೃಷಿ ಕಾಯ್ದೆಗಳ ವಿರುದ್ಧ, ಕೇಂದ್ರ ಸರ್ಕಾರ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದ್ದಾರೆ. ಕುರ್ಚಿಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ. ಇದರಿಂದ ಸಿಎಂ ಕಾರ್ಯಕ್ರಮವನ್ನೆ ರದ್ದುಗೊಳಿಸಿ ಮುಖಭಂಗಕ್ಕೊಳಾಗಾಗಿದ್ದಾರೆ.

ಇದನ್ನೂ ಓದಿ: ಹರಿಯಾಣ ಸಿಎಂ ಕರ್ನಾಲ್ ಭೇಟಿ ವೇಳೆ ರೈತರ ಮೇಲೆ ಮತ್ತೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ವಿರುದ್ಧವಿದ್ದು, ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಪಾಡುತ್ತವೆ ಎಂದು ರೈತರು ಆರೋಪಿಸಿದ್ದಾರೆ. ಅದರಲ್ಲಿಯೂ ಪಂಜಾಬ್ ಮತ್ತು ಹರಿಯಾಣ ರೈತರು ಅತಿ ಹೆಚ್ಚು ಗೋಧಿ ಮತ್ತು ಭತ್ತ ಬೆಳೆಯುತ್ತಿದ್ದು ಎಂಎಸ್‌ಪಿಯನ್ನೇ ನಂಬಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳಲ್ಲಿ ಎಂಎಸ್‌ಪಿ ಬಗ್ಗೆ ಚಕಾರವಿಲ್ಲ. ಹಾಗಾಗಿ ಅಲ್ಲಿನ ರೈತರ ಮಾಡು ಇಲ್ಲವೆ ಮಡಿ ಹೋರಾಟಕ್ಕೆ ಅಣಿಯಾಗಿದ್ದಾರೆ.

ಆದರೆ ಕೇಂದ್ರ ಕೃಷಿ ಕಾಯ್ದೆಗಳನ್ನು ಬಲವಾಗಿ ಸಮರ್ಥಿಸಿಕೊಂಡಿದ್ದು ದೇಶಾದ್ಯಂತ 700 ಕಾರ್ಯಕ್ರಮಗಳ ಮೂಲಕ ಅವುಗಳ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೊರಟಿದೆ. ಅದರ ಭಾಗವಾಗಿಯೇ ಹರಿಯಾಣದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ರೈತರ ಹೋರಾಟಕ್ಕೆ ಬೆದರಿ ಅದನ್ನು ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...