Homeಅಂತರಾಷ್ಟ್ರೀಯ'2 ಬಾರಿ ಮಹಾಭಿಯೋಗ' - ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ.

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ.

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇನ್ನು ಎರಡನೇ ಬಾರಿ ಮಹಾಭಿಯೋಗಕ್ಕೆ ಗುರಿಯಾಗಿರುವ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಮೇಲೆ ಕಳೆದ ವಾರ ಅನಾಗರಿಕ ದಾಳಿಯಾಗಿದ್ದನ್ನು ನಾವು ನೋಡಿದ್ದೇವೆ. ಇದು ನಮ್ಮ ರಾಷ್ಟ್ರದ 244 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದ ಕೃತ್ಯವಾಗಿತ್ತು” ಎಂದು ಬೈಡನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...