Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...