Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...