Homeಮುಖಪುಟಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರು IISc ಪ್ರಾಧ್ಯಾಪಕಿ ರೋಹಿಣಿ ಗೋಡ್ಬೋಲೆಗೆ ಫ್ರಾನ್ಸ್‌‌ನ ಅತ್ಯುನ್ನತ ಗೌರವ

ಬೆಂಗಳೂರಿನವರಾದ ಇವರು ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ನ ಹೈ ಎನರ್ಜಿ ಫಿಸಿಕ್ಸ್‌ ಸೆಂಟರ್‌ನಲ್ಲಿ ಬೋಧಿಸುವ ಭೌತವಿಜ್ಞಾನಿ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಫ್ರಾನ್ಸ್ ಸರ್ಕಾರ ಅತ್ಯುನ್ನತ ಗೌರವವಾದ ‘ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಸಂದಿದೆ.

ಬೆಂಗಳೂರಿನವರಾದ ಪ್ರೊ. ರೋಹಿಣಿ ಗೋಡ್ಬೋಲೆ ಪದ್ಮಶ್ರೀ ಪುರಸ್ಕೃತರಾಗಿದ್ದು, ಜೆಸಿ ಬೋಸ್ ಫೆಲೋ ಕೂಡ ಆಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಬೋಧಿಸುತ್ತಿದ್ದಾರೆ. ಸ್ಟೋನಿ ಬ್ರೂಕ್‌ನಲ್ಲಿರುವ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನಿಂದ ಸೈದ್ಧಾಂತಿಕ ಕಣ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಅದಕ್ಕೂ ಮೊದಲು ಅವರು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ಈ ಬಗ್ಗೆ ಐಐಎಸ್‌ಸಿಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಲಾಗಿದೆ. ಟ್ವೀಟ್‌ನಲ್ಲಿ, ”ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ ’ನ್ಯಾಷನಲ್ ಆರ್ಡರ್‌ ಆಫ್ ಮೆರಿಟ್’ ಪಡೆದಿರುವುದಕ್ಕೆ ಪ್ರೊಫೆಸರ್ ರೋಹಿಣಿ ಗೋಡ್ಬೋಲೆ ಅವರಿಗೆ ಅಭಿನಂದನೆಗಳು! ಫ್ರಾನ್ಸ್ ಮತ್ತು ಭಾರತದ ಸಹಯೋಗಗಳಲ್ಲಿ ನಡೆದ ’ವಿಜ್ಞಾನದಲ್ಲಿ ಮಹಿಳೆಯರನ್ನು ಉತ್ತೇಜಿಸುವ ಕಾರ್ಯಗಳಲ್ಲಿ’ ನೀಡಿದ ಕೊಡುಗೆಗಳಿಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ” ಎಂದು ಬರೆದಿದೆ.

ಪ್ರೊಫೆಸರ್‌ ರೋಹಿಣಿ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವರಾಗಿದ್ದಾರೆ. ಮಹಿಳೆಯರು ಉನ್ನತ ಶಿಕ್ಷಣವನ್ನು ಆರಿಸಿಕೊಳ್ಳುತ್ತಿದ್ದರೂ ವಿಜ್ಞಾನ ಮತ್ತು ಸಂಶೋಧನಾ ಪಿಎಚ್‌ಡಿ ಕೋರ್ಸ್‌ಗಳಲ್ಲಿ ಇನ್ನೂ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ಬಿಬಿಸಿ ಸ್ಪೂರ್ತಿದಾಯಕ ಮಹಿಳೆಯರೆನಿಸಿಕೊಂಡ ಇಸೈವಾಣಿ, ಬಿಲ್ಕೀಸ್!

“ವಿಜ್ಞಾನ ಸಂಶೋಧನೆ ವಿಷಯದಲ್ಲಿ ಕಾಲೇಜಿನಿಂದ ವಿಶ್ವವಿದ್ಯಾಲಯಕ್ಕೆ ಬರುವ ಮಹಿಳೆಯರಲ್ಲಿ 10% ಜನ ಹಿಂದೆ ಸರಿಯುತ್ತಾರೆ. ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿಗೆ 5% ಮಹಿಳೆಯರು ಹಿಂದೆ ಸರಿಯುತ್ತಾರೆ ಮತ್ತು ಪಿಎಚ್‌ಡಿಯಿಂದ ಯಶಸ್ವಿ ವೈಜ್ಞಾನಿಕ ವೃತ್ತಿಜೀವನಕ್ಕೆ 15% ಮಹಿಳೆಯರು ಹಿಂದೆ ಸರಿಯುತ್ತಾರೆ” ಎಂದು ರೋಹಿಣಿ ಅಭಿಪ್ರಾಯಪಡುತ್ತಾರೆ. ವೈಜ್ಞಾನಿಕ ಸಂಶೋಧನೆಯಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವಂತಾಗಲು ಸಾಮಾಜಿಕ ಬದಲಾವಣೆ ಸೇರಿದಂತೆ ನೀತಿ ನಿರೂಪಣೆಗಳಲ್ಲಿಯೂ ಬದಲಾವಣೆಗಳನ್ನೂ ಮಾಡುವ ಅವಶ್ಯಕತೆಯಿದೆ ಎಂದು ಅವರು ಹೇಳುತ್ತಾರೆ.

1982 ರಲ್ಲಿ ಬಾಂಬೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿರುವ ರೋಹಿಣಿ, ನಂತರ 1995 ರಲ್ಲಿ ಐಐಎಸ್ಸಿಯಲ್ಲಿ ಸಹಾಯಕ ಪ್ರಾಧ್ಯಾಪಕರಾದರು. ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು ತಮ್ಮ ವೃತ್ತಿಜೀವನದಲ್ಲಿ ವಿವಿಧ ವೈಜ್ಞಾನಿಕ ವಿಷಯಗಳ ಬಗ್ಗೆ 100 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಸಿಇಆರ್ಎನ್‌ನ ಯುರೋಪಿಯನ್ ಆರ್ಗನೈಸೇಶನ್ ಫಾರ್ ನ್ಯೂಕ್ಲಿಯರ್ ರಿಸರ್ಚ್‌ನಲ್ಲಿ ಅವರು ನೀಡಿದ ಕೊಡುಗೆ ಅವರನ್ನು ಹೆಚ್ಚು ಜನಪ್ರಿಯರನ್ನಾಗಿಸಿದೆ.


ಇದನ್ನೂ ಓದಿ: ಇಂದಿರಾ ಗಾಂಧಿ ಜನ್ಮದಿನ: ಮಹಿಳೆಯರಿಗಾಗಿ ಉಚಿತ ಮೊಬೈಲ್ ಕ್ಲಿನಿಕ್ ಆರಂಭಿಸಿದ ಚತ್ತೀಸ್‌ಗಢ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...