Homeರೈತ ಹೋರಾಟರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

ಈ ಹಾಡು ವೈರಲ್ ಆದ ನಂತರ ಶ್ರೀ ಬ್ರಾರ್‌ರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 50 ದಿನಗಳನ್ನು ಪೂರೈಸಿದೆ. ಅದೇ ರೀತಿಯಾಗಿ ಈ ಹೋರಾಟ ಬೆಂಬಲಿಸಿ ತಯಾರಾದ ಕಿಸಾನ್ ಆಂಥೆಮ್ (ರೈತ ಗೀತೆ) ಅನ್ನು ಬರೋಬ್ಬರಿ 2 ಕೋಟಿ ಜನ ವೀಕ್ಷಿಸುವ ಮೂಲಕ ಬೆಂಬಲ ಸೂಚಿಸಿದ್ದಾರೆ. ದೆಹಲಿ ಹೋರಾಟದ ಅಧಿಕೃತ ಗೀತೆಯಾಗಿ ಹೊರಹೊಮ್ಮಿರುವ ಈ ಕಿಸಾನ್ ಆಂಥೆಮ್ ರಚಿಸಿದ ಪವನ್ ದೀಪ್‌ ಆಲಿಯಾಸ್ ಶ್ರೀ ಬ್ರಾರ್‌ರನ್ನು ಪಟಿಯಾಲ CIA ಪೊಲೀಸರು ಬಂಧಿಸಿದ್ದು ಒಂದು ವಾರಗಳ ನಂತರ ನಿನ್ನೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶ್ರೀ ಬ್ರಾರ್ ರಚಿಸಿರುವ “ಸ್ವರಾಜ ಪಿಚೆ ಬರಿಗೇಟ್ ಪಾಯೆ ಹೋಯಿ ನೆ” ಹಾಡು ಲಕ್ಷಾಂತರ ಜನರಿಗೆ ಈ ಆಂದೋಲನಕ್ಕೆ ಸೇರಲು ಪ್ರೇರಣೆ ನೀಡಿತು. ಆದರೆ ಇದು ಕೇಂದ್ರ ಮತ್ತು ಗೃಹ ಸಚಿವಾಲಯದ ಕಣ್ಣು ಕೆಂಪಾಗಿಸಿತು. ಇದಕ್ಕಾಗಿಯೇ ಶ್ರೀ ಬ್ರಾರ್ ಅವರು ಒಂದು ತಿಂಗಳ ಹಿಂದೆ ಬರೆದ ಮತ್ತೊಂದು ಹಾಡಿಗೆ ಸಂಬಂಧಿಸಿದಂತೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಅವರನ್ನು ಪಟಿಯಾಲ ಪೊಲೀಸರು ಬಂಧಿಸಿದ್ದಾರೆ ಎಂದು ಯುವ ಅಕಾಲಿ ದಳದ ಅಧ್ಯಕ್ಷ ಪರಂಬನ್ಸ್ ಸಿಂಗ್ ರೊಮಾನಾ ಆರೋಪಿಸಿದ್ದಾರೆ.

ಅವರ ಬಂಧನದ ಹಿಂದೆ ಗೃಹ ಸಚಿವ ಅಮಿತ್ ಶಾರವರ ಹುನ್ನಾರವಿದೆ. ಪಟಿಯಾಲ ಪೊಲೀಸರು ಶ್ರೀ ಬ್ರಾರ್‌ರನ್ನು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ.

ರಾಜಸ್ಥಾನದ ಹನುಮನ್‌ಗರ್‍ ಜಿಲ್ಲೆಯ ಸಿಲ್ವಾಲಾ ಖುರ್ದ್ ಗ್ರಾಮದವರಾದ ಶ್ರೀ ಬ್ರಾರ್ ರವರು ಒಂದು ತಿಂಗಳ ಹಿಂದೆ ಜಾನ್ ಎಂಬ ಗೀತೆಯನ್ನು ಬಿಡುಗಡೆ ಮಾಡಿದ್ದರು. ಆನಂತರ ಕಿಸಾನ್ ಆಂಥೆಮ್ ರಚಿಸಿದ್ದರು. ಇದು ಸಾಕಷ್ಟು ವೈರಲ್ ಆಯಿತು. ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ಪ್ರತಿಯೊಂದು ಟ್ರಾಕ್ಟರ್‌ಗಳಲ್ಲಿಯೂ ಪ್ರತಿದಿನ ಈ ಹಾಡು ಜೋರಾಗಿ ಕೇಳಿಬರುತ್ತದೆ. ಒಂದು ತಿಂಗಳ ಹಿಂದೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಈ ಹಾಡನ್ನು ಇದುವರೆಗೂ 2.1 ಕೋಟಿ ಜನ ವೀಕ್ಷಿಸಿದ್ದಾರೆ. ಅಲ್ಲದೆ 8 ಲಕ್ಷಕ್ಕೂ ಅಧಿಕ ಲೈಕ್ಸ್‌ಗಳು ದಾಖಲಾಗಿವೆ.

ವೈರಲ್ ಆದ ಕಿಸಾನ್ ಆಂಥೆಮ್ ನೋಡಿ.

ಈ ಹಾಡು ವೈರಲ್ ಆದ ನಂತರ ಅವರನ್ನು ಹಣಿಯುವುದಕ್ಕಾಗಿ ಜನವರಿ 03 ರಂದು ಅವರ ಮೇಲೆ ಹಿಂಸೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪ್ರಚೋದನೆ ಮತ್ತು ಅಸಮಾಧಾನ ಕಾಯ್ದೆ 1922 ರ ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪಟಿಯಾಲದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದು ಸ್ವೀಕರಾರ್ಹವಲ್ಲ ಎಂಬ ಟೀಕೆಗಳು ವ್ಯಕ್ತವಾಗಿದೆ.


ಇದನ್ನೂ ಓದಿ: ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...