Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...