Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...