Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...