Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...