Homeಮುಖಪುಟಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ಭಾರತದ ಮೊದಲ ದೇಸಿ ಕೊವಿಡ್ ಲಸಿಕೆ ಎನಿಸಿರುವ ಕೊವ್ಯಾಕ್ಸಿನ್‌ಗೆ ಈಗ ಜನ-ಸಂಘಟನೆಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ನಡೆಯುತ್ತಿರುವ ಕೊವ್ಯಾಕ್ಸಿನ್ ಮೂರನೆ ಹಂತದ ಟ್ರಯಲ್ಸ್ ರದ್ದು ಮಾಡಬೇಕು, ಮೂರನೇ ಹಂತದಲ್ಲಿ ಲಸಿಕೆ ಸ್ವೀಕರಿಸಿ ಮೃತರಾದ ವ್ಯಕ್ತಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿಯವರಿಗೆ ಭೋಪಾಲ್ ಅನಿಲ ದುರಂತದ ಸಂತ್ರಸ್ತರ ಪರ ಕೆಲಸ ಮಾಡುತ್ತಿರುವ ನಾಲ್ಕು ಸಂಘಟನೆಗಳು ಪತ್ರ ಬರೆದಿವೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ದೇಶದ ಐಕೈಕ ‘ದೇಸಿ’ ಲಸಿಕೆ ಎಂದು ಹೆಸರು ಪಡೆದಿದೆ.

ಟ್ರಯಲ್ಸ್ ನಡೆಸುತ್ತಿರುವ ಭೋಪಾಲ್‌ನ ಪೀಪಲ್ಸ್ ಕಾಲೇಜ್ ಆಫ್ ಮೆಡಿಸಿನ್ & ರಿಸರ್ಚ್, ಲಸಿಕೆಯ ಡೋಸ್‌ನಿಂದ ಸಾವು ಸಂಭವಿಸಿಲ್ಲ ಎಂಬ ಹೇಳಿಕೆ ನೀಡಿದ್ದು, ಮಧ್ಯಪ್ರದೇಶ ಸರ್ಕಾರ ಕೂಡ ಕಾಲೇಜಿಗೆ ಕ್ಲೀನ್‌ಚಿಟ್ ನೀಡಿದೆ.

ಸಾವಿಗೀಡಾದ ಸ್ವಯಂಸೇವಕ ಭರ್ತಿ (ರಿಕ್ರೂಟ್‌ಮೆಂಟ್) ಸಂದರ್ಭದಲ್ಲಿ ಎಲ್ಲ ಮಾನದಂಡಗಳಲ್ಲು ತೇರ್ಗಡೆಯಾಗಿದ್ದ ಮತ್ತು ಲಸಿಕೆಯ ಡೋಸ್ ನೀಡಿದ ಹಿಂದಿನ 7 ದಿನ ಕಾಲ ಆರೋಗ್ಯವಂತ ಸ್ಥಿತಿಯಲ್ಲೇ ಇದ್ದ, ಯಾವುದೇ ಅಡ್ಡ ಪರಿಣಾಮ ಕೂಡ ಸಂಭವಿಸಿರಲಿಲ್ಲ ಎಂದು ಹಲವು ಮಾಧ್ಯಮಗಳ ವರದಿಗಳು ಹೇಳುತ್ತಿವೆ.

ಭೋಪಾಲ್‌ನ ಗಾಂಧಿ ಮೆಡಿಕಲ್ ಕಾಲೇಜ್ ನೀಡಿರುವ ಮರಣೋತ್ತರ ವರದಿ ಉಲ್ಲೇಖಿಸಿರುವ ಭಾರತ್ ಬಯೋಟೆಕ್, ‘ಕಾರ್ಡಿಯೋ-ರೆಸ್ಪಿರೆಟರಿ ಸಮಸ್ಯೆಯಿಂದ ಸಾವು ಸಂಭವಿಸಿದೆ, ಬಹುಷಃ ವಿಷಪ್ರಾಸನ ನಡೆದಿರಬಹುದು’ ಎಂದು ಹೇಳುತ್ತಿದೆ.

ಆದರೆ, ಈ ಲಸಿಕೆಯ ಟ್ರಯಲ್ಸ್ ಅನ್ನು ಕೂಡಲೇ ನಿಲ್ಲಿಸಬೇಕೆಂದು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘ, ಭೋಪಾಲ್ ಗ್ಯಾಸ್ ಪೀಡಿತ್ ಪುರುಷ್ ಸಂಘ, ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಮತ್ತು ಚಿಲ್ಡ್ರನ್ ಅಗೇನಸ್ಟ್ ಡೌ ಕಾರ್ಬೈಡ್- ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಿವೆ.

‘ಲಸಿಕೆ ಪ್ರಯೋಗಗೊಂಡ 1,700 ಜನರ ಪೈಕಿ ಕನಿಷ್ಠ 700 ಜನರು ಭೋಪಾಲ್ ಅನಿಲ ದುರಂತದಿಂದ ಸಂಭವಿಸಿದ ಕಾಯಿಲೆಗಳಿಂದ ನರಳುತ್ತಿದ್ದಾರೆ. ಲಸಿಕೆ ಪಡೆದ 10 ದಿನದಲ್ಲೇ ಒಬ್ಬ ಅನಿಲ ದುರಂತ ಸಂತ್ರಸ್ತ ತೀರಿಕೊಂಡಿದ್ದು, ಲಸಿಕೆ ಪಡೆದ ಇತರ ಸಂತ್ರಸ್ತರು ಗಂಭೀರ ಆರೋಗ್ಯ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಇಂತಹ ಅಸಮರ್ಪಕ ಟ್ರಯಲ್ಸ್ ಕಾರಣದಿಂದ 12 ವರ್ಷದ ಹಿಂದೆ 13 ಅನಿಲ ದುರಂತ ಸಂತ್ರಸ್ತರು ಸಾವೀಗೀಡಾಗಿದ್ದರು. ಈಗಲೂ ಆ ಘಟನೆಗೆ ಕಾರಣಾದವರ ಮೇಲೆ ಕ್ರಮ ಜರುಗಿಸಿಲ್ಲ’ ಎಂದು ಮಾಧ್ಯಮಗಳಿಗೆ ಹೇಳಿರುವ ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಸಂಘದ ರಷೀದಾ ಬೀ, ಇಂಥದ್ದು ಮತ್ತೆ ಸಂಭವಿಸಲಾರದು ಎಂದು ಪ್ರಧಾನಿ ಭರವಸೆ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

‘ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅವರ ಸಮ್ಮತಿಯಿಲ್ಲದೇ ಕೊವ್ಯಾಕ್ಸಿನ್ ಲಸಿಕೆಯ ಟ್ರಯಲ್ ಶಾಟ್ಸ್/ಡೋಸ್ ನೀಡಲಾಗಿದೆ. ಟ್ರಯಲ್ಸ್ ನಂತರ ಅವರ ಆರೋಗ್ಯ ಕುರಿತ ಅಪ್ಡೇಟ್‌ಗಳನ್ನು ಕೂಡ ಮೆಂಟೇನ್ ಮಾಡಿಲ್ಲ. ಕೆಲವರು ಟ್ರಯಲ್‌ನಿಂದ ಹೊರಬಂದರು. ಅವರಿಗೆ ನಂತರದಲ್ಲಿ ಸೂಕ್ತ ಆರೋಗ್ಯ ಚಿಕಿತ್ಸೆಯ ಏರ್ಪಾಟನ್ನೂ ಮಾಡಿಲ್ಲ’ ಎಂದು ಭೋಪಾಲ್ ಗ್ರೂಪ್ ಫಾರ್ ಇನ್ಫಾರ್ಮೆಷನ್ & ಆಕ್ಚನ್ ಸಂಘಟನೆಯ ರೀಚಾ ಧಿಂಗ್ರಾ ಕಿಡಿ ಕಾರಿದ್ದಾರೆ.

‘ಕಂಪನಿಯೊಂದನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಆರೋಗ್ಯವನ್ನೇ ಹಾಳು ಮಾಡುತ್ತಿದೆ’ ಎಂದು ಸಂಘಟನೆಗಳು ದೂಷಿಸಿವೆ. ಮಧ್ಯಪ್ರದೇಶದ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ‘ಭಾರತ್ ಬಯೋಟೆಕ್ ತಪ್ಪು ಮಾಡಿಲ್ಲ’ ಎಂದು ಪ್ರತಿಪಾದಿಸುತ್ತಿದ್ದಾರೆ.


ಇದನ್ನೂ ಓದಿ: ಮೂರನೇ ಹಂತದ ಪ್ರಯೋಗದಲ್ಲಿ ಕೋವಿಡ್ ಲಸಿಕೆ ಪಡೆದ ವ್ಯಕ್ತಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....