Homeಕರ್ನಾಟಕಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ...

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ ಚಲೋ

- Advertisement -
- Advertisement -

2020ರ ಡಿಸಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್‌ಡಿಪಿಐ ಕಾರ್ಯಕರ್ತರು ಜಯಶಾಲಿಯಾದ ತಮ್ಮ ಅಭ್ಯರ್ಥಿಗಳ ಪರ ಸಂಭ್ರಮಾಚರಣೆಯಲ್ಲಿ ತೊಡಗಿರುವಾಗ ಸಂಘಪರಿವಾರದ ಬೆಂಬಲಿಗನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದು ವರದಿಯಾಗಿತ್ತು. ಆತನ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ನಾಳೆ ಶುಕ್ರವಾರ ಎಸ್‌ಡಿಪಿಐ ವತಿಯಿಂದ ಎಸ್.ಪಿ ಕಛೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆದರೆ ಆ ಸಂದರ್ಭದಲ್ಲಿ ನಮ್ಮ ಕಾಯಕರ್ತರು ಪಾಕ್ ಪರ ಘೋಷಣ್ ಕೂಗಿದ್ದಾರೆ ಎಂಬ ಸುಳ್ಳು ವರದಿಯೊಂದನ್ನು ದಿಗ್ವಿಜಯ ನ್ಯೂಸ್ ಎಂಬ ಕನ್ನಡ ಟಿವಿ ಚಾನೆಲೊಂದು ಪ್ರಸಾರ ಮಾಡಿತ್ತು. ಆ ಕೂಡಲೇ ನಮ್ಮ ಪಕ್ಷದ ಸ್ಥಳೀಯ ನಾಯಕರು ಈ ಬಗ್ಗೆ ದಿಗ್ವಿಜಯ ನ್ಯೂಸ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರನ್ನು ನೀಡಿದರೂ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರು. ಆ ನಂತರ ಪೊಲೀಸರು ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಅಂದು ರಾತ್ರಿ 12 ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿ ಅವರಲ್ಲಿ 3 ಮಂದಿಯ ವಿರುದ್ದ ದೇಶದ್ರೋಹದ ಕೇಸು ದಾಖಲಿಸಿದ್ದಾರೆ ಎಂದು SDPI ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ದೂರಿದ್ದಾರೆ.

ಈ ಘಟನೆಯ ಹಿಂದೆ ಸಂಘಪರಿವಾರ ಹಾಗೂ ದಿಗ್ವಿಜಯ ಚಾನೆಲ್‌ನ ವ್ಯವಸ್ಥಿತ ಷಡ್ಯಂತ್ರ ಅಡಗಿದೆ ಎಂಬ ಸಂಶಯಗಳು ಗಾಢವಾಗಿ ಕಾಡತೊಡಗಿದವು. ಇದೇ ಸಂದರ್ಭದಲ್ಲಿ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗಡೆ ಕೇಸರಿ ಧ್ವಜವನ್ನು ಹಿಡಿದಿದ್ದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರು ಪಾಕ್ ಪರವಾಗಿ ಘೋಷಣೆ ಕೂಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದೆ ಎಂದು ಅವರು ತಿಳಿಸಿದ್ದಾರೆ.

ಇದರ ವಿರುದ್ಧ ನಾವು ಜನವರಿ 7 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಮುಂದೆ ಮುಷ್ಕರವನ್ನು ಹಮ್ಮಿಕೊಂಡಿದ್ದ ಸಂಧರ್ಭದಲ್ಲಿ ಅಲ್ಲಿಗೆ ಬಂದ ಉನ್ನತ ಪೊಲೀಸ್ ಅಧಿಕಾರಿಗಳು ನಮ್ಮ ನಾಯಕರೊಂದಿಗೆ ಮಾತುಕತೆ ನಡೆಸಿ ನಮ್ಮಿಂದ ತಪ್ಪಾಗಿದೆ, ನಮಗೆ ನಾಲ್ಕು ದಿನ ಕಾಲಾವಕಾಶ ಕೊಡಿ, ಖಂಡಿತ ನಾವು ನೈಜ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಮನವಿ ಮಾಡಿದ್ದರು. ಆದರೆ ಯಾವುದೇ ಬಂಧನವಾಗಿಲ್ಲ ಎಂದು ಅನ್ವರ್ ಸಾದತ್ ಬಜತ್ತೂರು ದೂರಿದ್ದಾರೆ.

ಬಂಧಿಸಿರುವ ಅಮಾಯಕರಾದ ಮೂರು ಮಂದಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು, ನೈಜ ಆರೋಪಿಗಳಾದ ಬಿಜೆಪಿ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಬೇಕು ಹಾಗೂ ಸುಳ್ಳು ಮೊಕದ್ದಮೆ ದಾಖಲಿಸಿ ಅಮಾಯಕ ಯುವಕರನ್ನು ಜೈಲಿಗಟ್ಟಿದ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್ ರವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ನಾಳೆ ಹೋರಾಟ ನಡೆಯಲಿದೆ.

ನಾಳೆ ಮಧ್ಯಾಹ್ನ 2.30ಕ್ಕೆ ಕ್ಲಾಕ್‌ ಟವರ್ ಬಳಿಯಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಎಸ್‌ಪಿ ಕಚೇರಿವರೆಗೂ ನಡೆಯಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....