Homeಮುಖಪುಟ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ಅನುಮತಿಯಿಲ್ಲದೆ ಪ್ರತಿಭಟಿಸಲು ಯತ್ನಿಸಿದ್ದಾರೆಂದು ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

- Advertisement -
- Advertisement -

ರಾಜಧಾನಿಯಲ್ಲಿ ಜನವರಿ 31 ರವರೆಗೆ ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಅಡಿಯಲ್ಲಿ ನಿಷೇಧಿತ ಆದೇಶಗಳು ಸೆಂಟ್ರಲ್ ದೆಹಲಿಯಲ್ಲಿ ಜಾರಿಯಲ್ಲಿರುವುದರಿಂದ ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಎಪಿ ಶಾಸಕರಾದ ರಾಘವ್ ಛಡ್ಡಾ ಮತ್ತು ಅತೀಶಿ ಮರ್ಲೆನಾ ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದು ಎಎಪಿ ಸರ್ಕಾರ ಮತ್ತು ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಜನವರಿ 31 ರವರೆಗೆ ದೆಹಲಿ ರಾಜ್ಯ ವಿಪತ್ತು ನಿವಾರಣಾ ಘಟಕವು ರಾಜಕೀಯ ಸಭೆಗಳಿಗೆ ನಿಷೇಧ ಹೇರಿದೆ ಎಂದು ಹೈಕೋರ್ಟಿಗೆ ಸಲ್ಲಿಸಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಬ್ಬರು ಎಎಪಿ ಮುಖಂಡರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ದೆಹಲಿ ಪೊಲೀಸರು ಉಲ್ಲೇಖಿಸಿರುವ ಇನ್ನೊಂದು ಕಾರಣವೆಂದರೆ, ಎರಡು ನಿವಾಸಗಳು ಇರುವ ಇಡೀ ಸೆಂಟ್ರಲ್ ದೆಹಲಿಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಹೊರಡಿಸಲಾದ ನಿಷೇಧಿತ ಆದೇಶಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್‌‌‌ ಗವರ್ನರ್‌ ಅವರ ಮನೆಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಇಬ್ಬರು ಎಎಪಿ ನಾಯಕರ ಮನವಿಗೆ ಸ್ಪಂದಿಸಿ ಪೊಲೀಸರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಸಲ್ಲಿಕೆಗಳನ್ನು ಮಾಡಲಾಗಿದೆ.

ಈ ವಿಷಯವನ್ನು ಗುರುವಾರ ನ್ಯಾಯಮೂರ್ತಿ ಪ್ರತಿಬಾ ಎಂ. ಸಿಂಗ್ ಅವರ ಮುಂದೆ ಪಟ್ಟಿ ಮಾಡಲಾಗಿತ್ತಾಗಿದ್ದರೂ, ವಿಚಾರಣೆ ನಡೆಯಲಿಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಪಟ್ಟಿ ನಿಗದಿ ಮಾಡಬೇಕೆಂದು ದೆಹಲಿ ಪೊಲೀಸರ ವಕೀಲರು ನ್ಯಾಯಾಲಯವನ್ನು ಒತ್ತಾಯಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗಳನ್ನು ಜಂತರ್ ಮಂತರ್ ಮತ್ತು ರಾಮ್‌ಲೀಲಾ ಮೈದಾನ ಎಂಬ ಎರಡು ಸ್ಥಳಗಳಲ್ಲಿ ಮಾತ್ರ ನಡೆಸಬಹುದಾಗಿದೆ ಎಂದು ಪೊಲೀಸರು ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ ದೇಶಕ್ಕೆ ಮುಜುಗರ: ತಡೆಯಾಜ್ಞೆ ಕೋರಿದ ದೆಹಲಿ ಪೊಲೀಸರು

ಕಳೆದ ವರ್ಷ ಸೆಪ್ಟೆಂಬರ್‌ನ ಡಿಡಿಎಂಎ ಅಧಿಸೂಚನೆ ಈಗ ಜನವರಿ 31 ರವರೆಗೆ ವಿಸ್ತರಿಸಲ್ಪಟ್ಟಿದೆ, ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ರೀತಿಯ ರಾಜಕೀಯ ಸಭೆಗಳಿಗೆ ಅನುಮತಿ ಇಲ್ಲ ಎಂದು ಪೊಲೀಸರು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಎಎಪಿ ಶಾಸಕರಾದ ರಾಘವ್ ಮತ್ತು ಅತೀಶಿ, 2020 ರ ಡಿಸೆಂಬರ್ 13 ರಂದು ಅಮಿತ್‌ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್‌ ಬೈಜಾಲ್ ನಿವಾಸಗಳ ಹೊರಗೆ ’ಧರಣಿ’ ನಡೆಸಲು ಬಯಸಿದ್ದರು, ಆದರೆ ಅವರಿಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿಯಿಲ್ಲದೆ ಎರಡು ಪ್ರದೇಶಗಳಲ್ಲಿ ಪ್ರತಿಭಟಿಸಲು ಯತ್ನಿಸಿದ್ದಕ್ಕಾಗಿ ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

ಅಮಿತ್‌ ಶಾ ಮತ್ತು ಬೈಜಾಲ್ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಬೇಕೆಂಬ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ ನಿರ್ಧಾರವನ್ನು ಡಿಸೆಂಬರ್ 12, 2020 ರಂದು ರದ್ದುಗೊಳಿಸಲು ಇಬ್ಬರೂ ಶಾಸಕರು ಕೋರಿದ್ದರು. 2020 ರ ಡಿಸೆಂಬರ್ 25 ರವರೆಗೆ ಡಿಡಿಎಂಎ ಆದೇಶವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ತಮ್ಮ ಮನವಿಯನ್ನು ತಿರಸ್ಕರಿಸಿದ್ದರು, ಈಗ ಇದನ್ನು 2020 ರ ಡಿಸೆಂಬರ್ 31 ರವರೆಗೆ ನಿಷೇಧಿಸಲಾಗಿದೆ. ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟಲು ರಾಷ್ಟ್ರ ರಾಜಧಾನಿಯಾದ್ಯಂತ ಎಲ್ಲಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಕಾರ್ಯಗಳು ಅಥವಾ ಇತರ ಸಭೆಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...