Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...