Homeಮುಖಪುಟದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

ದೇಶದ ಕಾನೂನುಗಳನ್ನು ಗಾಳಿಗೆ ತೂರುತ್ತಿರುವ ನರೇಂದ್ರ ಮೋದಿ

- Advertisement -
ಮೊದಲ ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ ಎಂದ ಮೋದಿ.
ಮತ್ತೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ನರೇಂದ್ರ ಮೋದಿ.
ಈ ದೇಶದ ಪ್ರಧಾನಿ ಸ್ಥಾನದಲ್ಲಿರುವ ವ್ಯಕ್ತಿ ದೇಶದ ಕಾನೂನುಗಳನ್ನು ಕಾಪಾಡಬೇಕು. ಆದರೆ ದೇಶದ ಕಾನೂನುಗಳನ್ನು ಮುರಿಯುವುದರಲ್ಲಿ ಅವರೆ ಮೊದಲಿಗರಾದರೆ ಅವರ ಅಂಧಾಭಿಮಾನಿಗಳು ಮತೇನು ಮಾಡುತ್ತಾರೆ? ಅವರು ಈ ದೇಶವನ್ನೇ ಹಾಳು ಮಾಡುತ್ತಾರೆ. ಅಂತಹ ದುರಂತಕ್ಕೆ ನಾವೆಲ್ಲಾ ಸಾಕ್ಷಿಯಾಗಬೇಕಿದೆ.
ಇಂದು ಮೋದಿಯವರು ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಅವರು ಮೊದಲ ಮತದಾರರಿಗೆ ‘ನಿಮ್ಮ ಮೊದಲ ಮತವನ್ನು ಮತವನ್ನು ಹುತಾತ್ಮ ಯೋಧರಿಗೆ ಸಮರ್ಪಿಸಿ’ ಎಂದು ಕರೆ ನೀಡಿದ್ದಾರೆ. ಇನ್ನೊಂದು ಕಡೆಯ ಭಾಷಣದಲ್ಲಿ ನಿಮ್ಮ ಮತವನ್ನು ಬಾಲಾಕೋಠ್ ಏರ್ ಸ್ಟ್ರೈಕ್ ನಲ್ಲಿ ಹುತಾತ್ಮರಾದ ಯೋಧನಿಂದ ಹಿಡದು ಪುಲ್ವಾಮ ದಾಳಿಯಲ್ಲಿ ಬಲಿಯಾದ ಸಿ.ಆರ್.ಪಿ.ಎಫ್ ಯೋಧರಿಗೆ ಅರ್ಪಿಸಿ ಎಂದು ಹೇಳಿದ್ದಾರೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಭಾರತೀಯ ಚುನಾವಣಾ ಆಯೋಗ ಸೈನ್ಯ, ಯೋಧರ ಹೆಸರಿನಲ್ಲಿ ಯಾವುದೆ ಕಾರಣಕ್ಕೂ ಮತ ಯಾಚನೆ ಮಾಡಬಾರದೆಂದು ಸ್ಪಷ್ಟವಾಗಿ ಆದೇಶ ಹೊರಡಿಸಿತ್ತು. ಆದರೆ ಪ್ರಧಾನಿ ಮೋದಿಯೇ ಇದನ್ನು ಉಲ್ಲಂಘಿಸುವ ಮೂಲಕ ಕೆಟ್ಟ ಬೆಳವಣಿಗೆಗೆ ಕಾರಣರಾಗಿದ್ದಾರೆ. ಸೋಲಿನ ಭಯದಲ್ಲಿರುವ ಮೋದಿ ಹತಾಶೆ ಮನೋಭಾವದಿಂದ ಅಕ್ರಮ ಮಾರ್ಗ ಹಿಡಿದಿರುವುದನ್ನು ಸರ್ವಾಥ ಒಪ್ಪಲು ಸಾಧ್ಯವಿಲ್ಲ.
ಇದೇ ಮೊದಲಲ್ಲ.
ಮೋದಿ ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವುದು ಇದೆ ಮೊದಲಲ್ಲ. ಕಳೆದ 2014ರ ಚುನಾವಣೆಯಲ್ಲಿಯೇ ಚುನಾವಣಾ ದಿನವೇ ರೋಡ್ ಶೋ ಮಾಡಿದ್ದರು. ಮತ ಚಲಾಯಿಸಿದ ಬಳಿಕ ಬಿಜೆಪಿ ಚಿಹ್ನೆಯಾದ ಕಮಲವನ್ನು ಎತ್ತಿ ಹಿಡಿದು ಬೆಂಬಲಿಗರಿಗೆ ಹುರಿದುಂಬಿಸಿದ್ದರು. ಕಳೆದ ಗುಜರಾತ್ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ರೋಡ್ ಶೋ ಗೆ ಅನುಮತಿ ಸಿಗದಿದ್ದಾಗ ಸೀ ಪ್ಲೇನ್ ಎಂದು ನದಿಯಲ್ಲಿದ್ದುಕೊಂಡೆ ಪ್ರಚಾರ ಮಾಡಿದ್ದರು.
ಅಂದರೆ ಈ ದೇಶದ ಸಂವಿಧಾನ, ಕಾನೂನು ಎಂದರೆ ಮೋದಿಗೆ ಕಾಲ ಕಸಕ್ಕೆ ಸಮಾನ ಎಂಬಾತ್ತಾಗಿದೆ. ಸೈನಿಕರ ಹೆಸರಿನಲ್ಲಿ ಭಾಷಣ ಮಾಡಿ ಜನರನ್ನು ಭಾವೋದ್ರೇಕಗೊಳಿಸಿ, ಮರಣ ಹೊಂದಿದ ಯೋಧರ ಹೆಸರಿನಲ್ಲಿ ನಮಗೆ ಓಟು ಕೊಡಿ ಎಂದು ಕೇಳುವ ಕೀಳು ಮಟ್ಟಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಅತ್ತ ಸೈನ್ಯದಲ್ಲಿರುವ ಯೋಧರಿಗೆ ಉತ್ತಮ ಆಹಾರ, ಸಂಬಳ ನೀಡುತ್ತಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿಲ್ಲ. ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮಟ್ಟ ಹಾಕಿಲ್ಲ. ಸಿ.ಆರ್.ಪಿ.ಎಫ್ ಯೋಧರಿಗೆ ಸಮರ್ಪಕ ಪೆನ್ಷನ್ ಕೊಟ್ಟಿಲ್ಲ. ಅವರು ಮಡಿದರೆ ಅವರಿಗೆ ಹುತಾತ್ಮ ಪಟ್ಟವನ್ನು ಸಹ  ಮೋದಿ ಸರ್ಕಾರ ಮಾಡಿಲ್ಲ ಎಂದು ಸಾವಿರಾರು ಸೈನಿಕರು ಮೋದಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೆ ಇತ್ತ ಮೋದಿ ನಾಚಿಕೆಬಿಟ್ಟು ಸೈನಿಕರ ಹೆಸರಿನಲ್ಲಿಯೂ ಓಟು ಕೇಳುತ್ತಿದ್ದಾರೆ ಅಂದರೆ ಈ ದೇಶದ ಪರಿಸ್ಥಿತಿ ಎಲ್ಲಿಗೆ ತಲುಪಿದೆ ನೀವೆ ಯೋಚಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...