Homeಕರ್ನಾಟಕಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಜೆಪಿ ಎಂದರೆ ಬ್ಲಾಕ್‌ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್‌ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಯಡಿಯೂರಪ್ಪನವರೇ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದೀರ. ನೀವು ಯಾರನ್ನ ಬೇಕಾದರೂ ಮಾಡಿಕೊಳ್ಳಿ. ನಮ್ಮದು ಯಾವ ಅಭ್ಯಂತರವೂ ಇಲ್ಲ. ನಿಮ್ಮವರೇ ಬ್ಲಾಕ್ ಮೇಲರ್ಸ್ ಸಂಪುಟ ಎಂದಿದ್ದಾರೆ. ನಿಮ್ಮ ಸಿಡಿಯ ಬಗ್ಗೆಯೂ ಮಾತನಾಡಿದ್ದಾರೆ. ಬ್ಲಾಕ್‌ಮೇಲರ್‌ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ನಿಮ್ಮದೇ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಹೇಳಿಕೆ ಕೊಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌ ಪ್ರಶ್ನೆ

“ನೀವು ಲಂಚ ಪಡೆದಿದ್ದೀರಿ ಎಂಬ ಮಾತುಗಳು ಕೇಳಿ ಬಂದಿವೆ. ಇದ್ಯಾವುದೂ ನನ್ನ ಹೇಳಿಕೆಯಲ್ಲ. ಇದೆಲ್ಲವೂ ಬಿಜೆಪಿ ಧ್ವನಿ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ. ನಾನು ಕಾರವಾರದಲ್ಲೇ ಸಿಡಿ ಬಗ್ಗೆ ಹೇಳಿಕೆ ಕೊಟ್ಟಿದ್ದೆ. ಅದನ್ನ ತೆಗೆದಿಡಿ ಅಂತ ಹೋಂ ಮಿನಿಸ್ಟರ್ ಹೇಳಿದ್ದರು. ಈಗ ನಿಮ್ಮವರೇ ತೆಗೆದಿಡುತ್ತಿದ್ದಾರೆ. ಬಿಜೆಪಿಯವರೇ ಸಿಡಿ ಮತ್ತು ಲಂಚದ ಬಗ್ಗೆ ಹೇಳಿಕೆ ನೀಡ್ತಿದ್ದಾರೆ. ಇದು ಐಪಿಸಿ ಅಪರಾಧ ಆಗುತ್ತದೆ.

ಸಿಡಿ ಒಳಗೆ ಏನಿದೆ ಎಂಬುದು ನಿಮ್ಮವರಿಗೇ ಗೊತ್ತಿದೆ. ಇದರ ಜತೆ ಲಂಚದ ಬಗ್ಗೆಯೂ ಮಾತನಾಡಿದ್ದಾರೆ. ಎಷ್ಟು ಲಂಚ ಕೊಟ್ಟಿದ್ದಾರೆ? ಮತ್ತೊಬ್ಬ ಸಚಿವರು ಅದೆಷ್ಟೋ ಖರ್ಚು ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲದಕ್ಕೂ ಉತ್ತರ ಸಿಗಬೇಕಲ್ಲವೇ? ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಿಮ್ಮ ನಾಯಕರೇ ಇಷ್ಟೆಲ್ಲಾ ಆರೋಪ ಮಾಡಿರುವಾಗ ನೀವು ನೈತಿಕ ಹೊಣೆ ಹೊರಬೇಕಿದೆ. ಬ್ಲಾಕ್ ಮೇಲ್, ಲಂಚ ಆರೋಪದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಈ ತನಿಖೆ ನಡೆಯಬೇಕು. ಐಟಿ, ಇಡಿಯವರು ಸುಮೋಟೋ ಕೇಸ್ ಹಾಕಬೇಕು” ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...