Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...