Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...