Homeಚಳವಳಿಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

- Advertisement -
- Advertisement -

ವಿದೇಶಿ ಕಂಪನಿಯಾದರು ದೇಶದಾದ್ಯಂತ ತನ್ನದೆ ಛಾಪು ಮೂಡಿಸಿರುವ ಕೆಎಫ್‌ಸಿ ಫಾಸ್ಟ್‌ ಫುಡ್ ಅಂಗಡಿ ಮಳಿಗೆಗಳು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಮೆರಿಕಾ ಮೂಲದ ಕರ್ನಲ್‌ ಹರ್ಲ್ಯಾಂಡ್‌ ಸಾಂಡರ್ಸ್‌ ಎಂಬ ವೃದ್ಧ ವ್ಯಕ್ತಿಯಿಂದ ಆರಂಭವಾದ ಕೆಂಚುಕಿ ಫ್ರೈಡ್‌ ಚಿಕನ್‌ (KFC) ಎಂಬ ಈ ಕಂಪನಿ ನಮ್ಮ ದೇಶದ್ದೆ ಎನ್ನುವ ಮಟ್ಟಿಗೆ ಜನಪ್ರಿಯವಾಗಿದೆ.

ಇಂತಹ ಒಂದು ವಿದೇಶಿ ಕಂಪನಿಗೆ, ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಮರ ಸಾರಿರುವ ರೈತರು ಇಟ್ಟಿರುವ ಹೆಸರು ಮತ್ತಷ್ಟು ಕುತೂಹಲಕಾರಿಯಾಗಿದೆ. ಹೌದು. ಕೆಎಫ್‌ಸಿ ಎಂದರೆ ಕೆಂಚುಕಿ ಫ್ರೈಡ್‌ ಚಿಕನ್‌ ಅಲ್ಲವಂತೆ, ಪ್ರತಿಭಟನಾ ನಿತರ ರೈತರ ಪ್ರಕಾರ ಕಿಸಾನ್‌ ಫುಡ್‌ ಕಾರ್ನರ್‌ (Kisaan Food Corner) ಎಂದು.
ಸಿಂಘು ಗಡಿಯಲ್ಲಿ ಕಳೆದ 50 ದಿನಗಳಿಂದ ಹೋರಾಟ ನಿರತ ರೈತರು ಇಲ್ಲಿಯೇ ಇರುವ ಕೆಎಫ್‌ಸಿ ಮಾಲ್‌ ಅನ್ನು ರೈತ ಹೋರಾಟಕ್ಕಾಗಿ ಪಡೆದಿದ್ದಾರೆ!. ಇಲ್ಲಿ ರೈತರಿಗೆ, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ನೀಡಲಾಗುವ ಲಂಗರ್‌ಗಾಗಿ (ಆಹಾರಕ್ಕಾಗಿ) ಬೇಕಾಗುವ ಎಲ್ಲಾ ಬಗೆಯ ಆಹಾರ ಸಾಮಾಗ್ರಿಗಳನ್ನು ಇಲ್ಲಿ ಶೇಖರಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಕೆಎಫ್‌ಸಿ ಮಳಿಗೆ ಮೇಲೆ ಈ ರೀತಿಯ ಬರಹ ಹಾಕಿರುವ ಭಿತ್ತಿಪತ್ರವನ್ನು ಪ್ರತಿಭಟನಾಕಾರರು ಅಂಟಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಲ್ಯಾಂಡ್‌ ಮಾರ್ಕ್‌ ಆಗಿ ಕಾಣಿಸಿಕೊಂಡಿರುವ ಈ ಮಾಲ್‌, ಹೊಸ ಹೆಸರಿನೊಂದಿಗೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ಈ ಕಿಸಾನ್‌ ಫುಡ್‌ ಕಾರ್ನರ್‌ ಕೂಡ ಕಾರಣ. ದೆಹಲಿ ಚಲೋ ಆರಂಭವಾದ ನವೆಂಬರ್‌ 26, 27 ರಿಂದಲೂ ಲಂಗರ್‌ಗಳನ್ನು ಹಾಕಿರುವ ತಂಡಗಳು ಇಲ್ಲಿ ದಿನಸಿ ಸಾಮಗ್ರಿಗಳನ್ನು ದಾಸ್ತಾನು ಮಾಡಿದ್ದಾರೆ.

ʼಪ್ರತಿಭಟನೆ ಆರಂಭವಾದಾಗಿನಿಂದ ಈ ಮಾಲ್‌ನಲ್ಲಿ ನಾವು ಇಲ್ಲಿಯ ಹತ್ತಿರದ ಲಂಗರ್‌ಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಇಡುತ್ತಿದ್ದೆವೆ. ಈ ಕಾರಣದಿಂದಲೇ ನಾವು ಕೆಎಫ್‌ಸಿ ಎಂಬ ಹೆಸರನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ನಾಮಕರಣ ಮಾಡಿದ್ದೆವೆ. ಈಗ ಇಲ್ಲಿ ಎಲ್ಲರೂ ಇದನ್ನು ಕಿಸಾನ್‌ ಫುಡ್‌ ಕಾರ್ನರ್‌ ಎಂದು ಕರೆಯುತ್ತಿದ್ದಾರೆ. ಮಾಲ್‌ ಮೇಲೆ ಇರುವ ಕೆಎಫ್‌ಸಿ ಎಂಬ ದೊಡ್ಡ ಬೋರ್ಡ್‌ ಪಕ್ಕದಲ್ಲಿಯೂ ನಾವು K- Kisaan, F-Food C-Corner ಎಂದು ಅದರ ಅರ್ಥವನ್ನು ಬಿಡಿಸಿ ಬರೆದಿದ್ದೇವೆʼ ಎಂದು ಮಾರುತಿ ಮಾನವ್‌ ಎಂಬ ಪ್ರತಿಭಟನಾ ನಿರತ ವಿದ್ಯಾರ್ಥಿ ತಿಳಿಸಿದ್ದಾರೆ.

ಕೆಎಫ್‌ಸಿ ಕೂಡಾ ಹೋರಾಟದಲ್ಲಿ ನಮಗೆ ಬೆಂಬಲ ನೀಡುತ್ತಿದೆ ಎಂದು ಹೆಮ್ಮೆ ಪಡುತ್ತಾರೆ ರೈತರು. ಇಷ್ಟೇ ಅಲ್ಲದೆ ಪ್ರವಾಸಿ ತಾಣವಾಗಿ, ಹೊಸ ನಗರವಾಗಿ ಮಾರ್ಪಾಡಾಗಿರುವ ಪ್ರತಿಭಟನಾ ಸ್ಥಳಗಳಾಗಿರುವ ದೆಹಲಿಯ ಗಡಿಗಳಿಗೆ ಹಲವಾರು ಮಂದಿ ನಗರ ಪ್ರದೇಶದವರು ಭೇಟಿ ನೀಡುತ್ತಿದ್ದಾರೆ. ಕೆಲವರು ಪ್ರತಿಭಟನೆ ನೋಡಲು ಬರುತ್ತಾರೆ. ಮತ್ತೆ ಕೆಲವರು ಸೇವೆ ಮಾಡಲು, ಇನ್ಯಾರೋ ರೈತರಿಗೆ ಬೆಂಬಲ ನೀಡಲು ಮತ್ತಷ್ಟು ಜನ ರೈತರಿಗಾಗಿ ದೇಣಿಗೆ ನೀಡಲು ಇಲ್ಲಿಗೆ ಪ್ರತಿ ದಿನ ಬರುತ್ತಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಕೃಷಿ ಕಾಯ್ದೆ ಜಾರಿ ತಡೆಹಿಡಿಯಿರಿ, ಇಲ್ಲದಿದ್ದರೆ ನಾವು ತಡೆಯುತ್ತೇವೆ: ಕೇಂದ್ರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...