Homeಮುಖಪುಟವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ವಾಟ್ಸಪ್‌‌ನ ಹೊಸ ಗೌಪ್ಯತೆ ನೀತಿ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ವಾಟ್ಸಾಪ್ ಕಳೆದ ವಾರ ತನ್ನ ಗೌಪ್ಯತೆ ನೀತಿಯನ್ನು ನವೀಕರಿಸಿದ್ದು, ಫೆಬ್ರವರಿ 8 ರ ನಂತರ ಅದರ ನಿಯಮಗಳು ಮತ್ತು ಷರತ್ತುಗಳನ್ನು ಬಳಕೆದಾರರು ಒಪ್ಪಿಕೊಳ್ಳುವುದು ಕಡ್ಡಾಯವಾಗಿದೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ಬಳಕೆದಾರರ ಚಟುವಟಿಕೆಗಳನ್ನು ಪರಿಶೀಲಿಸಲು ಕಂಪನಿಗೆ ಅಧಿಕಾರ ನೀಡುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ವಕೀಲ ಚೈತನ್ಯ ರೋಹಿಲ್ಲಾ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಅವರು ತಮ್ಮ ಅರ್ಜಿಯಲ್ಲಿ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ವ್ಯಕ್ತಿಯ ಖಾಸಗೀತನದ ಹಕ್ಕಿನ ಉಲ್ಲಂಘನೆಯಾಗಿದೆ ಹೇಳಿದ್ದಾರೆ.

ಖಾಸಗೀತನದ ಹಕ್ಕನ್ನು ಸುಪ್ರೀಂ ಕೋರ್ಟ್ ಮೂಲಭೂತ ಹಕ್ಕು ಎಂದು ಘೋಷಿಸಿದೆ.

ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ಸುರಕ್ಷತೆಯ ವಿಷಯದಲ್ಲಿ ವಾಟ್ಸಾಪ್ ಮತ್ತು ಸಿಗ್ನಲ್‌ – ಯಾವುದು ಉತ್ತಮ? Comparison Between WhatsApp and Signal

ಅರ್ಜಿಯಲ್ಲಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಪ್ಲಾಟ್‌ಫಾರ್ಮ್‌ಗಳು ಈಗಾಗಲೇ ಬಳಕೆದಾರರ ಡೇಟಾವನ್ನು ಮೂರನೇ ವ್ಯಕ್ತಿಯೊಂದಿಗೆ ಅನಧಿಕೃತ ರೀತಿಯಲ್ಲಿ ಹಂಚಿಕೊಳ್ಳುತ್ತಿವೆ. ಸರ್ಕಾರದಿಂದ ಅನುಮತಿ ಪಡೆಯದೆ ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯನ್ನು ರೂಪಿಸಲಾಗಿದೆ” ಎಂದು ಆರೋಪಿಸಲಾಗಿದೆ.

ಅರ್ಜಿದಾರರು ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿ ಮತ್ತು ವ್ಯಕ್ತಿಗಳ ಖಾಸಗಿ ಹಕ್ಕನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಬಳಕೆಗೆ ಮಾರ್ಗಸೂಚಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಾಟ್ಸಾಪ್ ಕಳೆದ ವಾರ ತನ್ನ ಗೌಪ್ಯತೆ ನೀತಿಯನ್ನು ನವೀಕರಿಸಿದ್ದು, ಫೆಬ್ರವರಿ 8 ರ ನಂತರ ಅದರ ನಿಯಮಗಳು ಮತ್ತು ಷರತ್ತುಗಳನ್ನು ಬಳಕೆದಾರರು ಒಪ್ಪಿಕೊಳ್ಳುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...