Homeಚಳವಳಿರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ - ನೀವು ತಿಳಿದಿರಬೇಕಾದ 10 ಅಂಶಗಳು

ರೈತ ಹೋರಾಟ: ಇಂದು 9 ನೇ ಸುತ್ತಿನ ಮಾತುಕತೆ – ನೀವು ತಿಳಿದಿರಬೇಕಾದ 10 ಅಂಶಗಳು

ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ, ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ 51 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ತಾನು ಒಂದಿಂಚೂ ಹಿಂದೆ ಸರಿಯುತಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸರ್ಕಾರ ಮಂಡಿಯೂರತೊಡಗಿದೆ. ಅದರ ಜೊತೆ-ಜೊತೆಗೆ ಹೋರಾಟವನ್ನು ಒಡೆಯುವ ಎಲ್ಲಾ ಪ್ರಯತ್ನಗಳನ್ನೂ ಚಾಲ್ತಿಯಲ್ಲಿಟ್ಟಿದೆ.

ಇದುವರೆಗೂ ರೈತರೊಂದಿಗೆ ಎಂಟು ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿದೆ. ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಂಟನೇ ಮಾತುಕತೆ ವಿಫಲಗೊಂಡ ಪರಿಣಾಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ರೈತರು ತೀರ್ಮಾನಿಸಿದ್ದು, ಜನವರಿ 26 ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಒಂಬತ್ತನೆ ಸುತ್ತಿನ ಮಾತುಕತೆಗೆ ಶುಕ್ರವಾರ(ಇಂದು) ರೈತರನ್ನು ಆಹ್ವಾನಿಸಿದೆ. ಈ ಬಗ್ಗೆ ತಿಳಿದುಕೊಳ್ಳಬೇಕಾದ 10 ಪ್ರಮುಖ ಅಂಶಗಳು ಇಲ್ಲಿವೆ:

1. ಒಂಬತ್ತನೇ ಸುತ್ತಿನ ಮಾತುಕತೆಗೆ ಸಂಬಂಧಿಸಿದಂತೆ, ರೈತರು ಹೊಸ ಕಾನೂನುಗಳನ್ನು ರದ್ದುಗೊಳಿಸುವ ವಿಧಾನಗಳ ಮೇಲೆ ಮಾತ್ರ ಚರ್ಚೆಗಳನ್ನು ಕೇಂದ್ರೀಕರಿಸುವುದಾಗಿ ಹೇಳಿದ್ದಾರೆ.

2. ಆದರೆ, ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುತ್ತದೆ ಎಂದು ರೈತರು ಹೇಳುತ್ತಿರುವ ಕಾನೂನುಗಳನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ಇದುವರೆಗೂ ನಿರಾಕರಿಸುತ್ತಲೇ ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ಹಾಡು ’ಕಿಸಾನ್ ಆಂಥೆಮ್’‌ ವೀಕ್ಷಿಸಿದ 2 ಕೋಟಿ ಜನ: ಗೀತೆ ರಚನೆಕಾರನ ಬಂಧನ!

3. ಇಂದಿನ ಸಭೆಯಲ್ಲೂ ಸರ್ಕಾರವು ಕಾನೂನನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬರುವುದಿಲ್ಲ ಎನ್ನಲಾಗಿದ್ದು, ಅದರ ಬದಲಾಗಿ ಕಾನೂನುಗಳಲ್ಲಿ ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದರೆ ತಿಳಿಸಬೇಕು ಎಂದು ಒತ್ತಾಯಿಸಲಿದೆ ಎನ್ನಲಾಗಿದೆ.

4. ಮೂರು ಕೃಷಿ ಕಾನೂನುಗಳನ್ನು ಪರಿಶೀಲಿಸಲು ಜನವರಿ 12 ರಂದು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿರುವ ಸಮಿತಿಯು ನಡೆಸುವ ಸಮಾಲೋಚನೆಯಲ್ಲಿ ಭಾಗವಹಿಸದಿರಲು ಪ್ರತಿಭಟನಾ ನಿರತ ಕೃಷಿ ಸಂಘಗಳು ನಿರ್ಧರಿಸಿವೆ.

5. ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೂ ಕೃಷಿ ಕಾನೂನನ್ನು ಅಮಾನತ್ತು ಮಾಡಿದೆ. ಇದನ್ನು ರೈತರು ಸ್ವಾಗತಿಸಿದ್ದರಾದರೂ, ತಮ್ಮ ಬೇಡಿಕೆ ಕೃಷಿ ಕಾನೂನನ್ನು ರದ್ದು ಪಡಿಸುವುದಾಗಿದೆ ಎಂದು ಅವರು ಮತ್ತೇ ಘೋಷಿಸಿದ್ದಾರೆ.

6. ಕಾನೂನಿನ ಬಗ್ಗೆ ಚರ್ಚಿಸಲು ಸುಪ್ರೀಂಕೋರ್ಟ್ ನೇಮಿಸಿರುವ ಸಮಿತಿಯ ಸದಸ್ಯರು ಈಗಾಗಲೇ ಕಾನೂನನ್ನು ಸಾರ್ವಜನಿಕವಾಗಿ ಶ್ಲಾಘಿಸಿರುವುದರಿಂದ, ನ್ಯಾಯಾಲಯ ನೇಮಿಸಿದ ಸಮಿತಿಯು “ಸರ್ಕಾರದ ಪರ” ಎಂದು ಕೃಷಿ ಸಂಘಗಳು ಆರೋಪಿಸಿವೆ.

7. ವಿವಾದಾತ್ಮಕ ಕಾನೂನುಗಳು ಕೃಷಿ ವ್ಯಾಪಾರದಲ್ಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ, 1955 ರ ಅಗತ್ಯ ಸರಕುಗಳ ಕಾಯ್ದೆಯಡಿ ದಾಸ್ತಾನು ಸಂಗ್ರಹಿಸುವಿಕೆಯ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುತ್ತವೆ ಮತ್ತು ಲಿಖಿತ ಒಪ್ಪಂದಗಳ ಆಧಾರದ ಮೇಲೆ ಗುತ್ತಿಗೆ ಕೃಷಿ ಪ್ರಾರಂಭವಾಗುತ್ತದೆ.

8. ಈ ಹೊಸ ಕಾನೂನುಗಳು ದೊಡ್ಡ ಕಂಪನಿಗಳಿಗೆ ಲಾಭಕರವಾಗಲಿದೆ. ಸಣ್ಣ ಹಿಡುವಳಿದಾರರು ನಾಶವಾಗುತ್ತಾರೆ ಎಂದು ರೈತರು ಹೇಳುತ್ತಾರೆ.

9. ಕೃಷಿ ಸಂಘಗಳು ತಮಗೆ ಕಾನೂನು ಪರಿಹಾರ ಬೇಕಿಲ್ಲ, ತಾವು ಸರ್ಕಾರದೊಂದಿಗೆ ಮಾತ್ರ ಮಾತನಾಡುತ್ತೇವೆ ಎಂದು ಘೋಷಿಸುವ ಮೂಲಕ ಸುಪ್ರೀಂ ಕೋರ್ಟ್‌ನ ಹಸ್ತಕ್ಷೇಪದಿಂದ ತಪ್ಪಿಸಿಕೊಂಡಿದ್ದಾರೆ.

10. ಎಂಟನೇ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ತಾವು ಕಿಸಾನ್-ಜವಾನ್ ರ್‍ಯಾಲಿಯನ್ನು ನಡೆಸಿಯೆ ತೀರುತ್ತೇವೆ ಎಂದು ರೈತರು ಘೋಷಿಸಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!ಟ್ರ್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...