Homeಸಿನಿಮಾಕ್ರೀಡೆ37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ಸದ್ಯ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಸಿ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಕ್ರಿಕೆಟ್‌ಗೆ ಅಷ್ಟೇನೂ ಹೆಸರುವಾಸಿಯಲ್ಲದ ಕೇರಳ ತಂಡದ ‘ಅಜರ್’ ರನ್‌ಗಳ ಧಮಾಕಾ ಸೃಷ್ಟಿಸಿದ್ದಾನೆ.

- Advertisement -
- Advertisement -

ಅದು ಬಲಿಷ್ಠ ಮುಂಬೈ ತಂಡ. ಇವನು ಅಶಕ್ತ ಕೇರಳ ತಂಡದವನು. 54 ಎಸೆತಗಳಲ್ಲಿ ಈ ಯುವಕ 137 ರನ್ ಚಚ್ಚಿದ್ದಾನೆ. 100 ರನ್ ತಲುಪಲು ಆತನಿಗೆ ಕೇವಲ 37 ಎಸೆತ ಸಾಕಾಯಿತು. ಟ್ವೆಂಟಿ-20ಯಲ್ಲಿ ಭಾರತೀಯನೊಬ್ಬ ಗಳಿಸಿದ ವೇಗದ ಸೆಂಚುರಿಯಲ್ಲಿ ಇದೀಗ ಇದು ಮೂರನೆ ಸ್ಥಾನದಲ್ಲಿದೆ. ಹಿಂದೆ ರಿಷಬ್ ಪಂತ್ 32 ಎಸೆತಗಳಲ್ಲಿ ಮತ್ತು ರೋಹಿತ್ ಶರ್ಮಾ 35 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಕ್ರಿಕೆಟ್-ಕ್ರೇಜಿ ಹಿರಿಯ ಸಹೋದರ ಈ ಹುಡುಗನಿಗೆ ಹೆಚ್ಚಿನ ವೃತ್ತಿಜೀವನದ ಆಯ್ಕೆಯನ್ನು ನೀಡಲಿಲ್ಲ. ಅವನ ಹೆಸರನ್ನು ಅಜ್ಮಲ್‌ನಿಂದ ಮೊಹಮ್ಮದ್ ಅಜರುದ್ದೀನ್ ಎಂದು ಬದಲಾಯಿಸಿ ಕ್ರಿಕೆಟ್ ಅಂಗಳಕ್ಕೆ ದಬ್ಬಿಬಿಟ್ಟ!
ಇದಲ್ಲದೆ, ಈ ಅಜರ್ ಕಾಸರಗೋಡಿನ ಹೊರವಲಯದಲ್ಲಿರುವ ಕೇರಳದ ಅಪರೂಪದ ಪಟ್ಟಣವಾದ ತಲಂಗರಾದಿಂದ ಬಂದವನು. ಅಲ್ಲಿ ಮಕ್ಕಳು ಚೆಂಡನ್ನು ಬ್ಯಾಟ್‌ನಿಂದ ಹೊಡೆಯಲು ಬಯಸುತ್ತಾರೆ ಹೊರತು, ಅದನ್ನು ಕಿಕ್ ಮಾಡಲು ಅಲ್ಲ. ಕೇರಳದಲ್ಲಿ ಫುಟ್‌ಬಾಲ್ ಹೆಚ್ಚು ಜನಪ್ರಿಯ ಎಂಬುದನ್ನು ಗಮನಿಸಿ.

26ರ ಹರೆಯದ ಯುವಕ ಅಜರ್, ಭಾರತೀಯ ಬ್ಯಾಟಿಂಗ್ ಶ್ರೇಷ್ಠ ಮೊಹಮ್ಮದ್ ಅಜರುದ್ದೀನ್ ಅವರ “ಅಜೀವ ಅಭಿಮಾನಿ”ಯಾದ ತನ್ನ ಹಿರಿಯ ಸಹೋದರ ಕಮರುದ್ದೀನ್ ನಿರೀಕ್ಷೆಗೆ ತಕ್ಕಂತೆ ಏನಾದರೂ ವಿಶೇಷವಾದ ಕೆಲಸವನ್ನು ಮಾಡಬೇಕೆಂದು ನಿರ್ಧರಿಸಿದ್ದ. ತಲಂಗರಾ ಪಟ್ಟಣ ಕೂಡ ಅವರ “ನೆಕ್ಸ್ಟ್ ಅಜರ್”ನಿಂದ ಹೆಚ್ಚಿನ ಸಾಧನೆ ನಿರೀಕ್ಷಿಸಿತ್ತು.

ಮೊನ್ನೆ ಬುಧವಾರ, ಅಜರ್ ತನ್ನ ಏಳು ಸಹೋದರರು, ತನ್ನ ಸ್ವಂತೂರು ಮತ್ತು ಇಡೀ ರಾಜ್ಯ ಹೆಮ್ಮೆಪಡುವ ಆಟ ಆಡಿಬಿಟ್ಟ. ಈ ಎರಡು ದಶಕಗಳಲ್ಲಿ ಶ್ರೀಶಾಂತ್ ಬಿಟ್ಟರೆ ಕೇರಳದ ಕ್ರಿಕೆಟಿಗರು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದು ಕಡಿಮೆಯೇ. ಆರ್‌ಸಿಬಿ ತಂಡಕ್ಕೆ ಆಡುವ ದೇವದತ್ತ ಪಡಿಕ್ಕಲ್ ಮೂಲತಃ ಕೇರಳದ ಹುಡುಗ. ದಶಕದಿಂದ ಬೆಂಗಳೂರು ನಿವಾಸಿಯಾಗಿರುವ ದೇವದತ್ತ ಈಗ ಟ್ವೆಂಟಿ-20 ಮಾದರಿಯಲ್ಲಿ ಗಮನ ಸೆಳೆಯುತ್ತಿರುವ ಪ್ರತಿಭೆ.

ಮುಂಬೈ ವಿರುದ್ಧ 54 ಎಸೆತಗಳಲ್ಲಿ 137 ರನ್ ಗಳಿಸಿದ ಅಜರುದ್ದೀನ್ ಅಲಿಯಾಸ್ ಅಜ್ಮಲ್, ಶತಕ ಗಳಿಸಲು 37 ಎಸೆತ ತೆಗೆದುಕೊಂಡ. ರಿಷಭ್ ಪಂತ್ (32 ಎಸೆತಗಳು) ಮತ್ತು ರೋಹಿತ್ ಶರ್ಮಾ (35 ಎಸೆತಗಳು) ನಂತರ ಭಾರತೀಯರು ಮಾಡಿದ ಮೂರನೇ ಅತಿ ವೇಗದ ಟ್ವೆಂಟಿ-20 ಶತಕ ಇದು.

“ನಾವು ಮಾತ್ರವಲ್ಲ, ಇಡೀ ತಲಂಗರಾದ ಜನ ಅವತ್ತು ಟಿವಿಗೆ ಅಂಟಿಕೊಂಡಿದ್ದರು” ಎಂದು ಹಿರಿಯ ಸಹೋದರ ಕಮರುದ್ದೀನ್ ಹೆಮ್ಮೆ ಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅಜರುದ್ದೀನ್ ಅವರ ಬ್ಯಾಟಿಂಗ್ ರೇಸಿಂಗ್‌ನ ವಿಡಿಯೊ ತುಣುಕುಗಳೊಂದಿಗೆ, ಭಾರತ ಕ್ರಿಕೆಟ್ ವಲಯಗಳು ಮತ್ತೆ ಹಳೆಯ ‘ಅಜರ್’ ಅವರನ್ನು ನೆನಪಿಸಿಕೊಂಡಿವೆ. ಬಿಗ್ ಶಾಟ್ ವೀರ ವೀರೇಂದ್ರ ಸೆಹ್ವಾಗ್, “ವಾಹ್ ಅಜರುದ್ದೀನ್, ಬೆಹ್ತರೀನ್!. ನಿನ್ನ ಆಟವನ್ನು ಆನಂದಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಲಿಷ್ಠ ಬೌಲರ್‌ಗಳ ಬೆವರಿಳಿಸಿದ

ಮುಂಬೈ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಹಿಂದೆ ಭಾರತ ತಂಡಕ್ಕೆ ಆಡಿದ್ದ ವೇಗಿ ಧವನ್ ಕುಲಕರ್ಣಿ ಮತ್ತು 2020ರ ಟ್ವೆಂಟಿ-20ಯಲ್ಲಿ ಮಿಂಚಿದ ತುಷಾರ್ ದೇಶಪಾಂಡೆ ಎಸೆತಗಳನ್ನು ಹಿಗ್ಗಾಮುಗ್ಗಾ ಬಾರಿಸಿದ ಅಜರ್, ಅವರನ್ನು ಬೌಂಡರಿ ಲೈನಿನಾಚೆಗೆ ದೂಕಿಬಿಟ್ಟ.

ಭಾರತ ತಂಡಕ್ಕೆ ಆಡಿದ್ದ ವೇಗಿ ಮತ್ತು ಸದ್ಯ ಕೇರಳ ತಂಡದ ಕೋಚ್ ಆಗಿರುವ ಟಿನು ಯೊಹಾನ್ನನ್, ‘ಅವನಿಂದ ಅಂತಹ ಒಂದು ಆಟವನ್ನು ನಿರೀಕ್ಷೆ ಮಾಡಿದ್ದೆ. ಆದರೆ ಅದು ಈ ಪ್ರಮಾಣದಲ್ಲಿ ಎಂದು ಊಹೆ ಕೂಡ ಮಾಡಿರಲಿಲ್ಲ. ಅಜರ್‌ನ ಸ್ಕ್ವೇರ್ ಲೆಗ್ ಶಾಟ್‌ಗಳಿಗಿಂತ ಅವನ ಪಿಕ್-ಅಪ್ ಶಾಟ್‌ಗಳು ನನಗೆ ಇಷ್ಟ. ಇಂತಹ ಆಟ ನೋಡುವುದೇ ಸೊಬಗು. ಆದರೆ ಬೌಲರ್‌ಗಳ ಪಾಲಿಗೆ ಇದು ನರಕ. ಅವರು ಶಾರ್ಟ್ ಆಫ್ ಲೆಂಥ್ ಎಸೆದರೆ ಇವನು ಸೀದಾ ಬೌಂಡರಿಯಾಚೆ ಚೆಂಡನ್ನು ಅಟ್ಟಿದಾಗ ಅದು ಬೌಲರ್‌ಗಳ ನೈತಿಕ ಶಕ್ತಿಯನ್ನೇ ಕಸಿದು ಬಿಟ್ಟಿತ್ತು’ ಎಂದಿದ್ದಾರೆ.

ರಣಜಿ, ಮುಷ್ತಾಕ್ ಅಲಿ ಮುಂತಾದ ದೇಸಿ ಚಾಂಪಿಯನ್‌ಶಿಪ್‌ಗಳಲ್ಲಿ ಕೇರಳ ಬೇಗ ನಿರ್ಗಮಿಸುವುದರಿಂದ ಅಜರ್‌ಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆದರೆ ಸಿಕ್ಕ ಅವಕಾಶವನ್ನು ಈ ಸಲ ಆತ ಸಮರ್ಥವಾಗಿ ಬಳಸಿಕೊಂಡಿದ್ದಾನೆ. ‘ಮತ್ತೊಬ್ಬ ಅಜರ್’ಗಾಗಿ ಕಾಯೋಣ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...