Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...