Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...