Homeಮುಖಪುಟಧೈರ್ಯವಿದ್ದರೆ ನೇರಾ ನೇರ ಚರ್ಚೆಗೆ ಬನ್ನಿ: ಮೋದಿಗೆ ರಾಹುಲ್ ಚಾಲೆಂಜ್

ಧೈರ್ಯವಿದ್ದರೆ ನೇರಾ ನೇರ ಚರ್ಚೆಗೆ ಬನ್ನಿ: ಮೋದಿಗೆ ರಾಹುಲ್ ಚಾಲೆಂಜ್

- Advertisement -
- Advertisement -

ಮೂರು ಪ್ರಶ್ನೆಗಳನ್ನು ನಿಮಗೆ ಮೊದಲೇ ಕಳಿಸಿಕೊಟ್ಟಿರುತ್ತೇವೆ. ಪುಸ್ತಕ ತೆಗೆದು ಸಿದ್ದವಾಗಿ. ಕೇವಲ 20 ನಿಮಿಷ ನನ್ನ ಜೊತೆಗೆ ನೇರಾ ನೇರ ಚರ್ಚೆಗೆ ಬರುತ್ತೀರಾ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಇಂದು ಸವಾಲ್ ಹಾಕಿದ್ದಾರೆ.

1 ರಫೇಲ್ + ಅನಿಲ್ ಅಂಬಾನಿ 2. ನೀರವ್ ಮೋದಿ 3. ಅಮಿತ್ ಶಾ ಮತ್ತು ನೋಟು ಅಮಾನ್ಯೀಕರಣ. ನಿಮಗೆ ಸುಲಭವಾಗಲೆಂದು ಈ ಮೂರು ವಿಚಾರದ ಕುರಿತ ಪ್ರಶ್ನೆಗಳನ್ನು ಕಳಿಸಿಕೊಡುತ್ತೇವೆ. ಧೈರ್ಯವಿದ್ದರೆ ಚರ್ಚೆಗೆ ಬರುತ್ತೀರಾ ಪ್ರಧಾನಿ ಮಂತ್ರಿಯವರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಬಹಿರಂಗ ಚಾಲೆಂಜ್ ಮಾಡಿದ್ದಾರೆ. ಜೊತೆಗೆ ಸ್ಕೇರೆಡ್2ಡಿಬೆಟ್ ಎಂಬ ಹ್ಯಾಸ್ ಟ್ಯಾಗ್ ಸಹ ಸೇರಿಸಿದ್ದು ಚರ್ಚೆಗೆ ಭಯವೇ ಎಂದು ಲೇವಡಿ ಮಾಡಿದ್ದಾರೆ.

ಇಂದು ಬೆಳಿಗ್ಗೆ ಮಹರಾಷ್ಟ್ರದ ಲಾತೂರ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪಾಕಿಸ್ತಾನದ ಭಾಷೆಯ ತರವೇ ಮಾತನಾಡುತ್ತಿದೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ರಾಹುಲ್ ಗಾಂಧಿ ಆಗಿದ್ದರೆ ನೇರವಾಗಿ ಕೂತು ಫೇಸ್ ಟು ಫೇಸ್ ಮಾತನಾಡೋಣ ಎಂದು ಆಹ್ವಾನ ನೀಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಚರ್ಚೆಗೆ ಕರೆದಿದ್ದೇನೆ, ಕೇವಲ 20 ನಿಮಿಷ ಮಾತನಾಡಲು ಸಹ ಮೋದಿಯವರಿಗೆ ಧೈರ್ಯವಿಲ್ಲ ಎಂದಿದ್ದಾರೆ.

ರಫೇಲ್ ಯುದ್ಧ ವಿಮಾನಗಳ ಖರೀದಿ ವಿಚಾರದಲ್ಲಿ ಭಾರತದ ಪರವಾಗಿ ಆಫ್‍ಸೆಟ್ ಪಾಲುದಾರನಾಗಿ ಅನಿಲ್ ಅಂಬಾನಿಯ ರಿಲೆಯನ್ಸ್ ಡಿಫೆನ್ಸ್ ಅನ್ನು ತೆಗೆದುಕೊಂಡ ವಿಚಾರದಲ್ಲಿ ಪ್ರಧಾನಿ ಕಾರ್ಯಲಯ ಮಧ್ಯಪ್ರವೇಶ ಮಾಡಿದೆ. ಇಲ್ಲಿ ಅನಿಲ್ ಅಂಬಾನಿಗೆ ಲಾಭ ಮಾಡಿಕೊಡಲು ಇಷ್ಟೆಲ್ಲ ನಡೆದಿರುವುದು ಸ್ಪಷ್ಟವಾಗಿದೆ. ಅದೇ ರೀತಿ ನಮ್ಮ ದೇಶದ ಬ್ಯಾಂಕುಗಳಿಗೆ ಸಾವರಾರು ಕೋಟಿ ರೂಗಳನ್ನು ವಂಚಿಸಿ ಪರಾರಿಯಾಗಿರುವ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ವಿಜಯ್ ಮಲ್ಯರಂತಹ ಆರೋಪಿಗಳನ್ನು ವಾಪಸ್ ಭಾರತಕ್ಕೆ ಕರೆತರಲು ಮೋದಿ ಸರ್ಕಾರ ಹಿಂದೇಟು ಹಾಕುತ್ತಿದೆ. ಅದೇ ರೀತಿ ರಾತ್ರೋರಾತ್ರಿ ತೆಗೆದುಕೊಂಡ ನೋಟು ಅಮಾನ್ಯೀಕರಣವೂ ಸಹ ಜನವಿರೋಧಿ ನೀತಿಯಾಗಿದೆ ಎಂದು ರಾಹುಲ್ ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...