Homeಮುಖಪುಟಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

ಕೊರೊನಾ ವೈರಸ್‌ಗಿಂತ ಬಿಜೆಪಿ ಅಪಾಯಕಾರಿಯೆಂದ ಸಂಸದೆ‌-ಬಿಜೆಪಿಯ ಉತ್ತರವೇನು ಗೊತ್ತೆ?

- Advertisement -
- Advertisement -

ರಕ್ತದಾನ ಶಿಬಿರದಲ್ಲಿ ಮಾತನಾಡುತ್ತಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್, ಬಿಜೆಪಿ ಪಕ್ಷವನ್ನು ಕೊರೊನಾ ವೈರಸ್‌ಗಿಂತ ಅಪಾಯಕಾರಿ ಎಂದು ಸಾರ್ವಜನಿಕವಾಗಿ ಜರಿದಿದ್ದಾರೆ.

“ನಿಮ್ಮ ಕಿವಿ ಮತ್ತು ಕಣ್ಣುಗಳನ್ನು ತೆರೆದಿಡಿ ಯಾಕೆಂದರೆ ನಿಮ್ಮ ಸುತ್ತಲೂ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿ ಜನರು ಇದ್ದಾರೆ. ಬಿಜೆಪಿ ಕೊರೊನಾಗಿಂತಲೂ ಹೆಚ್ಚು ಅಪಾಯಕಾರಿಯಾಗಿದೆ. ಯಾಕೆಂದರೆ ಅವರಿಗೆ ನಮ್ಮ ಸಂಸ್ಕೃತಿ ಅರ್ಥವಾಗುವುದಿಲ್ಲ, ಅವರಿಗೆ ಮಾನವೀಯತೆ ಅರ್ಥವಾಗುವುದಿಲ್ಲ. ಅವರಿಗೆ ನಮ್ಮ ಕಠಿಣ ಪರಿಶ್ರಮದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಅವರಿಗೆ ವ್ಯವಹಾರ ಮಾತ್ರ ತಿಳಿದಿದೆ” ಎಂದು ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: AAP ಯ ದೆಹಲಿ ಮಾದರಿ ಪ್ರಚಾರ ತಂತ್ರ ಬಳಸಲಿರುವ ಮಮತಾ ಬ್ಯಾನರ್ಜಿ

“ಅವರಲ್ಲಿ ಸಾಕಷ್ಟು ಹಣವಿದೆ. ಅವರು ಅದನ್ನು ಎಲ್ಲೆಡೆ ಹಂಚಿ, ತದನಂತರ ಧರ್ಮದ ಆಧಾರದ ಮೇಲೆ ಜನರನ್ನು ಒಡೆದು ಗಲಭೆಗಳನ್ನು ಪ್ರಚೋದಿಸುತ್ತಾರೆ” ಎಂದು ಅವರು ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿಯ ಸಾಮಾಜಿಕ ಜಾಲತಾಣ ಮುಖ್ಯಸ್ಥ ಅಮಿತ್ ಮಾಳವಿಯಾ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಕೆಟ್ಟ ರೀತಿಯ ಲಸಿಕೆ ರಾಜಕಾರಣ ನಡೆಯುತ್ತಿದೆ. ಮೊದಲನೆಯದಾಗಿ ಮಮತಾ ಬ್ಯಾನರ್ಜಿಯ ಸಂಪುಟ ಸಚಿವರಾದ ಸಿದ್ದಿಕುಲ್ಲಾ ಚೌಧರಿ ಲಸಿಕೆಗಳನ್ನು ಸಾಗಿಸುವ ಲಾರಿಗಳನ್ನು ಹಿಡಿದಿದ್ದಾರೆ. ಈಗ ಟಿಎಂಸಿ ಸಂಸದೆ ಬಿಜೆಪಿಯನ್ನು ಕೊರೊನಾಗೆ ಹೋಲಿಸಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶದಲ್ಲಿ ಅಪಪ್ರಚಾರ ಪ್ರಚಾರ ಮಾಡುತ್ತಿದ್ದಾರೆ. ಆದರೆ ಪಿಶಿ (ಆಂಟಿ) ಮೌನವಾಗಿದ್ದಾರೆ. ಯಾಕೆ? ರಾಜಿ ಮಾಡಿಕೊಂಡಿದ್ದಾರೆಯೆ?” ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 6-7 ಸಂಸದರು ಟಿಎಂಸಿ ಸೇರಲಿದ್ದಾರೆ: ಬಿಜೆಪಿಗೆ ಆಘಾತ ನೀಡಿದ ಜ್ಯೋತಿಪ್ರಿಯ ಮಲ್ಲಿಕ್

ಬುಧವಾರ ಕೋಲ್ಕತ್ತಾದಿಂದ ಬಂಕುರಾಕ್ಕೆ ಲಸಿಕೆಗಳನ್ನು ಸಾಗಿಸುತ್ತಿದ್ದ ಆರೋಗ್ಯ ಇಲಾಖೆ ವ್ಯಾನ್ ಬುರ್ದ್ವಾನ್‌ನ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡ ಘಟನೆಯನ್ನಾಗಿದೆ ಅವರು ಉಲ್ಲೇಖಿಸಿದ್ದು. ಬಂಗಾಳದ ಸಚಿವ ಸಿದ್ದಿಕುಲ್ಲಾ ಚೌಧರಿ ಅವರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ಅಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು ಎಂದು ವರದಿಯಾಗಿದೆ. ನಂತರ ಲಸಿಕೆಯ ವಾಹನವನ್ನು ಪೊಲೀಸರು ಬೇರೆ ಮಾರ್ಗದ ಮೂಲಕ ಕಳುಹಿಸಿಕೊಟ್ಟಿದ್ದರು.

ಸಿದ್ದಿಕುಲ್ಲಾ ಚೌಧರಿ ಹೆದ್ದಾರಿ ಪ್ರತಿಭಟನೆಯ ಮೊದಲೇ ಘೋಷಿಸಲಾಗಿತ್ತು ಮತ್ತು ಅದರ ಬಗ್ಗೆ ಪೊಲೀಸರಿಗೆ ಹಿಂದೆಯೆ ತಿಳಿಸಲಾಗಿತ್ತು ಎನ್ನಲಾಗಿದೆ. ಆದರೆ ಆ ಮಾರ್ಗದಲ್ಲಿ ಲಸಿಕೆಗಳಿರುವ ವಾಹನ ಆಗಮಿಸುತ್ತಿರುವುದನ್ನು ಪೊಲೀಸರಿ ಮಾಹಿತಿ ನೀಡಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಚುನಾವಣೆ ಸೋತ ದಿನ ಬಿಜೆಪಿ ಕೂಡಾ ಟ್ರಂಪ್ ಬೆಂಬಲಿಗರಂತೆಯೆ ವರ್ತಿಸುತ್ತದೆ: ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೌರಿ ತಂಡದವರೇ ಎಲ್ಲರಿಗೂ ನಮಸ್ಕಾರ.
    ನಿಮ್ಮ ಬರವಣಿಗೆಯ ಶೈಲಿಯೇ ಸ್ಪಷ್ಟವಾಗಿ ಹೇಳುತ್ತಿದೆ “ನೀವು ದೇಶ ದ್ರೋಹಿಗಳಿಂದ ದುಡ್ಡು ತೆಗೆದುಕೊಂಡು ದೇಶದ ವಿರುದ್ಧವಾಗಿ ಬರೆಯುತ್ತಿದ್ದೀರೆಂದು” ನಾಚಿಕೆಯಾಗಬೇಕು ನಿಮ್ಮಂಥ ಪತ್ರಿಕೋದ್ಯಮಕ್ಕೆ.
    ಇನ್ನು ಮುಂದಾದರೂ ನಿಮ್ಮ ಜ್ಞಾನವನ್ನು ಸರಿಯಾದ ಪಥದಲ್ಲಿ ಬಳಸಿಕೊಳ್ಳಿ, ದೇವರು ಒಳ್ಳೆಯದನ್ನು ಮಾಡಲಿ. ಸ್ವಲ್ಪ ಪಾಪಕರ್ಮ ಕಡಿಮೆಯಾಗಬಹುದು.
    ಇಲ್ಲಿಯ ಹಿಂದುತ್ವ ನಿಮಗೆ ಕಸಿವಿಸಿಯಾಗುತ್ತಿದ್ದರೆ ಹೋಗಿ ಆಫ್ಘಾನಿಸ್ತಾನವನ್ನು ಸೇರಿಕೊಳ್ಳಿ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...