Homeಮುಖಪುಟಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞ ಸಮಿತಿ ರಚಿಸಿ ನೀಡಿದ ಆದೇಶವನ್ನು ಸ್ವಾಗತಿಸಿ, "ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ" ಎಂದು ತಿಳಿಸಿದರು.

- Advertisement -
- Advertisement -

ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ 9ನೇ ಸುತ್ತಿನ ಮಾತುಕತೆಯ ನಡೆಯುವುದೋ ಇಲ್ಲವೋ ಎಂಬ ಗೊಂದಲದ ನಡುವೆಯೇ ವಿಜ್ಞಾನ್‌ ಭವನದಲ್ಲಿ ಹೋರಾಟ ನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಸಭೆ ನಡೆಯಿತು.

ಸರ್ಕಾರದ ಪ್ರತಿನಿಧಿಗಳಾಗಿ ರೈಲ್ವೆ ಹಾಗೂ ಆಹಾರ ಸಚಿವ ಪಿಯೂಷ್‌ ಗೋಯಲ್‌, ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಮತ್ತು ವಾಣಿಜ್ಯ ರಾಜ್ಯ ಖಾತೆ ಸಚಿವ ಸೋಮ್‌ ಪ್ರಕಾಶ್‌ ಸಭೆಯಲ್ಲಿ ಪಾಲ್ಗೊಂಡಿದ್ದರು. ರೈತರ ಪ್ರತಿನಿಧಿಗಳಾಗಿ 40 ಸಂಘಟನೆಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೃಷಿ ಸಚಿವ ತೋಮರ್‌ ಮಾತುಕತೆಗೆ ಚಾಲನೆ ನೀಡಿ, “ನೀವು ಸರ್ಕಾರ ಪಟ್ಟು ಹಿಡಿದಿದೆ, ಇದನ್ನು ಅಹಂಕಾರದ ವಿಷಯವನ್ನಾಗಿ ಮಾಡಿಕೊಂಡಿದೆ ಎಂದು ಹೇಳುತ್ತೀರಿ. ಆದರೆ ನಾವು ನಿಮ್ಮ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದೇವೆ. ಕಾಯ್ದೆ ಹಿಂಪಡೆಯುವ ಒಂದು ಬೇಡಿಕೆಗೆ ಅಂಟಿಕೊಳ್ಳುವ ಬದಲು ಸ್ವಲ್ಪ ಮೃದು ಧೋರಣೆ ತಳೆಯಬಾರದೇಕೆ?” ಎಂದು ರೈತ ಮುಖಂಡರಿಗೆ ಕೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ನಾಯಕರು ಮಾಧ್ಯಮಗಳಿಗೆ ತಿಳಿಸಿದರು.

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞರ ಸಮಿತಿ ರಚಿಸಿ ಎಂದು ನೀಡಿದ ಆದೇಶವನ್ನು ಸ್ವಾಗತಿಸಿ, “ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಜ.19ರಂದು ಕರೆಯಲಾಗಿರುವ ಈ ತಜ್ಞರ ಸಮಿತಿ ಸಭೆಯಲ್ಲಿ ರೈತ ಮುಖಂಡರು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಸಮಿತಿಯ ಸದಸ್ಯರು ಈಗಾಗಲೇ ಕಾಯ್ದೆ ಪರವಾಗಿರುವುದಾಗಿ ತಮ್ಮ ಹೇಳಿಕೆಗಳಿಂದ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನಾವು ಸಮಿತಿಯ ಬದಲು ಸರ್ಕಾರದೊಂದಿಗೇ ಮಾತುಕತೆ ಮುಂದುವರೆಸಲು ಸಿದ್ಧರಿದ್ದೇವೆ ಎಂದು ರೈತ ನಾಯಕರು ತಿಳಿಸಿದ್ದಾರೆ.

ರೈತ ಹೋರಾಟದ ಬಗ್ಗೆ ಕಾಳಜಿ ತೋರಿ, ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯಿಂದ ಈಗಾಗಲೇ ಭೂಪಿಂದರ್‌ ಸಿಂಗ್‌ ಮಾನ್‌ ಹೊರಬಂದಿದ್ದು, ಇನ್ನೊಬ್ಬ ಸದಸ್ಯರು ಹೊರಬರುವ ನಿರೀಕ್ಷೆ ಇದೆ ಎಂದು ರೈತ ಸಂಘಟನೆಗಳ ನಾಯಕರು ಹೇಳಿದ್ದಾರೆ.

ಈ ಸಭೆಯಲ್ಲಿ ರೈತ ಮುಖಂಡರು ಯಾವುದೇ ರೀತಿಯಲ್ಲೂ ಸರ್ಕಾರದ ಮನವಿಗಳಿಗೆ ಸ್ಪಂದಿಸದೇ ಸಭೆ ಅಂತ್ಯಗೊಂಡಿತು.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...