Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...